ಕ್ರೀಡೆ

ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಶ್ಲಾಘಿಸಿದ ಪಾಕ್ ಕ್ರಿಕೆಟಿಗ ರಿಝ್ವಾನ್

ಹೈದರಾಬಾದ್ : ಶುಕ್ರವಾರ ಪಾಕಿಸ್ತಾನ ತಂಡವು ನ್ಯೂಝಿಲೆಂಡ್ ತಂಡದೆದುರಿನ ತನ್ನ ಪ್ರಥಮ ಪೂರ್ವಾಭ್ಯಾಸ ಪಂದ್ಯದಲ್ಲಿ ಪರಾಭವಗೊಂಡಿತು. ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಪಾಕಿಸ್ತಾನ ತಂಡವು ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ಗೆ 345 ರನ್ ಗಳ ಬೃಹತ್ ಮೊತ್ತ ಪೇರಿಸಿತು.

ಪಾಕಿಸ್ತಾನ ತಂಡದ ಪರ ಮುಹಮ್ಮದ್ ರಿಝ್ವಾನ್ 103 ಹಾಗೂ ನಾಯಕ ಬಾಬರ್ ಅಝಂ 80 ರನ್ ಗಳನ್ನು ಗಳಿಸಿದರು. ನಂತರ ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ರಚಿನ್ ರವೀಂದ್ರ ಅವರ ಸ್ಫೋಟಕ 97 ರನ್ ಗಳ ನೆರವಿನಿಂದ ಕೇವಲ 43.4 ಓವರ್ ಗಳಲ್ಲಿ ಗೆಲುವಿನ ಗುರಿ ಮುಟ್ಟಿತು.

ಪರಾಭವಗೊಂಡ ತಂಡಕ್ಕೆ ಸೇರಿದ್ದರೂ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮುಹಮ್ಮದ್ ರಿಝ್ವಾನ್ ಕೇವಲ 93 ಬಾಲ್ ಗಳಲ್ಲಿ ಶತಕ ಬಾರಿಸಿ ಗಮನ ಸೆಳೆದರು. ಪಂದ್ಯದ ಮೊದಲ ಇನಿಂಗ್ಸ್ ಮುಗಿದ ನಂತರ ರಿಝ್ವಾನ್, ತಮ್ಮ ತಂಡಕ್ಕೆ ಆತ್ಮೀಯ ಸ್ವಾಗತ ನೀಡಿದ ಹೈದರಾಬಾದ್ ನ ಕ್ರಿಕೆಟ್ ಪ್ರೇಮಿಗಳಿಗೆ ಕೃತಜ್ಞತೆ ಅರ್ಪಿಸಿದರು.

“ಶತಕ ಎಂದಿಗೂ ಶತಕವೇ. ನನಗೆ ಈ ಬಗ್ಗೆ ಹೆಮ್ಮೆ ಮತ್ತು ಸಂತಸವಿದೆ. ಪಾಕಿಸ್ತಾನಕ್ಕಾಗಿ ಶತಕ ಗಳಿಸುವುದು ಎಂದಿಗೂ ವಿಶೇಷವೆ. ಭಾರತೀಯ ಕ್ರಿಕೆಟ್ ಪ್ರೇಮಿಗಳು ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನದ ಜನರು ನಮಗೆ ನೀಡುವಷ್ಟು ಪ್ರೀತಿಯನ್ನೇ ನೀಡಿದರು. ನಮಗೆ ಭಾರತದಲ್ಲಿ ಅದ್ಭುತ ಸ್ವಾಗತ ದೊರೆಯಿತು” ಎಂದು ರಿಝ್ವಾನ್ ಶ್ಲಾಘಿಸಿದರು.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

5 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

6 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

6 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

16 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

16 hours ago