ಕ್ರೀಡೆ

ಏಷ್ಯಾಕಪ್‌ಗೆ ಪಾಕಿಸ್ತಾನ, ಶ್ರೀಲಂಕಾ ಆತಿಥ್ಯ: ಆ.31ರಿಂದ ಸೆಪ್ಟೆಂಬರ್‌ 17ರವರೆಗೆ ಟೂರ್ನಿ

ಬಹುನಿರೀಕ್ಷಿತ 2023ರ ಏಷ್ಯಾಕಪ್ ಪಂದ್ಯಾವಳಿಗೆ ಸ್ಥಳ ಹಾಗೂ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆಯಲಿದೆ. ಚಾಂಪಿಯನ್‌ಶಿಪ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ.

ಏಷ್ಯಾಕಪ್‌ ಪಂದ್ಯಾವಳಿ ಆಯೋಜನೆಗೆ ಸ್ಥಳದ ವಿಚಾರದಲ್ಲಿ ಸಾಕಷ್ಟು ಗೊಂದಲ ಉಂಟಾಗಿತ್ತು. ಆದರೆ ಇದೀಗ ಎಲ್ಲಾ ಗೊಂದಲಗಳಿಗೆ ತೆರೆಬಿದ್ದಿದ್ದು, ಪಂದ್ಯಾವಳಿಗೆ ಪಾಕಿಸ್ತಾನ ಹಾಗೂ ಶ್ರೀಲಂಕಾ ಆತಿಥ್ಯವಹಿಸಲಿವೆ. ಮಹತ್ವದ ಪಂದ್ಯಾವಳಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ತಂಡಗಳು ಭಾಗವಹಿಸಲಿವೆ. ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್‌ ಪಂದ್ಯಾವಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದರೆ, ಒಂಬತ್ತು ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ.

ಈ ಸಂಬಂಧ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌(ಎಸಿಸಿ) ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, “2023ರ ಏಷ್ಯಾಕಪ್ ಟೂರ್ನಿ ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ನಡೆಯಲಿದೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ತಂಡಗಳು ಒಟ್ಟು 13 ಪಂದ್ಯಗಳಲ್ಲಿ ಮುಖಾಮುಖಿಯಾಗಲಿವೆ. ಇದೇ ಮೊದಲ ಬಾರಿಗೆ ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತಿದ್ದು, 4 ಪಂದ್ಯಗಳು ಪಾಕಿಸ್ತಾನದಲ್ಲಿ ಹಾಗೂ ಉಳಿದ ಒಂಬತ್ತು ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಯಲಿದೆ.

2023ರ ಆವೃತ್ತಿಯ ಏಷ್ಯಾಕಪ್‌ ಟೂರ್ನಿಯಲ್ಲಿ ಭಾಗವಹಿಸುವ ಎಂಟು ತಂಡಗಳನ್ನ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿ ಗುಂಪಿನಿಂದ ಎರಡು ತಂಡಗಳು ಸೂಪರ್ ಫೋರ್ ಹಂತಕ್ಕೆ ಅರ್ಹತೆ ಪಡೆಯಲಿವೆ. ಸೂಪರ್‌-4 ಹಂತದಿಂದ ಅಗ್ರ ಎರಡು ತಂಡಗಳು ನಂತರ ಫೈನಲ್‌ನಲ್ಲಿ ಮುಖಾಮುಖಿಯಾಗಲಿದ್ದು, ಸೆಪ್ಟೆಂಬರ್ 17ರಂದು ಫೈನಲ್‌ ಪಂದ್ಯ ನಡೆಯಲಿದೆ ಎಂದು ಉಲ್ಲೇಖಿಸಲಾಗಿದೆ.

ಇದಕ್ಕೂ ಮುನ್ನ ಏಷ್ಯಾಕಪ್‌ ಪಂದ್ಯಾವಳಿಯನ್ನ ಪಾಕಿಸ್ತಾನದಲ್ಲಿ ಆಯೋಜಿಸಲು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ(ಪಿಸಿಬಿ) ನಿರ್ಧಾರಿಸಿತ್ತು. ಆದರೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿತ್ತು. ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಕೂಡ ಏಷ್ಯಾಕಪ್ ಅನ್ನು ಪಾಕಿಸ್ತಾನದಿಂದ ಸ್ಥಳಾಂತರಿಸಲು ಒಪ್ಪಿಗೆ ನೀಡಿರಲಿಲ್ಲ. ಇದರಿಂದಾಗಿ ಪಿಸಿಬಿ ಮತ್ತು ಬಿಸಿಸಿಐ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಆದರೆ ಇದೀಗ ಈ ಎಲ್ಲಾ ಗೊಂದಲಗಳಿಗೆ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ತೆರೆ ಎಳೆದಿದೆ.

andolanait

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

11 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

12 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

12 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

13 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

13 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

17 hours ago