ಕ್ರೀಡೆ

ವಿಶ್ವಕಪ್ ವೇಳಾಪಟ್ಟಿ ಬದಲಾವಣೆಗೆ ಪಾಕಿಸ್ತಾನ ಸಮ್ಮತಿ: ಅ.14ರಂದು ಭಾರತ ವಿರುದ್ಧ ಪಂದ್ಯ

ನವದೆಹಲಿ : 2023ರ ಏಕದಿನ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಣದ ಪಂದ್ಯವನ್ನು ಐಸಿಸಿ ಮೂಲ ವೇಳಾಪಟ್ಟಿ ಅಕ್ಟೋಬರ್ 15ರ ಬದಲಿಗೆ ಅಕ್ಟೋಬರ್ 14ರಂದು ಆಡಲಾಗುತ್ತದೆ. ಐಸಿಸಿ ಈ ಕುರಿತು ಇನ್ನಷ್ಟೇ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು, ಈ ವಾರದ ಅಂತ್ಯಕ್ಕೆ ವೇಳಾಪಟ್ಟಿ ಪ್ರಕಟವಾಗಬಹುದು.

ಇಎಸ್ಪಿಎನ್ ಕ್ರಿಕ್ಇನ್ಫೋ ಪ್ರಕಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ದಿನಾಂಕ ಬದಲಾವಣೆಗೆ ಒಪ್ಪಿಕೊಂಡಿದೆ. ಪಂದ್ಯವು ಅಹಮದಾಬಾದ್ನಲ್ಲಿಯೇ ನಡೆಯಲಿದೆ.

ವಿಶ್ವಕಪ್ನ ಅತ್ಯಂತ ಪ್ರಮುಖ ಪಂದ್ಯದಲ್ಲಿನ ದಿನಾಂಕ ಬದಲಾವಣೆಯು ಪಾಕಿಸ್ತಾನದ ಮುಂದಿನ ಪಂದ್ಯದ ಮೇಲೆ ಪರಿಣಾಮಬೀರುತ್ತದೆ. ಪಾಕ್ ಆಡಲಿರುವ ಶ್ರೀಲಂಕಾ ವಿರುದ್ಧ ಪಂದ್ಯವು ಹೈದರಾಬಾದ್ನಲ್ಲೇ ನಡೆಯಲಿದ್ದು, ಆದರೆ ಅಕ್ಟೋಬರ್ 12ರ ಬದಲಿಗೆ ಅ.10ರಂದು ನಡೆಯಲಿದೆ. ಪಾಕ್ಗೆ ಎರಡು ಪಂದ್ಯಗಳ ನಡುವೆ ಸಾಕಷ್ಟು ಅಂತರ ಇರಲಿದೆ.

ಭಾರತ-ಪಾಕಿಸ್ತಾನ ನಡುವೆ ಅ.15ರಂದು ವಿಶ್ವಕಪ್ ಪಂದ್ಯ ನಿಗದಿಯಾಗಿದೆ. ಆದರೆ ಈ ದಿನ ನವರಾತ್ರಿ ಉತ್ಸವದ ಮೊದಲ ದಿನವಾಗಿದೆ. ಈ ದಿನ ಸಾಕಷ್ಟು ಭದ್ರತೆ ನೀಡಲು ಕಷ್ಟವಾಗುತ್ತದೆ ಎಂದು ಸ್ಥಳೀಯ ಪೊಲೀಸರು ಅಳಲು ತೋಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಪಿಸಿಬಿ ಬದಲಾವಣೆಯ ಕುರಿತಂತೆ ಐಸಿಸಿಗೆ ಪತ್ರ ಬರೆದಿದ್ದು, ಪಿಸಿಬಿ ಇದಕ್ಕೆ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.

ವೇಳಾಪಟ್ಟಿ ಬದಲಾವಣೆಗೆ ನವರಾತ್ರಿ ಉತ್ಸವ ಕಾರಣವಲ್ಲ ಎಂದಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಕಳೆದ ವಾರ ಹಲವು ಸದಸ್ಯ ರಾಷ್ಟ್ರಗಳು ವೇಳಾಪಟ್ಟಿ ಬದಲಾವಣೆಗೆ ಕೋರಿದ್ದರು. ಕೆಲವು ಬದಲಾವಣೆ ಮಾಡಲಾಗಿದೆ ಎಂದರು.

andolanait

Recent Posts

ಓದುಗರ ಪತ್ರ | ಹತ್ತಿ ಬೆಳೆಗಾರರ ಸಮಸ್ಯೆ ಪರಿಹರಿಸಿ

ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…

13 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.14 ಶನಿವಾರ

2 hours ago

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

12 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

13 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

13 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

14 hours ago