ಕ್ರೀಡೆ

ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಶ್ಲಾಘಿಸಿದ ಪಾಕ್ ಕ್ರಿಕೆಟಿಗ ರಿಝ್ವಾನ್

ಹೈದರಾಬಾದ್ : ಶುಕ್ರವಾರ ಪಾಕಿಸ್ತಾನ ತಂಡವು ನ್ಯೂಝಿಲೆಂಡ್ ತಂಡದೆದುರಿನ ತನ್ನ ಪ್ರಥಮ ಪೂರ್ವಾಭ್ಯಾಸ ಪಂದ್ಯದಲ್ಲಿ ಪರಾಭವಗೊಂಡಿತು. ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಪಾಕಿಸ್ತಾನ ತಂಡವು ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ಗೆ 345 ರನ್ ಗಳ ಬೃಹತ್ ಮೊತ್ತ ಪೇರಿಸಿತು.

ಪಾಕಿಸ್ತಾನ ತಂಡದ ಪರ ಮುಹಮ್ಮದ್ ರಿಝ್ವಾನ್ 103 ಹಾಗೂ ನಾಯಕ ಬಾಬರ್ ಅಝಂ 80 ರನ್ ಗಳನ್ನು ಗಳಿಸಿದರು. ನಂತರ ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ರಚಿನ್ ರವೀಂದ್ರ ಅವರ ಸ್ಫೋಟಕ 97 ರನ್ ಗಳ ನೆರವಿನಿಂದ ಕೇವಲ 43.4 ಓವರ್ ಗಳಲ್ಲಿ ಗೆಲುವಿನ ಗುರಿ ಮುಟ್ಟಿತು.

ಪರಾಭವಗೊಂಡ ತಂಡಕ್ಕೆ ಸೇರಿದ್ದರೂ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮುಹಮ್ಮದ್ ರಿಝ್ವಾನ್ ಕೇವಲ 93 ಬಾಲ್ ಗಳಲ್ಲಿ ಶತಕ ಬಾರಿಸಿ ಗಮನ ಸೆಳೆದರು. ಪಂದ್ಯದ ಮೊದಲ ಇನಿಂಗ್ಸ್ ಮುಗಿದ ನಂತರ ರಿಝ್ವಾನ್, ತಮ್ಮ ತಂಡಕ್ಕೆ ಆತ್ಮೀಯ ಸ್ವಾಗತ ನೀಡಿದ ಹೈದರಾಬಾದ್ ನ ಕ್ರಿಕೆಟ್ ಪ್ರೇಮಿಗಳಿಗೆ ಕೃತಜ್ಞತೆ ಅರ್ಪಿಸಿದರು.

“ಶತಕ ಎಂದಿಗೂ ಶತಕವೇ. ನನಗೆ ಈ ಬಗ್ಗೆ ಹೆಮ್ಮೆ ಮತ್ತು ಸಂತಸವಿದೆ. ಪಾಕಿಸ್ತಾನಕ್ಕಾಗಿ ಶತಕ ಗಳಿಸುವುದು ಎಂದಿಗೂ ವಿಶೇಷವೆ. ಭಾರತೀಯ ಕ್ರಿಕೆಟ್ ಪ್ರೇಮಿಗಳು ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನದ ಜನರು ನಮಗೆ ನೀಡುವಷ್ಟು ಪ್ರೀತಿಯನ್ನೇ ನೀಡಿದರು. ನಮಗೆ ಭಾರತದಲ್ಲಿ ಅದ್ಭುತ ಸ್ವಾಗತ ದೊರೆಯಿತು” ಎಂದು ರಿಝ್ವಾನ್ ಶ್ಲಾಘಿಸಿದರು.

andolanait

Recent Posts

ಮಂಡ್ಯ| ಸಿದ್ಧಗಂಗಾಶ್ರೀಗಳ ಆದರ್ಶ ಅಜರಾಮರ: ಯು.ಸಿ.ಶಿವಕುಮಾರ್‌

ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್‌ ಹೇಳಿದರು. ಮಂಡ್ಯ ನಗರದ…

2 mins ago

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

39 mins ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

50 mins ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

1 hour ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪತ್ನಿ, ಪುತ್ರನಿಗೆ ಎಸ್‌ಐಟಿ ಬುಲಾವ್‌

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…

3 hours ago