ಕ್ರೀಡೆ

ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಶ್ಲಾಘಿಸಿದ ಪಾಕ್ ಕ್ರಿಕೆಟಿಗ ರಿಝ್ವಾನ್

ಹೈದರಾಬಾದ್ : ಶುಕ್ರವಾರ ಪಾಕಿಸ್ತಾನ ತಂಡವು ನ್ಯೂಝಿಲೆಂಡ್ ತಂಡದೆದುರಿನ ತನ್ನ ಪ್ರಥಮ ಪೂರ್ವಾಭ್ಯಾಸ ಪಂದ್ಯದಲ್ಲಿ ಪರಾಭವಗೊಂಡಿತು. ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಪಾಕಿಸ್ತಾನ ತಂಡವು ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ಗೆ 345 ರನ್ ಗಳ ಬೃಹತ್ ಮೊತ್ತ ಪೇರಿಸಿತು.

ಪಾಕಿಸ್ತಾನ ತಂಡದ ಪರ ಮುಹಮ್ಮದ್ ರಿಝ್ವಾನ್ 103 ಹಾಗೂ ನಾಯಕ ಬಾಬರ್ ಅಝಂ 80 ರನ್ ಗಳನ್ನು ಗಳಿಸಿದರು. ನಂತರ ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ರಚಿನ್ ರವೀಂದ್ರ ಅವರ ಸ್ಫೋಟಕ 97 ರನ್ ಗಳ ನೆರವಿನಿಂದ ಕೇವಲ 43.4 ಓವರ್ ಗಳಲ್ಲಿ ಗೆಲುವಿನ ಗುರಿ ಮುಟ್ಟಿತು.

ಪರಾಭವಗೊಂಡ ತಂಡಕ್ಕೆ ಸೇರಿದ್ದರೂ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮುಹಮ್ಮದ್ ರಿಝ್ವಾನ್ ಕೇವಲ 93 ಬಾಲ್ ಗಳಲ್ಲಿ ಶತಕ ಬಾರಿಸಿ ಗಮನ ಸೆಳೆದರು. ಪಂದ್ಯದ ಮೊದಲ ಇನಿಂಗ್ಸ್ ಮುಗಿದ ನಂತರ ರಿಝ್ವಾನ್, ತಮ್ಮ ತಂಡಕ್ಕೆ ಆತ್ಮೀಯ ಸ್ವಾಗತ ನೀಡಿದ ಹೈದರಾಬಾದ್ ನ ಕ್ರಿಕೆಟ್ ಪ್ರೇಮಿಗಳಿಗೆ ಕೃತಜ್ಞತೆ ಅರ್ಪಿಸಿದರು.

“ಶತಕ ಎಂದಿಗೂ ಶತಕವೇ. ನನಗೆ ಈ ಬಗ್ಗೆ ಹೆಮ್ಮೆ ಮತ್ತು ಸಂತಸವಿದೆ. ಪಾಕಿಸ್ತಾನಕ್ಕಾಗಿ ಶತಕ ಗಳಿಸುವುದು ಎಂದಿಗೂ ವಿಶೇಷವೆ. ಭಾರತೀಯ ಕ್ರಿಕೆಟ್ ಪ್ರೇಮಿಗಳು ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನದ ಜನರು ನಮಗೆ ನೀಡುವಷ್ಟು ಪ್ರೀತಿಯನ್ನೇ ನೀಡಿದರು. ನಮಗೆ ಭಾರತದಲ್ಲಿ ಅದ್ಭುತ ಸ್ವಾಗತ ದೊರೆಯಿತು” ಎಂದು ರಿಝ್ವಾನ್ ಶ್ಲಾಘಿಸಿದರು.

andolanait

Recent Posts

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

12 mins ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

50 mins ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

1 hour ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

2 hours ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

2 hours ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

2 hours ago