ನವದೆಹಲಿ : 2023ರ ಏಕದಿನ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಣದ ಪಂದ್ಯವನ್ನು ಐಸಿಸಿ ಮೂಲ ವೇಳಾಪಟ್ಟಿ ಅಕ್ಟೋಬರ್ 15ರ ಬದಲಿಗೆ ಅಕ್ಟೋಬರ್ 14ರಂದು ಆಡಲಾಗುತ್ತದೆ. ಐಸಿಸಿ ಈ ಕುರಿತು ಇನ್ನಷ್ಟೇ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು, ಈ ವಾರದ ಅಂತ್ಯಕ್ಕೆ ವೇಳಾಪಟ್ಟಿ ಪ್ರಕಟವಾಗಬಹುದು.
ಇಎಸ್ಪಿಎನ್ ಕ್ರಿಕ್ಇನ್ಫೋ ಪ್ರಕಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ದಿನಾಂಕ ಬದಲಾವಣೆಗೆ ಒಪ್ಪಿಕೊಂಡಿದೆ. ಪಂದ್ಯವು ಅಹಮದಾಬಾದ್ನಲ್ಲಿಯೇ ನಡೆಯಲಿದೆ.
ವಿಶ್ವಕಪ್ನ ಅತ್ಯಂತ ಪ್ರಮುಖ ಪಂದ್ಯದಲ್ಲಿನ ದಿನಾಂಕ ಬದಲಾವಣೆಯು ಪಾಕಿಸ್ತಾನದ ಮುಂದಿನ ಪಂದ್ಯದ ಮೇಲೆ ಪರಿಣಾಮಬೀರುತ್ತದೆ. ಪಾಕ್ ಆಡಲಿರುವ ಶ್ರೀಲಂಕಾ ವಿರುದ್ಧ ಪಂದ್ಯವು ಹೈದರಾಬಾದ್ನಲ್ಲೇ ನಡೆಯಲಿದ್ದು, ಆದರೆ ಅಕ್ಟೋಬರ್ 12ರ ಬದಲಿಗೆ ಅ.10ರಂದು ನಡೆಯಲಿದೆ. ಪಾಕ್ಗೆ ಎರಡು ಪಂದ್ಯಗಳ ನಡುವೆ ಸಾಕಷ್ಟು ಅಂತರ ಇರಲಿದೆ.
ಭಾರತ-ಪಾಕಿಸ್ತಾನ ನಡುವೆ ಅ.15ರಂದು ವಿಶ್ವಕಪ್ ಪಂದ್ಯ ನಿಗದಿಯಾಗಿದೆ. ಆದರೆ ಈ ದಿನ ನವರಾತ್ರಿ ಉತ್ಸವದ ಮೊದಲ ದಿನವಾಗಿದೆ. ಈ ದಿನ ಸಾಕಷ್ಟು ಭದ್ರತೆ ನೀಡಲು ಕಷ್ಟವಾಗುತ್ತದೆ ಎಂದು ಸ್ಥಳೀಯ ಪೊಲೀಸರು ಅಳಲು ತೋಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಪಿಸಿಬಿ ಬದಲಾವಣೆಯ ಕುರಿತಂತೆ ಐಸಿಸಿಗೆ ಪತ್ರ ಬರೆದಿದ್ದು, ಪಿಸಿಬಿ ಇದಕ್ಕೆ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.
ವೇಳಾಪಟ್ಟಿ ಬದಲಾವಣೆಗೆ ನವರಾತ್ರಿ ಉತ್ಸವ ಕಾರಣವಲ್ಲ ಎಂದಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಕಳೆದ ವಾರ ಹಲವು ಸದಸ್ಯ ರಾಷ್ಟ್ರಗಳು ವೇಳಾಪಟ್ಟಿ ಬದಲಾವಣೆಗೆ ಕೋರಿದ್ದರು. ಕೆಲವು ಬದಲಾವಣೆ ಮಾಡಲಾಗಿದೆ ಎಂದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…