ಕ್ರೀಡೆ

ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಶ್ಲಾಘಿಸಿದ ಪಾಕ್ ಕ್ರಿಕೆಟಿಗ ರಿಝ್ವಾನ್

ಹೈದರಾಬಾದ್ : ಶುಕ್ರವಾರ ಪಾಕಿಸ್ತಾನ ತಂಡವು ನ್ಯೂಝಿಲೆಂಡ್ ತಂಡದೆದುರಿನ ತನ್ನ ಪ್ರಥಮ ಪೂರ್ವಾಭ್ಯಾಸ ಪಂದ್ಯದಲ್ಲಿ ಪರಾಭವಗೊಂಡಿತು. ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಪಾಕಿಸ್ತಾನ ತಂಡವು ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ಗೆ 345 ರನ್ ಗಳ ಬೃಹತ್ ಮೊತ್ತ ಪೇರಿಸಿತು.

ಪಾಕಿಸ್ತಾನ ತಂಡದ ಪರ ಮುಹಮ್ಮದ್ ರಿಝ್ವಾನ್ 103 ಹಾಗೂ ನಾಯಕ ಬಾಬರ್ ಅಝಂ 80 ರನ್ ಗಳನ್ನು ಗಳಿಸಿದರು. ನಂತರ ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ರಚಿನ್ ರವೀಂದ್ರ ಅವರ ಸ್ಫೋಟಕ 97 ರನ್ ಗಳ ನೆರವಿನಿಂದ ಕೇವಲ 43.4 ಓವರ್ ಗಳಲ್ಲಿ ಗೆಲುವಿನ ಗುರಿ ಮುಟ್ಟಿತು.

ಪರಾಭವಗೊಂಡ ತಂಡಕ್ಕೆ ಸೇರಿದ್ದರೂ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮುಹಮ್ಮದ್ ರಿಝ್ವಾನ್ ಕೇವಲ 93 ಬಾಲ್ ಗಳಲ್ಲಿ ಶತಕ ಬಾರಿಸಿ ಗಮನ ಸೆಳೆದರು. ಪಂದ್ಯದ ಮೊದಲ ಇನಿಂಗ್ಸ್ ಮುಗಿದ ನಂತರ ರಿಝ್ವಾನ್, ತಮ್ಮ ತಂಡಕ್ಕೆ ಆತ್ಮೀಯ ಸ್ವಾಗತ ನೀಡಿದ ಹೈದರಾಬಾದ್ ನ ಕ್ರಿಕೆಟ್ ಪ್ರೇಮಿಗಳಿಗೆ ಕೃತಜ್ಞತೆ ಅರ್ಪಿಸಿದರು.

“ಶತಕ ಎಂದಿಗೂ ಶತಕವೇ. ನನಗೆ ಈ ಬಗ್ಗೆ ಹೆಮ್ಮೆ ಮತ್ತು ಸಂತಸವಿದೆ. ಪಾಕಿಸ್ತಾನಕ್ಕಾಗಿ ಶತಕ ಗಳಿಸುವುದು ಎಂದಿಗೂ ವಿಶೇಷವೆ. ಭಾರತೀಯ ಕ್ರಿಕೆಟ್ ಪ್ರೇಮಿಗಳು ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನದ ಜನರು ನಮಗೆ ನೀಡುವಷ್ಟು ಪ್ರೀತಿಯನ್ನೇ ನೀಡಿದರು. ನಮಗೆ ಭಾರತದಲ್ಲಿ ಅದ್ಭುತ ಸ್ವಾಗತ ದೊರೆಯಿತು” ಎಂದು ರಿಝ್ವಾನ್ ಶ್ಲಾಘಿಸಿದರು.

andolanait

Recent Posts

ಕೇದಾರನಾಥ ಧಾಮದಲ್ಲಿ ಯಾತ್ರಾರ್ಥಿಗಳಿಗೆ 24 ಗಂಟೆ ಬಿಸಿನೀರು: ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ

ಡೆಹರಾಡೂನ್:‌ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…

18 mins ago

ರಣ ಬಿಸಿಲ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

29 mins ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ

ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…

33 mins ago

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

53 mins ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

58 mins ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

1 hour ago