ಕೊಲಂಬೋ: ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023ರ ಫೈನಲ್ನಲ್ಲಿ ಪಾಕಿಸ್ತಾನ ಎ ತಂಡವು ಭಾರತ ಎ ತಂಡವನ್ನು 128 ರನ್ಗಳಿಂದ ಸೋಲಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ಎ ತಂಡ ಭಾರತ ತಂಡಕ್ಕೆ 353 ರನ್ ಗಳ ಗುರಿ ನೀಡಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 224 ರನ್ಗಳಿಗೆ ಸೋಲು ಕಂಡಿತು. ಭಾರತದ ಪರ ಅಭಿಷೇಕ್ ಶರ್ಮಾ ಗರಿಷ್ಠ 61 ರನ್ ಗಳಿಸಿದರು. ಅಭಿಷೇಕ್ ಬಿಟ್ಟರೆ ಭಾರತದ ಯಾವುದೇ ಆಟಗಾರ ಅರ್ಧಶತಕ ಗಳಿಸಲು ಸಾಧ್ಯವಾಗಲಿಲ್ಲ. ಪಾಕಿಸ್ತಾನ ಪರ ಟೈಬ್ ತಾಹಿರ್ ಶತಕ ಬಾರಿಸಿದರು.
ಪಾಕಿಸ್ತಾನ ನೀಡಿದ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಸಾಯಿ ಸುದರ್ಶನ್ ಮತ್ತು ಅಭಿಷೇಕ್ ಓಪನಿಂಗ್ ನೀಡಿದರು. ಸುದರ್ಶನ್ 28 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ಅಭಿಷೇಕ್ ಅರ್ಧಶತಕ ಗಳಿಸಿದರು. 51 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 61 ರನ್ ಗಳಿಸಿದರು. ನಿಕಿನ್ ಜೋಸ್ 11 ರನ್ ಗಳಿಸಿದರು. ನಾಯಕ ಯಶ್ ಧುಲ್ 4 ಬೌಂಡರಿಗಳ ನೆರವಿನಿಂದ 39 ರನ್ ಗಳಿಸಿದರು. ನಿಶಾಂತ್ ಸಿಂಧು 9 ರನ್ ಗಳಿಸಿ ಔಟಾದರು. ರಿಯಾನ್ ಪರಾಗ್ 14 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಹರ್ಷಿತ್ ರಾಣಾ 13 ರನ್ ಕೊಡುಗೆ ನೀಡಿದರು. ರಾಜ್ಯವರ್ಧನ್ 11 ರನ್ ಗಳಿಸಿ ಔಟಾದರು. ಮಾನವ್ ಸುತಾರ್ 7 ರನ್ ಗಳಿಸಿ ಅಜೇಯರಾಗಿ ಉಳಿದರು.
ಪಾಕ್ ಪರ ಸುಫಿಯಾನ್ ಮುಕಿಮ್ 10 ಓವರ್ಗಳಲ್ಲಿ 66 ರನ್ ನೀಡಿ 3 ವಿಕೆಟ್ ಪಡೆದರು. ಅರ್ಷದ್ ಇಕ್ಬಾಲ್ 7 ಓವರ್ ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು. ಮೆಹ್ರಾನ್ ಮುಮ್ತಾಜ್ ಮತ್ತು ಮೊಹಮ್ಮದ್ ವಾಸಿಂ ಜೂನಿಯರ್ ತಲಾ ಎರಡು ವಿಕೆಟ್ ಪಡೆದರು.
ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಎ ತಂಡ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ತಂಡದ ಪರ ಟೈಬ್ ತಾಹಿರ್ ಶತಕ ಗಳಿಸಿದರು. ಅವರು 71 ಎಸೆತಗಳಲ್ಲಿ 108 ರನ್ ಗಳಿಸಿದರು. ತಾಹಿರ್ ಅವರ ಇನ್ನಿಂಗ್ಸ್ನಲ್ಲಿ 12 ಬೌಂಡರಿ ಮತ್ತು 4 ಸಿಕ್ಸರ್ಗಳು ಸೇರಿದ್ದವು. ಆರಂಭಿಕ ಆಟಗಾರ ಸಾಹಿಬ್ಜಾದಾ ಫರ್ಹಾನ್ 62 ಎಸೆತಗಳಲ್ಲಿ 65 ರನ್ ಗಳಿಸಿದರು. ಅವರ ಇನ್ನಿಂಗ್ಸ್ನಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್ಗಳು ಸೇರಿದ್ದವು. ಅಯೂಬ್ 51 ಎಸೆತಗಳಲ್ಲಿ 59 ರನ್ ಗಳಿಸಿದರು. ಉಮರ್ ಯೂಸುಫ್ 35 ರನ್ ಕೊಡುಗೆ ನೀಡಿದರು. ಮುಬಾಸಿರ್ ಖಾನ್ 47 ಎಸೆತಗಳಲ್ಲಿ 35 ರನ್ ಗಳಿಸಿದರು. ಮೊಹಮ್ಮದ್ ವಾಸಿಂ ಜೂನಿಯರ್ 17 ರನ್ ಗಳಿಸಿ ಅಜೇಯರಾಗಿ ಉಳಿದರು.
ಭಾರತ ಎ ಪರ ಬೌಲಿಂಗ್ ಮಾಡುತ್ತಿದ್ದ ರಿಯಾನ್ ಪರಾಗ್ 4 ಓವರ್ ಗಳಲ್ಲಿ 24 ರನ್ ನೀಡಿ 2 ವಿಕೆಟ್ ಪಡೆದರು. ರಾಜ್ಯವರ್ಧನ್ 6 ಓವರ್ ಗಳಲ್ಲಿ 48 ರನ್ ನೀಡಿ 2 ವಿಕೆಟ್ ಪಡೆದರು. ಹರ್ಷಿತ್ ರಾಣಾ 6 ಓವರ್ ಗಳಲ್ಲಿ 51 ರನ್ ನೀಡಿ ಒಂದು ವಿಕೆಟ್ ಪಡೆದರು. ಮಾನವ್ ಸುತಾರ್ ಮತ್ತು ನಿಶಾಂತ್ ಸಿಂಧು ತಲಾ ಒಂದು ವಿಕೆಟ್ ಪಡೆದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…