ಲಾಹೋರ್: ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಬಿಸಿಸಿಐ ಮತ್ತು ಐಸಿಸಿ ತಯಾರಿಯಲ್ಲಿ ತೊಡಗಿದೆ. ಆದರೆ ನೆರ ರಾಷ್ಟ್ರ ಪಾಕಿಸ್ತಾನವು ಮತ್ತೆ ತನ್ನ ಬುದ್ದಿ ತೋರಿಸಿದ್ದು, ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲು ತಗಾದೆ ತೆಗೆದಿದೆ.
ಐಸಿಸಿ ಈಗಾಗಲೇ ವಿಶ್ವಕಪ್ ಕೂಟದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಾಕಿಸ್ತಾನವು ಭಾರತದ ವಿರುದ್ಧ ಪಂದ್ಯವನ್ನು ಅಹಮದಾಬಾದ್ ನಲ್ಲಿ ಆಡಲಿದೆ. ಬೆಂಗಳೂರು, ಚೆನ್ನೈ ಸೇರಿ ಐದು ನಗರಗಳಲ್ಲಿ ತನ್ನ ಲೀಗ್ ಪಂದ್ಯಗಳನ್ನು ಆಡಲಿದೆ. ಆದರೆ ಇದೀಗ ಪಾಕಿಸ್ತಾನವು ಈ ಕೂಟದಲ್ಲಿ ಆಡುವುದೇ ಅನುಮಾನ ಎನ್ನಲಾಗಿದೆ
ಪಾಕಿಸ್ತಾನದ ಕ್ರೀಡಾ ಸಚಿವ ಎಹ್ಸಾನ್ ಮಜಾರಿ ಅವರು ಭಾರತೀಯ ಪತ್ರಿಕೆಯೊಂದಿಗೆ ಮಾತನಾಡುತ್ತಾ, ಏಷ್ಯಾಕಪ್ ಆಡಲು ಭಾರತವು ಗಡಿ ದಾಟಿ ಪಾಕ್ ಗೆ ಬರದಿದ್ದರೆ, ನಾವೂ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಹೇಳಿದ್ದಾರೆ.
ರಕ್ಷಣಾ ಕಾರಣದಿಂದ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ಕಾರಣದಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಮಾಜಿ ಮುಖ್ಯಸ್ಥ ನಜಮ್ ಸೇಥಿ ಅವರು ಏಷ್ಯಾ ಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಡಲು ಒಪ್ಪಿಕೊಂಡಿದ್ದರು. ಈ ಮಾದರಿಯ ಅಡಿಯಲ್ಲಿ, ಆತಿಥ್ಯ ಹಕ್ಕು ಹೊಂದಿರುವ ಪಾಕಿಸ್ತಾನವು ಈಗ ಕೇವಲ 4 ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ ಮತ್ತು ಶ್ರೀಲಂಕಾ ಏಷ್ಯಾ ಕಪ್ನ 9 ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ.
ಆದರೆ ಇದೀಗ ಕ್ರೀಡಾ ಸಚಿವ ಮಜಾರಿ ಅವರು ಹೈಬ್ರಿಡ್ ಮಾದರಿಯನ್ನು ಬಯಸುವುದಿಲ್ಲ ಎಂದು ಹೇಳುತ್ತಿದ್ದು, ಪಾಕಿಸ್ತಾನವು ಆತಿಥ್ಯ ಹಕ್ಕು ಹೊಂದಿದ್ದು, ದೇಶದಲ್ಲಿ ಎಲ್ಲಾ ಪಂದ್ಯಗಳನ್ನು ನಡೆಸುವ ಹಕ್ಕಿದೆ ಎಂದು ಹೇಳಿದರು.
ಒಂದು ವೇಳೆ ಭಾರತವು ಏಷ್ಯಾಕಪ್ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲು ಬಯಸಿದರೆ, ನಾವು ಕೂಡಾ ವಿಶ್ವಕಪ್ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲೇ ಆಡುತ್ತೇವೆ ಎಂದು ಎಹ್ಸಾನ್ ಮಜಾರಿ ಹೇಳಿದರು.
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಏಕದಿನ ವಿಶ್ವಕಪ್ ನಲ್ಲಿ ಪಾಕಿಸ್ತಾನ ಭಾಗವಹಿಸುತ್ತದೆಯೇ ಎಂದು ನಿರ್ಣಯಿಸಲು ಸಚಿವರ ಸಮಿತಿಯನ್ನು ರಚಿಸಿದರು. ಸಮಿತಿಯ ನೇತೃತ್ವವನ್ನು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ವಹಿಸಲಿದ್ದಾರೆ.
ಭಾರತವು ‘ರಾಜಕೀಯಕ್ಕೆ ಕ್ರೀಡೆಯನ್ನು’ ತರುತ್ತಿದೆ ಎಂದು ಆರೋಪಿಸಿದ ಮಜಾರಿ, ಇತರ ಕ್ರೀಡಾ ಸಂಬಂಧಗಳು ಈಗಾಗಲೇ ಉತ್ತಮವಾಗಿ ನಡೆಯುತ್ತಿರುವಾಗ ಭಾರತ ಸರ್ಕಾರ ತಮ್ಮ ಪುರುಷರ ಕ್ರಿಕೆಟ್ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಯಾವುದೇ ಸರಿಯಾದ ಕಾರಣವನ್ನು ಕಾಣುತ್ತಿಲ್ಲ ಎಂದು ಹೇಳಿದರು. ಪಾಕಿಸ್ತಾನದಲ್ಲಿ ಆಡುವಾಗ ಭಾರತ ಸರ್ಕಾರದ ‘ಭದ್ರತಾ ಕಾಳಜಿ’ಯನ್ನು ನಂಬಲು ನಿರಾಕರಿಸಿದ ಅವರು, ಇತ್ತೀಚೆಗೆ ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಪ್ರವಾಸ ಕೈಗೊಂಡರು ಮತ್ತು ಅವರಿಗೆ ಅಧ್ಯಕ್ಷೀಯ ಭದ್ರತೆಯನ್ನು ನೀಡಲಾಗಿದೆ ಎಂದು ಹೇಳಿದರು.
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…