ಕ್ರೀಡೆ

48 ಗಂಟೆಗಳಲ್ಲಿ ಏಕದಿನ ನಂ.1 ಸ್ಥಾನವನ್ನು ಕಳೆದುಕೊಂಡ ಪಾಕ್

ಕರಾಚಿ: ಏಕದಿನ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ನಂ.1 ತಂಡವಾಗಿ ಕಾಣಿಸಿಕೊಂಡಿದ್ದ ಪಾಕಿಸ್ತಾನ 48 ಗಂಟೆಗಳಲ್ಲಿ ತನ್ನ ಮೊದಲ ಸ್ಥಾನವನ್ನು ಕಳೆದುಕೊಂಡಿದೆ.

ಭಾನುವಾರ ಕರಾಚಿಯಲ್ಲಿ ನಡೆದ ನ್ಯೂಜಿಲೆಂಡ್‌ ವಿರುದ್ದದ 5ನೇ ಏಕದಿನ ಪಂದ್ಯದಲ್ಲಿ ಪಾಕ್‌ 47 ರನ್‌ ಗಳಿಂದ ಸೋಲಿಗೆ ಶರಣಾಗಿರುವುದು ಇದಕ್ಕೆ ಕಾರಣವಾಗಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಕಿವೀಸ್‌ ಆಟಗಾರರು 49.3 ಓವರ್‌ ನಲ್ಲಿ 299 ರನ್‌ ಪೇರಿಸಿತ್ತು. ಗುರಿ ಬೆನ್ನಟ್ಟಲು ಬಂದ ಪಾಕ್‌ ಆಟಗಾರರು ಇಫ್ತಿಕರ್ ಅಹಮದ್ 94 ರನ್‌, ಆಘಾ ಸಲ್ಮಾನ್ ಅವರ 57 ರನ್‌ ಹೊರತಾಗಿಯೂ ಗುರಿ ಮುಟ್ಟಲು ಸಾಧ್ಯವಾಗಿಲ್ಲ. ಅಂತಿಮವಾಗಿ ಪಾಕ್‌ 46.1 ಓವರ್‌ ನಲ್ಲಿ 252 ರನ್‌ ಗಳಿಸಿ ಸೋಲಿಗೆ ಶರಣಾಯಿತು.

ಅಂತಿಮ ಏಕದಿನದಲ್ಲಿ ಸೋತ ಬಳಿಕ ಐಸಿಸಿ ಏಕದಿನ ರ‍್ಯಾಂಕಿಂಗ್‌ ನಲ್ಲಿ ಬದಲಾವಣೆ ಆಗಿದೆ. 113 ಅಂಕಗಳಿಸಿ ಮೊದಲ ಸ್ಥಾನದಲ್ಲಿದ್ದ ಪಾಕ್‌ 112 ಅಂಕದೊಂದಿಗೆ 3ನೇ ರ‍್ಯಾಂಕ್‌ ಗೆ ಕುಸಿದಿದೆ. ಏಕದಿನದಲ್ಲಿ ಪ್ರಾಬಲ್ಯ ಮೆರೆದಿರುವ ಆಸ್ಟ್ರೇಲಿಯ ತಂಡ 113 ಅಂಕದೊಂದಿಗೆ ಮತ್ತೆ ಮೊದಲ ಸ್ಥಾನಕ್ಕೀರಿದೆ. ಇನ್ನು ಟೀಮ್‌ ಇಂಡಿಯಾ 113 ಅಂಕದೊಂದಿಗೆ 2ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಅಂತಿಮ ಏಕದಿನದಲ್ಲಿ ಸೋತಿರುವ ಪಾಕ್‌ 4-1 ರೊಂದಿಗೆ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ.

andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago