ಕ್ರೀಡೆ

ಏಷ್ಯಾ ಕಪ್‌ ಆತಿಥ್ಯ ಕೈ ತಪ್ಪುವ ಆತಂಕದಲ್ಲಿ ಪಾಕ್: ಗಾಳ ಬೀಸಿದ ಬಾಂಗ್ಲಾ- ಲಂಕಾ

ಹೊಸದಿಲ್ಲಿ: ಹಲವು ಕಾರಣದಿಂದ ಕುತೂಹಲ ಮೂಡಿಸಿರುವ ಏಷ್ಯಾ ಕಪ್ ಕೂಟವು ಇದೀಗ ಪಾಕಿಸ್ಥಾನದ ಕೈ ತಪ್ಪುವ ಸಾಧ್ಯತೆಯಿದೆ. ಸದ್ಯಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಏಷ್ಯಾ ಕಪ್ ಆತಿಥ್ಯದಿಂದ ಪಾಕಿಸ್ಥಾನದಿಂದ ಬಹುತೇಕ ಹೊರಬಿದ್ದಿದೆ.

ಈ ಬಾರಿಯ ಏಷ್ಯಾ ಕಪ್ ಕೂಟವು ಪಾಕಿಸ್ಥಾನದಲ್ಲಿ ನಡೆಯುವುದೆಂದು ನಿರ್ಧರಿಸಲಾಗಿತ್ತು. ಆದರೆ ಪಾಕಿಸ್ಥಾನಕ್ಕೆ ತಾವು ತೆರಳುವುದಿಲ್ಲ ಎಂದು ಬಿಸಿಸಿಐ ಈಗಾಗಲೇ ಸ್ಪಷ್ಟ ಪಡಿಸಿದೆ. ಭಾರತವು ಯುನೈಟೆಡ್ ಅರಬ್ ಎಮಿರೇಟ್ಸ್‌ನಂತಹ ತಟಸ್ಥ ಸ್ಥಳದಲ್ಲಿ ಆಡುವುದು ಮತ್ತು ಪಾಕಿಸ್ತಾನವು ತನ್ನ ಎಲ್ಲಾ ಪಂದ್ಯಗಳನ್ನು ತವರಿನಲ್ಲಿ ಆಡುವುದರೊಂದಿಗೆ ಹೈಬ್ರಿಡ್ ಮಾದರಿಯಲ್ಲಿ ಅವರು ಪಂದ್ಯಾವಳಿ ಆಡುವ ಪ್ರಸ್ತಾಪವೂ ಇತ್ತು.

ಆದರೆ ಇತ್ತೀಚಿನ ಬೆಳವಣಿಗೆಗಳ ಪ್ರಕಾರ, ಪಂದ್ಯಾವಳಿಯನ್ನು ಸಂಪೂರ್ಣವಾಗಿ ಹೊಸ ದೇಶಕ್ಕೆ ಸ್ಥಳಾಂತರಿಸಬಹುದು. ಪಂದ್ಯಾವಳಿಯನ್ನು ಆಯೋಜಿಸಲು ಶ್ರೀಲಂಕಾ ಮುಂಚೂಣಿಯಲ್ಲಿದೆ. ಬಾಂಗ್ಲಾದೇಶವೂ ಆಸಕ್ತಿ ತೋರಿದೆ.

ಮುಂದಿನ ತಿಂಗಳು ನಡೆಯುವ ಎಸಿಸಿ ಸಭೆಯಲ್ಲಿ ಹೊಸ ಆತಿಥ್ಯ ದೇಶದ ಬಗ್ಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.

ಕಳೆದ ಬಾರಿಯ ಏಷ್ಯಾ ಕಪ್ ಕೂಟವು ಯುಎಇ ನಲ್ಲಿ ನಡೆದಿತ್ತು. ಅಚ್ಚರಿಯ ರೀತಿಯಲ್ಲಿ ದಸುನ್ ಶನಕಾ ನಾಯಕತ್ವದ ಶ್ರೀಲಂಕಾ ತಂಡವು ಕೂಟ ಗೆದ್ದುಕೊಂಡಿತ್ತು. ಈ ಬಾರಿಯ ಏಷ್ಯಾಕಪ್ ಕೂಟ ಏಕದಿನ ಮಾದರಿಯಲ್ಲಿ ನಡೆಯಲಿದೆ.

andolanait

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

2 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

2 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

2 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

3 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

15 hours ago