ಕ್ರೀಡೆ

ಏಷ್ಯಾಕಪ್ ಆಯೋಜನೆಗೆ ಸಂಬಂಧಿಸಿದಂತೆ ಹೊಸ ಕ್ಯಾತೆ ತೆಗೆದ ಪಾಕಿಸ್ತಾನ..!

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಇಷ್ಟು ಹೊತ್ತಿಗಾಗಲೇ ಏಷ್ಯಾಕಪ್‌ ವೇಳಾಪಟ್ಟಿಯನ್ನು ಪ್ರಕಟಿಸಬೇಕಾಗಿತ್ತು. ಆದರೆ ಏಷ್ಯಾಕಪ್ ಆಯೋಜನೆಯ ಬಗ್ಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಹಗ್ಗಜಗ್ಗಾಟದಿಂದಾಗಿ ಏಷ್ಯಾಕಪ್ ವೇಳಾಪಟ್ಟಿ ಪ್ರಕಟಣೆ ವಿಳಂಬವಾಗುತ್ತಿದೆ.

ಏಷ್ಯಾಕಪ್ ಆಯೋಜನೆಯ ಬಗ್ಗೆ ದಿನಕ್ಕೊಂದು ವರಸೆ ಬದಲಿಸುತ್ತಿರುವ ಪಾಕ್ ಇದೀಗ ಬೇಡಿಕೆಯೊಂದನ್ನು ಎಸಿಸಿ (ACC) ಮುಂದಿಟ್ಟಿದೆ ಎಂದು ವರದಿಯಾಗಿದೆ.

ತಿಂಗಳ ಹೋರಾಟದ ನಂತರ, ಅಂತಿಮವಾಗಿ ಕಳೆದ ತಿಂಗಳು ಪಂದ್ಯಾವಳಿಯನ್ನು ಆಯೋಜಿಸಲು ಒಪ್ಪಂದಕ್ಕೆ ಬರಲಾಗಿತ್ತು. ಆದರೆ ಈಗ ಪಾಕಿಸ್ತಾನ ಕ್ರಿಕೆಟ್ ಮಂಡಳಿ  ಮತ್ತೆ ಅದನ್ನು ಮಧ್ಯದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದೆ.

ವರದಿಗಳ ಪ್ರಕಾರ, ಹೊಸ ಪಿಸಿಬಿ ಮುಖ್ಯಸ್ಥರಾದ ಝಕಾ ಅಶ್ರಫ್ ಈಗ ಪಾಕಿಸ್ತಾನದಲ್ಲಿ ನಾಲ್ಕಕ್ಕೂ ಹೆಚ್ಚಿನ ಏಷ್ಯಾಕಪ್ ಪಂದ್ಯಗಳನ್ನು ನಡೆಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್

ಆಗಸ್ಟ್-ಸೆಪ್ಟೆಂಬರ್​ನಲ್ಲಿ ನಡೆಯಲಿರುವ ಏಷ್ಯಾಕಪ್ ಈ ಬಾರಿ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತಿದೆ. ಪಾಕಿಸ್ತಾನ ಮಂಡಳಿಯ ಮಾಜಿ ಅಧ್ಯಕ್ಷ ನಜಮ್ ಸೇಥಿ ಅವರ ಪ್ರಸ್ತಾಪದ ನಂತರವೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಇದನ್ನು ಅಂಗೀಕರಿಸಿತು. ಇದರ ಅಡಿಯಲ್ಲಿ 6 ತಂಡಗಳ ಟೂರ್ನಿಯ ಮೊದಲ 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಫೈನಲ್ ಸೇರಿದಂತೆ ಉಳಿದ 9 ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಪಂದ್ಯಾವಳಿಯು ಆಗಸ್ಟ್ 31 ರಿಂದ ಸೆಪ್ಟೆಂಬರ್ 13 ರವರೆಗೆ ನಡೆಯಲಿದೆ.

ಎಸಿಸಿ ಸಭೆಯಲ್ಲಿ ಪಿಸಿಬಿ ಆಗ್ರಹ

ಏಷ್ಯಾಕಪ್ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ. ಜುಲೈ 16ರ ಭಾನುವಾರದಂದು ನಡೆಯಲಿರುವ ಎಸಿಸಿ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಸಿಗುವ ಸಾಧ್ಯತೆಯಿದ್ದು, ಪಾಕಿಸ್ತಾನದ ಆಡಳಿತ ಮಂಡಳಿ ಸಭೆಯನ್ನು ತಡೆಯುವ ಉತ್ಸಾಹದಲ್ಲಿದೆ. ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ಪಾಕಿಸ್ತಾನ ಮಂಡಳಿಯ ಹೊಸ ಮುಖ್ಯಸ್ಥ ಝಕಾ ಅಶ್ರಫ್ ಅವರು ಸಭೆಯಲ್ಲಿ ಹೊಸ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ. ಈ ವಾರ ಡರ್ಬನ್‌ನಲ್ಲಿ ನಡೆಯುವ ಐಸಿಸಿ ಸಮ್ಮೇಳನದಲ್ಲಿ ಎಸಿಸಿ ಸದಸ್ಯ ರಾಷ್ಟ್ರಗಳಿಗೆ ಹೊಸ ಬೇಡಿಕೆಗಳನ್ನು ಸಲ್ಲಿಸುವುದಾಗಿ ಅಶ್ರಫ್ ಸೂಚಿಸಿದ್ದಾರೆ ಎಂದು ವರದಿ ತಿಳಿಸಿದೆ.

ಪಾಕ್ ಬೇಡಿಕೆಗೆ ಮಳೆಯೇ ಕಾರಣ

ವರದಿಯಲ್ಲಿ, ಪಿಸಿಬಿ ಪಾಕಿಸ್ತಾನದಲ್ಲಿ 4 ಕ್ಕೂ ಹೆಚ್ಚು ಪಂದ್ಯಗಳನ್ನು ಆಯೋಜಿಸಲು ಬಯಸಿದೆ ಎಂದು ಪಾಕಿಸ್ತಾನಿ ಮಂಡಳಿಯ ಮೂಲಗಳು ತಿಳಿಸಿವೆ. ಶ್ರೀಲಂಕಾದಲ್ಲಿ ಮಾನ್ಸೂನ್ ಪರಿಸ್ಥಿತಿಯಿಂದಾಗಿ ಈ ವಾದವನ್ನು ಪಾಕ್ ಮಂಡಳಿ ಮುಂದಿಟ್ಟಿದೆ ಎಂದು ವರದಿಯಾಗಿದೆ. ಶ್ರೀಲಂಕಾದಲ್ಲಿನ ಮಳೆಯ ಪರಿಸ್ಥಿತಿಯನ್ನು ಮುನ್ನೆಲೆಗೆ ತಂದಿರುವ ಪಿಸಿಬಿ ಅಧ್ಯಕ್ಷ, ಶ್ರೀಲಂಕಾದಲ್ಲಿ ಏಷ್ಯಾಕಪ್ ಆಯೋಜನೆ ವೇಳೆ ಮಾನ್ಸೂನ್ ಆರಂಭವಾಗಿರುತ್ತದೆ. ಇದು ಪಂದ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಪಾಕಿಸ್ತಾನದಲ್ಲಿ ಇನ್ನೂ ಕೆಲವು ಪಂದ್ಯಗಳನ್ನು ಆಯೋಜನೆ ಮಾಡಲು ಅವಕಾಶ ನೀಡುವಂತೆ ಒತ್ತಾಯಿಸಲಿದ್ದಾರೆ ಎಂದು ವರದಿಯಾಗಿದೆ.

ಬೇಡಿಕೆಯನ್ನು ಪೂರೈಸುವ ಸಾಧ್ಯತೆ ಕಡಿಮೆ

ಈಗ ಪಿಸಿಬಿ ಎಷ್ಟೇ ಪ್ರಯತ್ನಿಸಿದರೂ ಬೇಡಿಕೆ ಈಡೇರುವ ಸಾಧ್ಯತೆ ಕಡಿಮೆ. ಏಕೆಂದರೆ ಎರಡು ಸ್ಥಳಗಳಲ್ಲಿ ಏಕಕಾಲದಲ್ಲಿ ಪಂದ್ಯಾವಳಿಗಳನ್ನು ನಡೆಸುವ ತೊಂದರೆಗಳು ಮತ್ತು ತಂಡಗಳು ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಬೆಳೆಸಲು ಎದುರಾಗುವ ಸಮಸ್ಯೆಗಳನ್ನು ಗಮನಿಸಿ ಎಸಿಸಿ, ಪಿಸಿಬಿ ಬೇಡಿಕೆಯನ್ನು ತಿರಸ್ಕರಿಸುವ ಸಾಧ್ಯತೆಗಳು ಹೆಚ್ಚಿವೆ.

andolanait

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

4 mins ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

35 mins ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

45 mins ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

47 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

52 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

1 hour ago