ಕ್ರೀಡೆ

ಪಾಕಿಸ್ತಾನ ಎ ಮುಡಿಗೆ ಉದಯೋನ್ಮುಖ ಏಷ್ಯಾ ಕಪ್ 2023 ಪ್ರಶಸ್ತಿ.! : ಭಾರತಕ್ಕೆ ನಿರಾಸೆ

ಕೊಲಂಬೋ: ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023ರ ಫೈನಲ್‌ನಲ್ಲಿ ಪಾಕಿಸ್ತಾನ ಎ ತಂಡವು ಭಾರತ ಎ ತಂಡವನ್ನು 128 ರನ್‌ಗಳಿಂದ ಸೋಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ಎ ತಂಡ ಭಾರತ ತಂಡಕ್ಕೆ 353 ರನ್ ಗಳ ಗುರಿ ನೀಡಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 224 ರನ್‌ಗಳಿಗೆ ಸೋಲು ಕಂಡಿತು. ಭಾರತದ ಪರ ಅಭಿಷೇಕ್ ಶರ್ಮಾ ಗರಿಷ್ಠ 61 ರನ್ ಗಳಿಸಿದರು. ಅಭಿಷೇಕ್ ಬಿಟ್ಟರೆ ಭಾರತದ ಯಾವುದೇ ಆಟಗಾರ ಅರ್ಧಶತಕ ಗಳಿಸಲು ಸಾಧ್ಯವಾಗಲಿಲ್ಲ. ಪಾಕಿಸ್ತಾನ ಪರ ಟೈಬ್ ತಾಹಿರ್ ಶತಕ ಬಾರಿಸಿದರು.

ಪಾಕಿಸ್ತಾನ ನೀಡಿದ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಸಾಯಿ ಸುದರ್ಶನ್ ಮತ್ತು ಅಭಿಷೇಕ್ ಓಪನಿಂಗ್ ನೀಡಿದರು. ಸುದರ್ಶನ್ 28 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ಅಭಿಷೇಕ್ ಅರ್ಧಶತಕ ಗಳಿಸಿದರು. 51 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 61 ರನ್ ಗಳಿಸಿದರು. ನಿಕಿನ್ ಜೋಸ್ 11 ರನ್ ಗಳಿಸಿದರು. ನಾಯಕ ಯಶ್ ಧುಲ್ 4 ಬೌಂಡರಿಗಳ ನೆರವಿನಿಂದ 39 ರನ್ ಗಳಿಸಿದರು. ನಿಶಾಂತ್ ಸಿಂಧು 9 ರನ್ ಗಳಿಸಿ ಔಟಾದರು. ರಿಯಾನ್ ಪರಾಗ್ 14 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಹರ್ಷಿತ್ ರಾಣಾ 13 ರನ್ ಕೊಡುಗೆ ನೀಡಿದರು. ರಾಜ್ಯವರ್ಧನ್ 11 ರನ್ ಗಳಿಸಿ ಔಟಾದರು. ಮಾನವ್ ಸುತಾರ್ 7 ರನ್ ಗಳಿಸಿ ಅಜೇಯರಾಗಿ ಉಳಿದರು.

ಪಾಕ್ ಪರ ಸುಫಿಯಾನ್ ಮುಕಿಮ್ 10 ಓವರ್‌ಗಳಲ್ಲಿ 66 ರನ್ ನೀಡಿ 3 ವಿಕೆಟ್ ಪಡೆದರು. ಅರ್ಷದ್ ಇಕ್ಬಾಲ್ 7 ಓವರ್ ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು. ಮೆಹ್ರಾನ್ ಮುಮ್ತಾಜ್ ಮತ್ತು ಮೊಹಮ್ಮದ್ ವಾಸಿಂ ಜೂನಿಯರ್ ತಲಾ ಎರಡು ವಿಕೆಟ್ ಪಡೆದರು.

ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಎ ತಂಡ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ತಂಡದ ಪರ ಟೈಬ್ ತಾಹಿರ್ ಶತಕ ಗಳಿಸಿದರು. ಅವರು 71 ಎಸೆತಗಳಲ್ಲಿ 108 ರನ್ ಗಳಿಸಿದರು. ತಾಹಿರ್ ಅವರ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ಆರಂಭಿಕ ಆಟಗಾರ ಸಾಹಿಬ್ಜಾದಾ ಫರ್ಹಾನ್ 62 ಎಸೆತಗಳಲ್ಲಿ 65 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ಅಯೂಬ್ 51 ಎಸೆತಗಳಲ್ಲಿ 59 ರನ್ ಗಳಿಸಿದರು. ಉಮರ್ ಯೂಸುಫ್ 35 ರನ್ ಕೊಡುಗೆ ನೀಡಿದರು. ಮುಬಾಸಿರ್ ಖಾನ್ 47 ಎಸೆತಗಳಲ್ಲಿ 35 ರನ್ ಗಳಿಸಿದರು. ಮೊಹಮ್ಮದ್ ವಾಸಿಂ ಜೂನಿಯರ್ 17 ರನ್ ಗಳಿಸಿ ಅಜೇಯರಾಗಿ ಉಳಿದರು.

ಭಾರತ ಎ ಪರ ಬೌಲಿಂಗ್ ಮಾಡುತ್ತಿದ್ದ ರಿಯಾನ್ ಪರಾಗ್ 4 ಓವರ್ ಗಳಲ್ಲಿ 24 ರನ್ ನೀಡಿ 2 ವಿಕೆಟ್ ಪಡೆದರು. ರಾಜ್ಯವರ್ಧನ್ 6 ಓವರ್ ಗಳಲ್ಲಿ 48 ರನ್ ನೀಡಿ 2 ವಿಕೆಟ್ ಪಡೆದರು. ಹರ್ಷಿತ್ ರಾಣಾ 6 ಓವರ್ ಗಳಲ್ಲಿ 51 ರನ್ ನೀಡಿ ಒಂದು ವಿಕೆಟ್ ಪಡೆದರು. ಮಾನವ್ ಸುತಾರ್ ಮತ್ತು ನಿಶಾಂತ್ ಸಿಂಧು ತಲಾ ಒಂದು ವಿಕೆಟ್ ಪಡೆದರು.

andolanait

Recent Posts

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…

1 hour ago

ಓದುಗರ ಪತ್ರ: ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…

1 hour ago

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಕೋತಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…

1 hour ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಾಲು ಇರಲಿ

ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…

1 hour ago

ರಾಜಾಸೀಟ್‌ನಲ್ಲಿ ಸ್ಥಾಪನೆಯಾಗಲಿದೆ ಫುಡ್‌ ಕೋರ್ಟ್‌

ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…

1 hour ago

ಜಲಾಶಯಗಳ ಹಿನ್ನೀರಿನಲ್ಲಿ ರಿವರ್ ಟರ್ನ್ ಪಕ್ಷಿಗಳ ಕಲರವ

ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…

1 hour ago