ಹೊಸದಿಲ್ಲಿ: ಹಲವು ಕಾರಣದಿಂದ ಕುತೂಹಲ ಮೂಡಿಸಿರುವ ಏಷ್ಯಾ ಕಪ್ ಕೂಟವು ಇದೀಗ ಪಾಕಿಸ್ಥಾನದ ಕೈ ತಪ್ಪುವ ಸಾಧ್ಯತೆಯಿದೆ. ಸದ್ಯಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಏಷ್ಯಾ ಕಪ್ ಆತಿಥ್ಯದಿಂದ ಪಾಕಿಸ್ಥಾನದಿಂದ ಬಹುತೇಕ ಹೊರಬಿದ್ದಿದೆ.
ಈ ಬಾರಿಯ ಏಷ್ಯಾ ಕಪ್ ಕೂಟವು ಪಾಕಿಸ್ಥಾನದಲ್ಲಿ ನಡೆಯುವುದೆಂದು ನಿರ್ಧರಿಸಲಾಗಿತ್ತು. ಆದರೆ ಪಾಕಿಸ್ಥಾನಕ್ಕೆ ತಾವು ತೆರಳುವುದಿಲ್ಲ ಎಂದು ಬಿಸಿಸಿಐ ಈಗಾಗಲೇ ಸ್ಪಷ್ಟ ಪಡಿಸಿದೆ. ಭಾರತವು ಯುನೈಟೆಡ್ ಅರಬ್ ಎಮಿರೇಟ್ಸ್ನಂತಹ ತಟಸ್ಥ ಸ್ಥಳದಲ್ಲಿ ಆಡುವುದು ಮತ್ತು ಪಾಕಿಸ್ತಾನವು ತನ್ನ ಎಲ್ಲಾ ಪಂದ್ಯಗಳನ್ನು ತವರಿನಲ್ಲಿ ಆಡುವುದರೊಂದಿಗೆ ಹೈಬ್ರಿಡ್ ಮಾದರಿಯಲ್ಲಿ ಅವರು ಪಂದ್ಯಾವಳಿ ಆಡುವ ಪ್ರಸ್ತಾಪವೂ ಇತ್ತು.
ಆದರೆ ಇತ್ತೀಚಿನ ಬೆಳವಣಿಗೆಗಳ ಪ್ರಕಾರ, ಪಂದ್ಯಾವಳಿಯನ್ನು ಸಂಪೂರ್ಣವಾಗಿ ಹೊಸ ದೇಶಕ್ಕೆ ಸ್ಥಳಾಂತರಿಸಬಹುದು. ಪಂದ್ಯಾವಳಿಯನ್ನು ಆಯೋಜಿಸಲು ಶ್ರೀಲಂಕಾ ಮುಂಚೂಣಿಯಲ್ಲಿದೆ. ಬಾಂಗ್ಲಾದೇಶವೂ ಆಸಕ್ತಿ ತೋರಿದೆ.
ಮುಂದಿನ ತಿಂಗಳು ನಡೆಯುವ ಎಸಿಸಿ ಸಭೆಯಲ್ಲಿ ಹೊಸ ಆತಿಥ್ಯ ದೇಶದ ಬಗ್ಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.
ಕಳೆದ ಬಾರಿಯ ಏಷ್ಯಾ ಕಪ್ ಕೂಟವು ಯುಎಇ ನಲ್ಲಿ ನಡೆದಿತ್ತು. ಅಚ್ಚರಿಯ ರೀತಿಯಲ್ಲಿ ದಸುನ್ ಶನಕಾ ನಾಯಕತ್ವದ ಶ್ರೀಲಂಕಾ ತಂಡವು ಕೂಟ ಗೆದ್ದುಕೊಂಡಿತ್ತು. ಈ ಬಾರಿಯ ಏಷ್ಯಾಕಪ್ ಕೂಟ ಏಕದಿನ ಮಾದರಿಯಲ್ಲಿ ನಡೆಯಲಿದೆ.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…