ಕ್ರೀಡೆ

ಏಷ್ಯಾಕಪ್ ಆಯೋಜನೆಗೆ ಸಂಬಂಧಿಸಿದಂತೆ ಹೊಸ ಕ್ಯಾತೆ ತೆಗೆದ ಪಾಕಿಸ್ತಾನ..!

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಇಷ್ಟು ಹೊತ್ತಿಗಾಗಲೇ ಏಷ್ಯಾಕಪ್‌ ವೇಳಾಪಟ್ಟಿಯನ್ನು ಪ್ರಕಟಿಸಬೇಕಾಗಿತ್ತು. ಆದರೆ ಏಷ್ಯಾಕಪ್ ಆಯೋಜನೆಯ ಬಗ್ಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಹಗ್ಗಜಗ್ಗಾಟದಿಂದಾಗಿ ಏಷ್ಯಾಕಪ್ ವೇಳಾಪಟ್ಟಿ ಪ್ರಕಟಣೆ ವಿಳಂಬವಾಗುತ್ತಿದೆ.

ಏಷ್ಯಾಕಪ್ ಆಯೋಜನೆಯ ಬಗ್ಗೆ ದಿನಕ್ಕೊಂದು ವರಸೆ ಬದಲಿಸುತ್ತಿರುವ ಪಾಕ್ ಇದೀಗ ಬೇಡಿಕೆಯೊಂದನ್ನು ಎಸಿಸಿ (ACC) ಮುಂದಿಟ್ಟಿದೆ ಎಂದು ವರದಿಯಾಗಿದೆ.

ತಿಂಗಳ ಹೋರಾಟದ ನಂತರ, ಅಂತಿಮವಾಗಿ ಕಳೆದ ತಿಂಗಳು ಪಂದ್ಯಾವಳಿಯನ್ನು ಆಯೋಜಿಸಲು ಒಪ್ಪಂದಕ್ಕೆ ಬರಲಾಗಿತ್ತು. ಆದರೆ ಈಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ  ಮತ್ತೆ ಅದನ್ನು ಮಧ್ಯದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದೆ.

ವರದಿಗಳ ಪ್ರಕಾರ, ಹೊಸ ಪಿಸಿಬಿ ಮುಖ್ಯಸ್ಥರಾದ ಝಕಾ ಅಶ್ರಫ್ ಈಗ ಪಾಕಿಸ್ತಾನದಲ್ಲಿ ನಾಲ್ಕಕ್ಕೂ ಹೆಚ್ಚಿನ ಏಷ್ಯಾಕಪ್ ಪಂದ್ಯಗಳನ್ನು ನಡೆಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್

ಆಗಸ್ಟ್-ಸೆಪ್ಟೆಂಬರ್​ನಲ್ಲಿ ನಡೆಯಲಿರುವ ಏಷ್ಯಾಕಪ್ ಈ ಬಾರಿ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತಿದೆ. ಪಾಕಿಸ್ತಾನ ಮಂಡಳಿಯ ಮಾಜಿ ಅಧ್ಯಕ್ಷ ನಜಮ್ ಸೇಥಿ ಅವರ ಪ್ರಸ್ತಾಪದ ನಂತರವೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಇದನ್ನು ಅಂಗೀಕರಿಸಿತು. ಇದರ ಅಡಿಯಲ್ಲಿ 6 ತಂಡಗಳ ಟೂರ್ನಿಯ ಮೊದಲ 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಫೈನಲ್ ಸೇರಿದಂತೆ ಉಳಿದ 9 ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಪಂದ್ಯಾವಳಿಯು ಆಗಸ್ಟ್ 31 ರಿಂದ ಸೆಪ್ಟೆಂಬರ್ 13 ರವರೆಗೆ ನಡೆಯಲಿದೆ.

ಎಸಿಸಿ ಸಭೆಯಲ್ಲಿ ಪಿಸಿಬಿ ಆಗ್ರಹ

ಏಷ್ಯಾಕಪ್ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ. ಜುಲೈ 16ರ ಭಾನುವಾರದಂದು ನಡೆಯಲಿರುವ ಎಸಿಸಿ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಸಿಗುವ ಸಾಧ್ಯತೆಯಿದ್ದು, ಪಾಕಿಸ್ತಾನದ ಆಡಳಿತ ಮಂಡಳಿ ಸಭೆಯನ್ನು ತಡೆಯುವ ಉತ್ಸಾಹದಲ್ಲಿದೆ. ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ಪಾಕಿಸ್ತಾನ ಮಂಡಳಿಯ ಹೊಸ ಮುಖ್ಯಸ್ಥ ಝಕಾ ಅಶ್ರಫ್ ಅವರು ಸಭೆಯಲ್ಲಿ ಹೊಸ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ. ಈ ವಾರ ಡರ್ಬನ್‌ನಲ್ಲಿ ನಡೆಯುವ ಐಸಿಸಿ ಸಮ್ಮೇಳನದಲ್ಲಿ ಎಸಿಸಿ ಸದಸ್ಯ ರಾಷ್ಟ್ರಗಳಿಗೆ ಹೊಸ ಬೇಡಿಕೆಗಳನ್ನು ಸಲ್ಲಿಸುವುದಾಗಿ ಅಶ್ರಫ್ ಸೂಚಿಸಿದ್ದಾರೆ ಎಂದು ವರದಿ ತಿಳಿಸಿದೆ.

ಪಾಕ್ ಬೇಡಿಕೆಗೆ ಮಳೆಯೇ ಕಾರಣ

ವರದಿಯಲ್ಲಿ, ಪಿಸಿಬಿ ಪಾಕಿಸ್ತಾನದಲ್ಲಿ 4 ಕ್ಕೂ ಹೆಚ್ಚು ಪಂದ್ಯಗಳನ್ನು ಆಯೋಜಿಸಲು ಬಯಸಿದೆ ಎಂದು ಪಾಕಿಸ್ತಾನಿ ಮಂಡಳಿಯ ಮೂಲಗಳು ತಿಳಿಸಿವೆ. ಶ್ರೀಲಂಕಾದಲ್ಲಿ ಮಾನ್ಸೂನ್ ಪರಿಸ್ಥಿತಿಯಿಂದಾಗಿ ಈ ವಾದವನ್ನು ಪಾಕ್ ಮಂಡಳಿ ಮುಂದಿಟ್ಟಿದೆ ಎಂದು ವರದಿಯಾಗಿದೆ. ಶ್ರೀಲಂಕಾದಲ್ಲಿನ ಮಳೆಯ ಪರಿಸ್ಥಿತಿಯನ್ನು ಮುನ್ನೆಲೆಗೆ ತಂದಿರುವ ಪಿಸಿಬಿ ಅಧ್ಯಕ್ಷ, ಶ್ರೀಲಂಕಾದಲ್ಲಿ ಏಷ್ಯಾಕಪ್ ಆಯೋಜನೆ ವೇಳೆ ಮಾನ್ಸೂನ್ ಆರಂಭವಾಗಿರುತ್ತದೆ. ಇದು ಪಂದ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಪಾಕಿಸ್ತಾನದಲ್ಲಿ ಇನ್ನೂ ಕೆಲವು ಪಂದ್ಯಗಳನ್ನು ಆಯೋಜನೆ ಮಾಡಲು ಅವಕಾಶ ನೀಡುವಂತೆ ಒತ್ತಾಯಿಸಲಿದ್ದಾರೆ ಎಂದು ವರದಿಯಾಗಿದೆ.

ಬೇಡಿಕೆಯನ್ನು ಪೂರೈಸುವ ಸಾಧ್ಯತೆ ಕಡಿಮೆ

ಈಗ ಪಿಸಿಬಿ ಎಷ್ಟೇ ಪ್ರಯತ್ನಿಸಿದರೂ ಬೇಡಿಕೆ ಈಡೇರುವ ಸಾಧ್ಯತೆ ಕಡಿಮೆ. ಏಕೆಂದರೆ ಎರಡು ಸ್ಥಳಗಳಲ್ಲಿ ಏಕಕಾಲದಲ್ಲಿ ಪಂದ್ಯಾವಳಿಗಳನ್ನು ನಡೆಸುವ ತೊಂದರೆಗಳು ಮತ್ತು ತಂಡಗಳು ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಬೆಳೆಸಲು ಎದುರಾಗುವ ಸಮಸ್ಯೆಗಳನ್ನು ಗಮನಿಸಿ ಎಸಿಸಿ, ಪಿಸಿಬಿ ಬೇಡಿಕೆಯನ್ನು ತಿರಸ್ಕರಿಸುವ ಸಾಧ್ಯತೆಗಳು ಹೆಚ್ಚಿವೆ.

andolanait

Recent Posts

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

6 mins ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

2 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

2 hours ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

2 hours ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

2 hours ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

4 hours ago