ಕ್ರೀಡೆ

ಏಷ್ಯಾ ಕಪ್‌ ಆತಿಥ್ಯ ಕೈ ತಪ್ಪುವ ಆತಂಕದಲ್ಲಿ ಪಾಕ್: ಗಾಳ ಬೀಸಿದ ಬಾಂಗ್ಲಾ- ಲಂಕಾ

ಹೊಸದಿಲ್ಲಿ: ಹಲವು ಕಾರಣದಿಂದ ಕುತೂಹಲ ಮೂಡಿಸಿರುವ ಏಷ್ಯಾ ಕಪ್ ಕೂಟವು ಇದೀಗ ಪಾಕಿಸ್ಥಾನದ ಕೈ ತಪ್ಪುವ ಸಾಧ್ಯತೆಯಿದೆ. ಸದ್ಯಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಏಷ್ಯಾ ಕಪ್ ಆತಿಥ್ಯದಿಂದ ಪಾಕಿಸ್ಥಾನದಿಂದ ಬಹುತೇಕ ಹೊರಬಿದ್ದಿದೆ.

ಈ ಬಾರಿಯ ಏಷ್ಯಾ ಕಪ್ ಕೂಟವು ಪಾಕಿಸ್ಥಾನದಲ್ಲಿ ನಡೆಯುವುದೆಂದು ನಿರ್ಧರಿಸಲಾಗಿತ್ತು. ಆದರೆ ಪಾಕಿಸ್ಥಾನಕ್ಕೆ ತಾವು ತೆರಳುವುದಿಲ್ಲ ಎಂದು ಬಿಸಿಸಿಐ ಈಗಾಗಲೇ ಸ್ಪಷ್ಟ ಪಡಿಸಿದೆ. ಭಾರತವು ಯುನೈಟೆಡ್ ಅರಬ್ ಎಮಿರೇಟ್ಸ್‌ನಂತಹ ತಟಸ್ಥ ಸ್ಥಳದಲ್ಲಿ ಆಡುವುದು ಮತ್ತು ಪಾಕಿಸ್ತಾನವು ತನ್ನ ಎಲ್ಲಾ ಪಂದ್ಯಗಳನ್ನು ತವರಿನಲ್ಲಿ ಆಡುವುದರೊಂದಿಗೆ ಹೈಬ್ರಿಡ್ ಮಾದರಿಯಲ್ಲಿ ಅವರು ಪಂದ್ಯಾವಳಿ ಆಡುವ ಪ್ರಸ್ತಾಪವೂ ಇತ್ತು.

ಆದರೆ ಇತ್ತೀಚಿನ ಬೆಳವಣಿಗೆಗಳ ಪ್ರಕಾರ, ಪಂದ್ಯಾವಳಿಯನ್ನು ಸಂಪೂರ್ಣವಾಗಿ ಹೊಸ ದೇಶಕ್ಕೆ ಸ್ಥಳಾಂತರಿಸಬಹುದು. ಪಂದ್ಯಾವಳಿಯನ್ನು ಆಯೋಜಿಸಲು ಶ್ರೀಲಂಕಾ ಮುಂಚೂಣಿಯಲ್ಲಿದೆ. ಬಾಂಗ್ಲಾದೇಶವೂ ಆಸಕ್ತಿ ತೋರಿದೆ.

ಮುಂದಿನ ತಿಂಗಳು ನಡೆಯುವ ಎಸಿಸಿ ಸಭೆಯಲ್ಲಿ ಹೊಸ ಆತಿಥ್ಯ ದೇಶದ ಬಗ್ಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.

ಕಳೆದ ಬಾರಿಯ ಏಷ್ಯಾ ಕಪ್ ಕೂಟವು ಯುಎಇ ನಲ್ಲಿ ನಡೆದಿತ್ತು. ಅಚ್ಚರಿಯ ರೀತಿಯಲ್ಲಿ ದಸುನ್ ಶನಕಾ ನಾಯಕತ್ವದ ಶ್ರೀಲಂಕಾ ತಂಡವು ಕೂಟ ಗೆದ್ದುಕೊಂಡಿತ್ತು. ಈ ಬಾರಿಯ ಏಷ್ಯಾಕಪ್ ಕೂಟ ಏಕದಿನ ಮಾದರಿಯಲ್ಲಿ ನಡೆಯಲಿದೆ.

andolanait

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…

4 mins ago

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

28 mins ago

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

39 mins ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

2 hours ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

2 hours ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

3 hours ago