ಕ್ರೀಡೆ

ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಶ್ಲಾಘಿಸಿದ ಪಾಕ್ ಕ್ರಿಕೆಟಿಗ ರಿಝ್ವಾನ್

ಹೈದರಾಬಾದ್ : ಶುಕ್ರವಾರ ಪಾಕಿಸ್ತಾನ ತಂಡವು ನ್ಯೂಝಿಲೆಂಡ್ ತಂಡದೆದುರಿನ ತನ್ನ ಪ್ರಥಮ ಪೂರ್ವಾಭ್ಯಾಸ ಪಂದ್ಯದಲ್ಲಿ ಪರಾಭವಗೊಂಡಿತು. ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಪಾಕಿಸ್ತಾನ ತಂಡವು ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ಗೆ 345 ರನ್ ಗಳ ಬೃಹತ್ ಮೊತ್ತ ಪೇರಿಸಿತು.

ಪಾಕಿಸ್ತಾನ ತಂಡದ ಪರ ಮುಹಮ್ಮದ್ ರಿಝ್ವಾನ್ 103 ಹಾಗೂ ನಾಯಕ ಬಾಬರ್ ಅಝಂ 80 ರನ್ ಗಳನ್ನು ಗಳಿಸಿದರು. ನಂತರ ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ರಚಿನ್ ರವೀಂದ್ರ ಅವರ ಸ್ಫೋಟಕ 97 ರನ್ ಗಳ ನೆರವಿನಿಂದ ಕೇವಲ 43.4 ಓವರ್ ಗಳಲ್ಲಿ ಗೆಲುವಿನ ಗುರಿ ಮುಟ್ಟಿತು.

ಪರಾಭವಗೊಂಡ ತಂಡಕ್ಕೆ ಸೇರಿದ್ದರೂ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮುಹಮ್ಮದ್ ರಿಝ್ವಾನ್ ಕೇವಲ 93 ಬಾಲ್ ಗಳಲ್ಲಿ ಶತಕ ಬಾರಿಸಿ ಗಮನ ಸೆಳೆದರು. ಪಂದ್ಯದ ಮೊದಲ ಇನಿಂಗ್ಸ್ ಮುಗಿದ ನಂತರ ರಿಝ್ವಾನ್, ತಮ್ಮ ತಂಡಕ್ಕೆ ಆತ್ಮೀಯ ಸ್ವಾಗತ ನೀಡಿದ ಹೈದರಾಬಾದ್ ನ ಕ್ರಿಕೆಟ್ ಪ್ರೇಮಿಗಳಿಗೆ ಕೃತಜ್ಞತೆ ಅರ್ಪಿಸಿದರು.

“ಶತಕ ಎಂದಿಗೂ ಶತಕವೇ. ನನಗೆ ಈ ಬಗ್ಗೆ ಹೆಮ್ಮೆ ಮತ್ತು ಸಂತಸವಿದೆ. ಪಾಕಿಸ್ತಾನಕ್ಕಾಗಿ ಶತಕ ಗಳಿಸುವುದು ಎಂದಿಗೂ ವಿಶೇಷವೆ. ಭಾರತೀಯ ಕ್ರಿಕೆಟ್ ಪ್ರೇಮಿಗಳು ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನದ ಜನರು ನಮಗೆ ನೀಡುವಷ್ಟು ಪ್ರೀತಿಯನ್ನೇ ನೀಡಿದರು. ನಮಗೆ ಭಾರತದಲ್ಲಿ ಅದ್ಭುತ ಸ್ವಾಗತ ದೊರೆಯಿತು” ಎಂದು ರಿಝ್ವಾನ್ ಶ್ಲಾಘಿಸಿದರು.

andolanait

Recent Posts

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

27 mins ago

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…

1 hour ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಸಿಗುತ್ತಾ ಅನುಮತಿ?: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು…

1 hour ago

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ.…

3 hours ago

ನಾಳೆ ಎರಡೂವರೆ ಗಂಟೆ ಪ್ರವಾಸಿಗರಿಗಿಲ್ಲ ತಾಜ್‌ ಮಹಲ್‌ ಪ್ರವೇಶ: ಕಾರಣ ಏನ್‌ ಗೊತ್ತಾ.?

ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್‌ಮಹಲ್‌ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್‌…

3 hours ago

ಖಾಲಿ ಟ್ರಂಕ್‌ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…

4 hours ago