ಕ್ರೀಡೆ

PAK vs BAN 1st test: ಪಾಕ್‌ ಸೋಲಿಸಿ ಐತಿಹಾಸಿಕ ದಾಖಲೆ ಬರೆದ ಬಾಂಗ್ಲಾದೇಶ

ರಾವಲ್ಪಿಂಡಿ: ಇಲ್ಲಿನ ರಾವಲ್ಪಿಂಡಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ ಕ್ರಿಕೆಟ್‌ನಲ್ಲಿ ಪಾಕ್‌ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಬಾಂಗ್ಲಾದೇಶ ಗೆಲುವು ದಾಖಲಿಸಿತು.

ಆ ಮೂಲಕ ಪಾಕ್‌ ನೆಲದಲ್ಲಿ ಮೊದಲ ಟೆಸ್ಟ್‌ ಗೆಲುವು ದಾಖಲಿಸಿದ ಹೆಗ್ಗಳಿಕೆಗೆ ಬಾಂಗ್ಲಾ ಪಾತ್ರವಾಯಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ ಕಳೆದುಕೊಂಡು 448 ರನ್‌ಗಳಿಸಿ ಡಿಕ್ಲೇರ್‌ ಘೋಷಿಸಿತು. ದ್ವಿಶತಕ ಅಂಚಿನಲ್ಲಿದ್ದ ಮೊಹಮ್ಮದ್‌ ರಿಜ್ವಾನ್‌ 171(239) ರನ್‌ ಗಳಿಸಿ ಸ್ಕ್ರೀಜ್‌ನಲ್ಲಿದ್ದರು. ಈ ವೇಳೆ ಡಿಕ್ಲೇರ್‌ ಘೋಷಿಸಿದ ನಾಯಕನ ವಿರುದ್ಧ ಸಿಡಿಮಿಡಿಗೊಂಡು ಬ್ಯಾಟ್‌ ಬೀಸಿ ಹೊರನಡೆದರು. ಸೌದ್‌ ಶಕೀಲ್‌ 141(261) ರನ್‌ ಬಾರಿಸಿ ತಂಡಕ್ಕೆ ನೆರವಾದರು. ಬಾಂಗ್ಲಾ ಪರವಾಗಿ ಇಸ್ಲಾಂ ಹಾಗೂ ಮಹ್ಮೂದ್‌ ತಲಾ ಎರಡು ವಿಕೆಟ್‌ ಕಬಳಿಸಿ ಮಿಂಚಿದರು.

ಬೃಹತ್‌ ಮೊತ್ತ ದಾಖಲಿಸಿ ಗೆಲುವಿನ ನಿರೀಕ್ಷೆಯಲ್ಲಿದ್ದ ಪಾಕಿಸ್ತಾನ ಆಟಗಾರರ ಎಲ್ಲಾ ಲೆಕ್ಕಾಚಾರಗಳನ್ನು ಬಾಂಗ್ಲಾ ಆಟಗಾರರು ತಲೆ ಕೆಳಗೆ ಮಾಡಿದರು. ಮುಷ್ಪಿಕರ್‌ ರಹೀಮ್‌ ಅವರು 191(341) ರನ್‌ಗಳಿಸಿ ದ್ವಿಶತಕ ವಂಚಿತರಾದರು. ಬಾಂಗ್ಲಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 167.3 ಓವರ್‌ಗಳಿಗೆ ಆಲ್‌ಔಟ್‌ ಆಗಿ 565 ರನ್‌ ಗಳಿಸಿ ಮುನ್ನಡೆ ಸಾಧಿಸಿತು. ಪಾಕ್‌ ಪರ ನಸೀಮ್‌ ಮೂರು, ಮೊಹಮ್ಮದ್‌ ಅಲಿ, ಶಾಹಿನ್‌ ಶಾ ಅಫ್ರಿದಿ ಹಾಗೂ ಶಹಜಾದ್‌ ತಲಾ ಎರಡು ವಿಕೆಟ್‌ ಕಬಳಿಸಿದರು.

ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಪಾಕ್‌ಗೆ ಬಾಂಗ್ಲಾ ಬೌಲರ್‌ಗಳು ಕಾಡಿದರು. ಮೆಹದಿ ಹಸನ್‌ ಪ್ರಮುಖ ನಾಲ್ಕು ವಿಕೆಟ್‌ ಕಬಳಿಸಿದರೇ, ಹಸನ್‌ ಮಹ್ಮೂದ್‌ ಮೂರು ವಿಕೆಟ್‌ ಪಡೆದರು. ರಜ್ವಾನ್‌ 51(80) ರನ್‌ ಗಳಿಸಿದ್ದೇ ಪಾಕ್‌ ಪರ ಹೆಚ್ಚಿನ ರನ್‌ ಆಗಿತ್ತು.

ಅಂತಿಮವಾಗಿ ಪಾಕ್‌ ಕೇವಲ 30ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಬಾಂಗ್ಲಾ ಯಾವುದೇ ವಿಕೆಟ್‌ ನಷ್ಟವಿಲ್ಲದೇ ಗುರಿ ಮುಟ್ಟಿ ಐತಿಹಾಸಿಕ ಗೆಲುವಿಗೆ ಸಾಕ್ಷಿಯಾದರು.

ಪಂದ್ಯಶ್ರೇಷ್ಠ: ಮುಷ್ಪಿಕರ್‌ ರಹೀಮ್‌

ಸಂಕ್ಷಿಪ್ತ ಸ್ಕೋರ್‌:

ಪಾಕಿಸ್ತಾನ್‌ ಮೊದಲ ಇನ್ನಿಂಗ್ಸ್‌: 448ಕ್ಕೆ 6 (113 ಓವರ್‌)
ಬಾಂಗ್ಲಾ ಮೊದಲ ಇನ್ನಿಂಗ್ಸ್‌: 565ಕ್ಕೆ 10 (167.3 ಓವರ್‌)
ಪಾಕಿಸ್ತಾನ್‌ ಎರಡನೇ ಇನ್ನಿಂಗ್ಸ್‌: 146ಕ್ಕೆ 10 (55.5 ಓವರ್‌)
ಬಾಂಗ್ಲಾ ಎರಡನೇ ಇನ್ನಿಂಗ್ಸ್‌: 30ಕ್ಕೆ 0 (6.3 ಓವರ್‌)

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

23 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

23 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

24 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

24 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

24 hours ago