ಕ್ರೀಡೆ

ಪಾಕಿಸ್ತಾನ ತಂಡ ಏಷ್ಯಾ ಕಪ್ ಮತ್ತು ವಿಶ್ವಕಪ್ ನ ಪ್ರಬಲ ಸ್ಪರ್ಧಿ : ಅಶ್ವಿನ್

ಚೆನ್ನೈ: ಏಷ್ಯಾಕಪ್‌ನಲ್ಲಿ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಸ್ಥಿರ ಪ್ರದರ್ಶನವು ಪಾಕಿಸ್ಥಾನ ತಂಡವನ್ನು ಇನ್ನಷ್ಟು ಪ್ರಬಲವಾಗಿಸುತ್ತದೆ ಎಂದು ಭಾರತದ ಸ್ಪಿನ್ನರ್ ಆರ್. ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ಅಶ್ವಿನ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ, ‘ಏಷ್ಯಾ ಕಪ್ ನಲ್ಲಿ ಪಾಕಿಸ್ಥಾನ ಮತ್ತು ಭಾರತ ಎರಡನ್ನೂ ಗೆಲ್ಲುವ ಸಾಮರ್ಥ್ಯ ಉಳ್ಳ ತಂಡಗಳು. ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಸತತ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದರೆ ವಿಶ್ವಕಪ್ ಗೆ ಹೋಗುವ ತಂಡ ಅಪಾಯಕಾರಿಯಾಗಿರಲಿದೆ’ ಎಂದು ಹೇಳಿದ್ದಾರೆ.

ಪಾಕಿಸ್ಥಾನ ಅಸಾಧಾರಣ ತಂಡವಾಗಿರುವುದರಿಂದ ಏಷ್ಯಾ ಕಪ್ ಮತ್ತು ನಂತರದ ವಿಶ್ವಕಪ್‌ಗೆ ಗಂಭೀರ ಸ್ಪರ್ಧಿಯಾಗಲಿದೆ’ ಎಂದು ಅಶ್ವಿನ್ ಹೇಳಿದ್ದಾರೆ.

ಭಾರತ ತಂಡ ಪಾಕಿಸ್ಥಾನದ ವಿರುದ್ಧ ಏಕದಿನ ಪಂದ್ಯಗಳಲ್ಲಿ ಆಡಿದ ಕಳೆದ ಮೂರು ಪಂದ್ಯಗಳನ್ನು ಗೆದ್ದಿದೆ. ಸೆಪ್ಟೆಂಬರ್ 2 ರಂದು ನಡೆಯಲಿರುವ ಬಹು ನಿರೀಕ್ಷಿತ ಹಣಾಹಣಿಯಲ್ಲಿ ಭಾರತವನ್ನು ಎದುರಿಸುವ ಮೊದಲು ಬುಧವಾರ ಟೂರ್ನಮೆಂಟ್ ಆರಂಭಿಕ ಪಂದ್ಯದಲ್ಲಿ ನೇಪಾಳವನ್ನು ಎದುರಿಸುತ್ತಿದೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

8 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

16 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

16 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

16 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

19 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

19 hours ago