ಕ್ರೀಡೆ

ಪಾಕಿಸ್ತಾನ ಎ ಮುಡಿಗೆ ಉದಯೋನ್ಮುಖ ಏಷ್ಯಾ ಕಪ್ 2023 ಪ್ರಶಸ್ತಿ.! : ಭಾರತಕ್ಕೆ ನಿರಾಸೆ

ಕೊಲಂಬೋ: ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023ರ ಫೈನಲ್‌ನಲ್ಲಿ ಪಾಕಿಸ್ತಾನ ಎ ತಂಡವು ಭಾರತ ಎ ತಂಡವನ್ನು 128 ರನ್‌ಗಳಿಂದ ಸೋಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ಎ ತಂಡ ಭಾರತ ತಂಡಕ್ಕೆ 353 ರನ್ ಗಳ ಗುರಿ ನೀಡಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 224 ರನ್‌ಗಳಿಗೆ ಸೋಲು ಕಂಡಿತು. ಭಾರತದ ಪರ ಅಭಿಷೇಕ್ ಶರ್ಮಾ ಗರಿಷ್ಠ 61 ರನ್ ಗಳಿಸಿದರು. ಅಭಿಷೇಕ್ ಬಿಟ್ಟರೆ ಭಾರತದ ಯಾವುದೇ ಆಟಗಾರ ಅರ್ಧಶತಕ ಗಳಿಸಲು ಸಾಧ್ಯವಾಗಲಿಲ್ಲ. ಪಾಕಿಸ್ತಾನ ಪರ ಟೈಬ್ ತಾಹಿರ್ ಶತಕ ಬಾರಿಸಿದರು.

ಪಾಕಿಸ್ತಾನ ನೀಡಿದ ಗುರಿಯನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಸಾಯಿ ಸುದರ್ಶನ್ ಮತ್ತು ಅಭಿಷೇಕ್ ಓಪನಿಂಗ್ ನೀಡಿದರು. ಸುದರ್ಶನ್ 28 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ಅಭಿಷೇಕ್ ಅರ್ಧಶತಕ ಗಳಿಸಿದರು. 51 ಎಸೆತಗಳಲ್ಲಿ 5 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 61 ರನ್ ಗಳಿಸಿದರು. ನಿಕಿನ್ ಜೋಸ್ 11 ರನ್ ಗಳಿಸಿದರು. ನಾಯಕ ಯಶ್ ಧುಲ್ 4 ಬೌಂಡರಿಗಳ ನೆರವಿನಿಂದ 39 ರನ್ ಗಳಿಸಿದರು. ನಿಶಾಂತ್ ಸಿಂಧು 9 ರನ್ ಗಳಿಸಿ ಔಟಾದರು. ರಿಯಾನ್ ಪರಾಗ್ 14 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಹರ್ಷಿತ್ ರಾಣಾ 13 ರನ್ ಕೊಡುಗೆ ನೀಡಿದರು. ರಾಜ್ಯವರ್ಧನ್ 11 ರನ್ ಗಳಿಸಿ ಔಟಾದರು. ಮಾನವ್ ಸುತಾರ್ 7 ರನ್ ಗಳಿಸಿ ಅಜೇಯರಾಗಿ ಉಳಿದರು.

ಪಾಕ್ ಪರ ಸುಫಿಯಾನ್ ಮುಕಿಮ್ 10 ಓವರ್‌ಗಳಲ್ಲಿ 66 ರನ್ ನೀಡಿ 3 ವಿಕೆಟ್ ಪಡೆದರು. ಅರ್ಷದ್ ಇಕ್ಬಾಲ್ 7 ಓವರ್ ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು. ಮೆಹ್ರಾನ್ ಮುಮ್ತಾಜ್ ಮತ್ತು ಮೊಹಮ್ಮದ್ ವಾಸಿಂ ಜೂನಿಯರ್ ತಲಾ ಎರಡು ವಿಕೆಟ್ ಪಡೆದರು.

ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಎ ತಂಡ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತು. ತಂಡದ ಪರ ಟೈಬ್ ತಾಹಿರ್ ಶತಕ ಗಳಿಸಿದರು. ಅವರು 71 ಎಸೆತಗಳಲ್ಲಿ 108 ರನ್ ಗಳಿಸಿದರು. ತಾಹಿರ್ ಅವರ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ಆರಂಭಿಕ ಆಟಗಾರ ಸಾಹಿಬ್ಜಾದಾ ಫರ್ಹಾನ್ 62 ಎಸೆತಗಳಲ್ಲಿ 65 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿದ್ದವು. ಅಯೂಬ್ 51 ಎಸೆತಗಳಲ್ಲಿ 59 ರನ್ ಗಳಿಸಿದರು. ಉಮರ್ ಯೂಸುಫ್ 35 ರನ್ ಕೊಡುಗೆ ನೀಡಿದರು. ಮುಬಾಸಿರ್ ಖಾನ್ 47 ಎಸೆತಗಳಲ್ಲಿ 35 ರನ್ ಗಳಿಸಿದರು. ಮೊಹಮ್ಮದ್ ವಾಸಿಂ ಜೂನಿಯರ್ 17 ರನ್ ಗಳಿಸಿ ಅಜೇಯರಾಗಿ ಉಳಿದರು.

ಭಾರತ ಎ ಪರ ಬೌಲಿಂಗ್ ಮಾಡುತ್ತಿದ್ದ ರಿಯಾನ್ ಪರಾಗ್ 4 ಓವರ್ ಗಳಲ್ಲಿ 24 ರನ್ ನೀಡಿ 2 ವಿಕೆಟ್ ಪಡೆದರು. ರಾಜ್ಯವರ್ಧನ್ 6 ಓವರ್ ಗಳಲ್ಲಿ 48 ರನ್ ನೀಡಿ 2 ವಿಕೆಟ್ ಪಡೆದರು. ಹರ್ಷಿತ್ ರಾಣಾ 6 ಓವರ್ ಗಳಲ್ಲಿ 51 ರನ್ ನೀಡಿ ಒಂದು ವಿಕೆಟ್ ಪಡೆದರು. ಮಾನವ್ ಸುತಾರ್ ಮತ್ತು ನಿಶಾಂತ್ ಸಿಂಧು ತಲಾ ಒಂದು ವಿಕೆಟ್ ಪಡೆದರು.

andolanait

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

11 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

11 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

11 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

11 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

11 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago