ಕ್ರೀಡೆ

ಏಷ್ಯಾ ಕಪ್‌ ಆತಿಥ್ಯ ಕೈ ತಪ್ಪುವ ಆತಂಕದಲ್ಲಿ ಪಾಕ್: ಗಾಳ ಬೀಸಿದ ಬಾಂಗ್ಲಾ- ಲಂಕಾ

ಹೊಸದಿಲ್ಲಿ: ಹಲವು ಕಾರಣದಿಂದ ಕುತೂಹಲ ಮೂಡಿಸಿರುವ ಏಷ್ಯಾ ಕಪ್ ಕೂಟವು ಇದೀಗ ಪಾಕಿಸ್ಥಾನದ ಕೈ ತಪ್ಪುವ ಸಾಧ್ಯತೆಯಿದೆ. ಸದ್ಯಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಏಷ್ಯಾ ಕಪ್ ಆತಿಥ್ಯದಿಂದ ಪಾಕಿಸ್ಥಾನದಿಂದ ಬಹುತೇಕ ಹೊರಬಿದ್ದಿದೆ.

ಈ ಬಾರಿಯ ಏಷ್ಯಾ ಕಪ್ ಕೂಟವು ಪಾಕಿಸ್ಥಾನದಲ್ಲಿ ನಡೆಯುವುದೆಂದು ನಿರ್ಧರಿಸಲಾಗಿತ್ತು. ಆದರೆ ಪಾಕಿಸ್ಥಾನಕ್ಕೆ ತಾವು ತೆರಳುವುದಿಲ್ಲ ಎಂದು ಬಿಸಿಸಿಐ ಈಗಾಗಲೇ ಸ್ಪಷ್ಟ ಪಡಿಸಿದೆ. ಭಾರತವು ಯುನೈಟೆಡ್ ಅರಬ್ ಎಮಿರೇಟ್ಸ್‌ನಂತಹ ತಟಸ್ಥ ಸ್ಥಳದಲ್ಲಿ ಆಡುವುದು ಮತ್ತು ಪಾಕಿಸ್ತಾನವು ತನ್ನ ಎಲ್ಲಾ ಪಂದ್ಯಗಳನ್ನು ತವರಿನಲ್ಲಿ ಆಡುವುದರೊಂದಿಗೆ ಹೈಬ್ರಿಡ್ ಮಾದರಿಯಲ್ಲಿ ಅವರು ಪಂದ್ಯಾವಳಿ ಆಡುವ ಪ್ರಸ್ತಾಪವೂ ಇತ್ತು.

ಆದರೆ ಇತ್ತೀಚಿನ ಬೆಳವಣಿಗೆಗಳ ಪ್ರಕಾರ, ಪಂದ್ಯಾವಳಿಯನ್ನು ಸಂಪೂರ್ಣವಾಗಿ ಹೊಸ ದೇಶಕ್ಕೆ ಸ್ಥಳಾಂತರಿಸಬಹುದು. ಪಂದ್ಯಾವಳಿಯನ್ನು ಆಯೋಜಿಸಲು ಶ್ರೀಲಂಕಾ ಮುಂಚೂಣಿಯಲ್ಲಿದೆ. ಬಾಂಗ್ಲಾದೇಶವೂ ಆಸಕ್ತಿ ತೋರಿದೆ.

ಮುಂದಿನ ತಿಂಗಳು ನಡೆಯುವ ಎಸಿಸಿ ಸಭೆಯಲ್ಲಿ ಹೊಸ ಆತಿಥ್ಯ ದೇಶದ ಬಗ್ಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.

ಕಳೆದ ಬಾರಿಯ ಏಷ್ಯಾ ಕಪ್ ಕೂಟವು ಯುಎಇ ನಲ್ಲಿ ನಡೆದಿತ್ತು. ಅಚ್ಚರಿಯ ರೀತಿಯಲ್ಲಿ ದಸುನ್ ಶನಕಾ ನಾಯಕತ್ವದ ಶ್ರೀಲಂಕಾ ತಂಡವು ಕೂಟ ಗೆದ್ದುಕೊಂಡಿತ್ತು. ಈ ಬಾರಿಯ ಏಷ್ಯಾಕಪ್ ಕೂಟ ಏಕದಿನ ಮಾದರಿಯಲ್ಲಿ ನಡೆಯಲಿದೆ.

andolanait

Recent Posts

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

8 mins ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

31 mins ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

2 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

2 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

2 hours ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

3 hours ago