ಕ್ರೀಡೆ

ಏಷ್ಯಾಕಪ್‌ ವಿಚಾರದಲ್ಲಿ ಮೊಂಡು ಹಠ ಹಿಡಿದ ಪಾಕ್: ವಿಶ್ವಕಪ್ ಆಡುವುದು ಅನುಮಾನ

ಲಾಹೋರ್: ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಬಿಸಿಸಿಐ ಮತ್ತು ಐಸಿಸಿ ತಯಾರಿಯಲ್ಲಿ ತೊಡಗಿದೆ. ಆದರೆ ನೆರ ರಾಷ್ಟ್ರ ಪಾಕಿಸ್ತಾನವು ಮತ್ತೆ ತನ್ನ ಬುದ್ದಿ ತೋರಿಸಿದ್ದು, ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲು ತಗಾದೆ ತೆಗೆದಿದೆ.

ಐಸಿಸಿ ಈಗಾಗಲೇ ವಿಶ್ವಕಪ್ ಕೂಟದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಾಕಿಸ್ತಾನವು ಭಾರತದ ವಿರುದ್ಧ ಪಂದ್ಯವನ್ನು ಅಹಮದಾಬಾದ್ ನಲ್ಲಿ ಆಡಲಿದೆ. ಬೆಂಗಳೂರು, ಚೆನ್ನೈ ಸೇರಿ ಐದು ನಗರಗಳಲ್ಲಿ ತನ್ನ ಲೀಗ್ ಪಂದ್ಯಗಳನ್ನು ಆಡಲಿದೆ. ಆದರೆ ಇದೀಗ ಪಾಕಿಸ್ತಾನವು ಈ ಕೂಟದಲ್ಲಿ ಆಡುವುದೇ ಅನುಮಾನ ಎನ್ನಲಾಗಿದೆ

ಪಾಕಿಸ್ತಾನದ ಕ್ರೀಡಾ ಸಚಿವ ಎಹ್ಸಾನ್ ಮಜಾರಿ ಅವರು ಭಾರತೀಯ ಪತ್ರಿಕೆಯೊಂದಿಗೆ ಮಾತನಾಡುತ್ತಾ, ಏಷ್ಯಾಕಪ್ ಆಡಲು ಭಾರತವು ಗಡಿ ದಾಟಿ ಪಾಕ್ ಗೆ ಬರದಿದ್ದರೆ, ನಾವೂ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಹೇಳಿದ್ದಾರೆ.

ರಕ್ಷಣಾ ಕಾರಣದಿಂದ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ಕಾರಣದಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಮಾಜಿ ಮುಖ್ಯಸ್ಥ ನಜಮ್ ಸೇಥಿ ಅವರು ಏಷ್ಯಾ ಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಡಲು ಒಪ್ಪಿಕೊಂಡಿದ್ದರು. ಈ ಮಾದರಿಯ ಅಡಿಯಲ್ಲಿ, ಆತಿಥ್ಯ ಹಕ್ಕು ಹೊಂದಿರುವ ಪಾಕಿಸ್ತಾನವು ಈಗ ಕೇವಲ 4 ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ ಮತ್ತು ಶ್ರೀಲಂಕಾ ಏಷ್ಯಾ ಕಪ್‌ನ 9 ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ.

ಆದರೆ ಇದೀಗ ಕ್ರೀಡಾ ಸಚಿವ ಮಜಾರಿ ಅವರು ಹೈಬ್ರಿಡ್ ಮಾದರಿಯನ್ನು ಬಯಸುವುದಿಲ್ಲ ಎಂದು ಹೇಳುತ್ತಿದ್ದು, ಪಾಕಿಸ್ತಾನವು ಆತಿಥ್ಯ ಹಕ್ಕು ಹೊಂದಿದ್ದು, ದೇಶದಲ್ಲಿ ಎಲ್ಲಾ ಪಂದ್ಯಗಳನ್ನು ನಡೆಸುವ ಹಕ್ಕಿದೆ ಎಂದು ಹೇಳಿದರು.

ಒಂದು ವೇಳೆ ಭಾರತವು ಏಷ್ಯಾಕಪ್ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲು ಬಯಸಿದರೆ, ನಾವು ಕೂಡಾ ವಿಶ್ವಕಪ್ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲೇ ಆಡುತ್ತೇವೆ ಎಂದು ಎಹ್ಸಾನ್ ಮಜಾರಿ ಹೇಳಿದರು.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಏಕದಿನ ವಿಶ್ವಕಪ್‌ ನಲ್ಲಿ ಪಾಕಿಸ್ತಾನ ಭಾಗವಹಿಸುತ್ತದೆಯೇ ಎಂದು ನಿರ್ಣಯಿಸಲು ಸಚಿವರ ಸಮಿತಿಯನ್ನು ರಚಿಸಿದರು. ಸಮಿತಿಯ ನೇತೃತ್ವವನ್ನು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ವಹಿಸಲಿದ್ದಾರೆ.

ಭಾರತವು ‘ರಾಜಕೀಯಕ್ಕೆ ಕ್ರೀಡೆಯನ್ನು’ ತರುತ್ತಿದೆ ಎಂದು ಆರೋಪಿಸಿದ ಮಜಾರಿ, ಇತರ ಕ್ರೀಡಾ ಸಂಬಂಧಗಳು ಈಗಾಗಲೇ ಉತ್ತಮವಾಗಿ ನಡೆಯುತ್ತಿರುವಾಗ ಭಾರತ ಸರ್ಕಾರ ತಮ್ಮ ಪುರುಷರ ಕ್ರಿಕೆಟ್ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಯಾವುದೇ ಸರಿಯಾದ ಕಾರಣವನ್ನು ಕಾಣುತ್ತಿಲ್ಲ ಎಂದು ಹೇಳಿದರು. ಪಾಕಿಸ್ತಾನದಲ್ಲಿ ಆಡುವಾಗ ಭಾರತ ಸರ್ಕಾರದ ‘ಭದ್ರತಾ ಕಾಳಜಿ’ಯನ್ನು ನಂಬಲು ನಿರಾಕರಿಸಿದ ಅವರು, ಇತ್ತೀಚೆಗೆ ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಪ್ರವಾಸ ಕೈಗೊಂಡರು ಮತ್ತು ಅವರಿಗೆ ಅಧ್ಯಕ್ಷೀಯ ಭದ್ರತೆಯನ್ನು ನೀಡಲಾಗಿದೆ ಎಂದು ಹೇಳಿದರು.

andolanait

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

10 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

11 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

11 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

11 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

11 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

12 hours ago