ಕ್ರೀಡೆ

48 ಗಂಟೆಗಳಲ್ಲಿ ಏಕದಿನ ನಂ.1 ಸ್ಥಾನವನ್ನು ಕಳೆದುಕೊಂಡ ಪಾಕ್

ಕರಾಚಿ: ಏಕದಿನ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ನಂ.1 ತಂಡವಾಗಿ ಕಾಣಿಸಿಕೊಂಡಿದ್ದ ಪಾಕಿಸ್ತಾನ 48 ಗಂಟೆಗಳಲ್ಲಿ ತನ್ನ ಮೊದಲ ಸ್ಥಾನವನ್ನು ಕಳೆದುಕೊಂಡಿದೆ.

ಭಾನುವಾರ ಕರಾಚಿಯಲ್ಲಿ ನಡೆದ ನ್ಯೂಜಿಲೆಂಡ್‌ ವಿರುದ್ದದ 5ನೇ ಏಕದಿನ ಪಂದ್ಯದಲ್ಲಿ ಪಾಕ್‌ 47 ರನ್‌ ಗಳಿಂದ ಸೋಲಿಗೆ ಶರಣಾಗಿರುವುದು ಇದಕ್ಕೆ ಕಾರಣವಾಗಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಕಿವೀಸ್‌ ಆಟಗಾರರು 49.3 ಓವರ್‌ ನಲ್ಲಿ 299 ರನ್‌ ಪೇರಿಸಿತ್ತು. ಗುರಿ ಬೆನ್ನಟ್ಟಲು ಬಂದ ಪಾಕ್‌ ಆಟಗಾರರು ಇಫ್ತಿಕರ್ ಅಹಮದ್ 94 ರನ್‌, ಆಘಾ ಸಲ್ಮಾನ್ ಅವರ 57 ರನ್‌ ಹೊರತಾಗಿಯೂ ಗುರಿ ಮುಟ್ಟಲು ಸಾಧ್ಯವಾಗಿಲ್ಲ. ಅಂತಿಮವಾಗಿ ಪಾಕ್‌ 46.1 ಓವರ್‌ ನಲ್ಲಿ 252 ರನ್‌ ಗಳಿಸಿ ಸೋಲಿಗೆ ಶರಣಾಯಿತು.

ಅಂತಿಮ ಏಕದಿನದಲ್ಲಿ ಸೋತ ಬಳಿಕ ಐಸಿಸಿ ಏಕದಿನ ರ‍್ಯಾಂಕಿಂಗ್‌ ನಲ್ಲಿ ಬದಲಾವಣೆ ಆಗಿದೆ. 113 ಅಂಕಗಳಿಸಿ ಮೊದಲ ಸ್ಥಾನದಲ್ಲಿದ್ದ ಪಾಕ್‌ 112 ಅಂಕದೊಂದಿಗೆ 3ನೇ ರ‍್ಯಾಂಕ್‌ ಗೆ ಕುಸಿದಿದೆ. ಏಕದಿನದಲ್ಲಿ ಪ್ರಾಬಲ್ಯ ಮೆರೆದಿರುವ ಆಸ್ಟ್ರೇಲಿಯ ತಂಡ 113 ಅಂಕದೊಂದಿಗೆ ಮತ್ತೆ ಮೊದಲ ಸ್ಥಾನಕ್ಕೀರಿದೆ. ಇನ್ನು ಟೀಮ್‌ ಇಂಡಿಯಾ 113 ಅಂಕದೊಂದಿಗೆ 2ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಅಂತಿಮ ಏಕದಿನದಲ್ಲಿ ಸೋತಿರುವ ಪಾಕ್‌ 4-1 ರೊಂದಿಗೆ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago