ಕ್ರೀಡೆ

ಪಾಕಿಸ್ತಾನ ತಂಡ ಏಷ್ಯಾ ಕಪ್ ಮತ್ತು ವಿಶ್ವಕಪ್ ನ ಪ್ರಬಲ ಸ್ಪರ್ಧಿ : ಅಶ್ವಿನ್

ಚೆನ್ನೈ: ಏಷ್ಯಾಕಪ್‌ನಲ್ಲಿ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಸ್ಥಿರ ಪ್ರದರ್ಶನವು ಪಾಕಿಸ್ಥಾನ ತಂಡವನ್ನು ಇನ್ನಷ್ಟು ಪ್ರಬಲವಾಗಿಸುತ್ತದೆ ಎಂದು ಭಾರತದ ಸ್ಪಿನ್ನರ್ ಆರ್. ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ಅಶ್ವಿನ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ, ‘ಏಷ್ಯಾ ಕಪ್ ನಲ್ಲಿ ಪಾಕಿಸ್ಥಾನ ಮತ್ತು ಭಾರತ ಎರಡನ್ನೂ ಗೆಲ್ಲುವ ಸಾಮರ್ಥ್ಯ ಉಳ್ಳ ತಂಡಗಳು. ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಸತತ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದರೆ ವಿಶ್ವಕಪ್ ಗೆ ಹೋಗುವ ತಂಡ ಅಪಾಯಕಾರಿಯಾಗಿರಲಿದೆ’ ಎಂದು ಹೇಳಿದ್ದಾರೆ.

ಪಾಕಿಸ್ಥಾನ ಅಸಾಧಾರಣ ತಂಡವಾಗಿರುವುದರಿಂದ ಏಷ್ಯಾ ಕಪ್ ಮತ್ತು ನಂತರದ ವಿಶ್ವಕಪ್‌ಗೆ ಗಂಭೀರ ಸ್ಪರ್ಧಿಯಾಗಲಿದೆ’ ಎಂದು ಅಶ್ವಿನ್ ಹೇಳಿದ್ದಾರೆ.

ಭಾರತ ತಂಡ ಪಾಕಿಸ್ಥಾನದ ವಿರುದ್ಧ ಏಕದಿನ ಪಂದ್ಯಗಳಲ್ಲಿ ಆಡಿದ ಕಳೆದ ಮೂರು ಪಂದ್ಯಗಳನ್ನು ಗೆದ್ದಿದೆ. ಸೆಪ್ಟೆಂಬರ್ 2 ರಂದು ನಡೆಯಲಿರುವ ಬಹು ನಿರೀಕ್ಷಿತ ಹಣಾಹಣಿಯಲ್ಲಿ ಭಾರತವನ್ನು ಎದುರಿಸುವ ಮೊದಲು ಬುಧವಾರ ಟೂರ್ನಮೆಂಟ್ ಆರಂಭಿಕ ಪಂದ್ಯದಲ್ಲಿ ನೇಪಾಳವನ್ನು ಎದುರಿಸುತ್ತಿದೆ.

andolanait

Recent Posts

ಹಾಸನ| ಆಟವಾಡುತ್ತಾ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವು

ಹಾಸನ: ಸೈಕಲ್‌ನಲ್ಲಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಾಸನದ ಅಣಚಿಹಳ್ಳಿ…

18 mins ago

ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿರುವ ಸಾರಿಗೆ ನೌಕರರು

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ…

26 mins ago

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ…

47 mins ago

ಮೈಸೂರು: ಬೀದಿ ನಾಯಿಗಳನ್ನು ದತ್ತು ಪಡೆದ ವಿದೇಶಿ ಪ್ರಜೆಗಳು

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು…

1 hour ago

ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಒಟ್ಟು 2,800 ರೈತರ ಆತ್ಮಹತ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…

1 hour ago

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…

1 hour ago