ನವದೆಹಲಿ : 2023ರ ಏಕದಿನ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಣದ ಪಂದ್ಯವನ್ನು ಐಸಿಸಿ ಮೂಲ ವೇಳಾಪಟ್ಟಿ ಅಕ್ಟೋಬರ್ 15ರ ಬದಲಿಗೆ ಅಕ್ಟೋಬರ್ 14ರಂದು ಆಡಲಾಗುತ್ತದೆ. ಐಸಿಸಿ ಈ ಕುರಿತು ಇನ್ನಷ್ಟೇ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು, ಈ ವಾರದ ಅಂತ್ಯಕ್ಕೆ ವೇಳಾಪಟ್ಟಿ ಪ್ರಕಟವಾಗಬಹುದು.
ಇಎಸ್ಪಿಎನ್ ಕ್ರಿಕ್ಇನ್ಫೋ ಪ್ರಕಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ದಿನಾಂಕ ಬದಲಾವಣೆಗೆ ಒಪ್ಪಿಕೊಂಡಿದೆ. ಪಂದ್ಯವು ಅಹಮದಾಬಾದ್ನಲ್ಲಿಯೇ ನಡೆಯಲಿದೆ.
ವಿಶ್ವಕಪ್ನ ಅತ್ಯಂತ ಪ್ರಮುಖ ಪಂದ್ಯದಲ್ಲಿನ ದಿನಾಂಕ ಬದಲಾವಣೆಯು ಪಾಕಿಸ್ತಾನದ ಮುಂದಿನ ಪಂದ್ಯದ ಮೇಲೆ ಪರಿಣಾಮಬೀರುತ್ತದೆ. ಪಾಕ್ ಆಡಲಿರುವ ಶ್ರೀಲಂಕಾ ವಿರುದ್ಧ ಪಂದ್ಯವು ಹೈದರಾಬಾದ್ನಲ್ಲೇ ನಡೆಯಲಿದ್ದು, ಆದರೆ ಅಕ್ಟೋಬರ್ 12ರ ಬದಲಿಗೆ ಅ.10ರಂದು ನಡೆಯಲಿದೆ. ಪಾಕ್ಗೆ ಎರಡು ಪಂದ್ಯಗಳ ನಡುವೆ ಸಾಕಷ್ಟು ಅಂತರ ಇರಲಿದೆ.
ಭಾರತ-ಪಾಕಿಸ್ತಾನ ನಡುವೆ ಅ.15ರಂದು ವಿಶ್ವಕಪ್ ಪಂದ್ಯ ನಿಗದಿಯಾಗಿದೆ. ಆದರೆ ಈ ದಿನ ನವರಾತ್ರಿ ಉತ್ಸವದ ಮೊದಲ ದಿನವಾಗಿದೆ. ಈ ದಿನ ಸಾಕಷ್ಟು ಭದ್ರತೆ ನೀಡಲು ಕಷ್ಟವಾಗುತ್ತದೆ ಎಂದು ಸ್ಥಳೀಯ ಪೊಲೀಸರು ಅಳಲು ತೋಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಪಿಸಿಬಿ ಬದಲಾವಣೆಯ ಕುರಿತಂತೆ ಐಸಿಸಿಗೆ ಪತ್ರ ಬರೆದಿದ್ದು, ಪಿಸಿಬಿ ಇದಕ್ಕೆ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.
ವೇಳಾಪಟ್ಟಿ ಬದಲಾವಣೆಗೆ ನವರಾತ್ರಿ ಉತ್ಸವ ಕಾರಣವಲ್ಲ ಎಂದಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಕಳೆದ ವಾರ ಹಲವು ಸದಸ್ಯ ರಾಷ್ಟ್ರಗಳು ವೇಳಾಪಟ್ಟಿ ಬದಲಾವಣೆಗೆ ಕೋರಿದ್ದರು. ಕೆಲವು ಬದಲಾವಣೆ ಮಾಡಲಾಗಿದೆ ಎಂದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…