ಕ್ರೀಡೆ

ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಶ್ಲಾಘಿಸಿದ ಪಾಕ್ ಕ್ರಿಕೆಟಿಗ ರಿಝ್ವಾನ್

ಹೈದರಾಬಾದ್ : ಶುಕ್ರವಾರ ಪಾಕಿಸ್ತಾನ ತಂಡವು ನ್ಯೂಝಿಲೆಂಡ್ ತಂಡದೆದುರಿನ ತನ್ನ ಪ್ರಥಮ ಪೂರ್ವಾಭ್ಯಾಸ ಪಂದ್ಯದಲ್ಲಿ ಪರಾಭವಗೊಂಡಿತು. ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ಪಾಕಿಸ್ತಾನ ತಂಡವು ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ಗೆ 345 ರನ್ ಗಳ ಬೃಹತ್ ಮೊತ್ತ ಪೇರಿಸಿತು.

ಪಾಕಿಸ್ತಾನ ತಂಡದ ಪರ ಮುಹಮ್ಮದ್ ರಿಝ್ವಾನ್ 103 ಹಾಗೂ ನಾಯಕ ಬಾಬರ್ ಅಝಂ 80 ರನ್ ಗಳನ್ನು ಗಳಿಸಿದರು. ನಂತರ ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ರಚಿನ್ ರವೀಂದ್ರ ಅವರ ಸ್ಫೋಟಕ 97 ರನ್ ಗಳ ನೆರವಿನಿಂದ ಕೇವಲ 43.4 ಓವರ್ ಗಳಲ್ಲಿ ಗೆಲುವಿನ ಗುರಿ ಮುಟ್ಟಿತು.

ಪರಾಭವಗೊಂಡ ತಂಡಕ್ಕೆ ಸೇರಿದ್ದರೂ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮುಹಮ್ಮದ್ ರಿಝ್ವಾನ್ ಕೇವಲ 93 ಬಾಲ್ ಗಳಲ್ಲಿ ಶತಕ ಬಾರಿಸಿ ಗಮನ ಸೆಳೆದರು. ಪಂದ್ಯದ ಮೊದಲ ಇನಿಂಗ್ಸ್ ಮುಗಿದ ನಂತರ ರಿಝ್ವಾನ್, ತಮ್ಮ ತಂಡಕ್ಕೆ ಆತ್ಮೀಯ ಸ್ವಾಗತ ನೀಡಿದ ಹೈದರಾಬಾದ್ ನ ಕ್ರಿಕೆಟ್ ಪ್ರೇಮಿಗಳಿಗೆ ಕೃತಜ್ಞತೆ ಅರ್ಪಿಸಿದರು.

“ಶತಕ ಎಂದಿಗೂ ಶತಕವೇ. ನನಗೆ ಈ ಬಗ್ಗೆ ಹೆಮ್ಮೆ ಮತ್ತು ಸಂತಸವಿದೆ. ಪಾಕಿಸ್ತಾನಕ್ಕಾಗಿ ಶತಕ ಗಳಿಸುವುದು ಎಂದಿಗೂ ವಿಶೇಷವೆ. ಭಾರತೀಯ ಕ್ರಿಕೆಟ್ ಪ್ರೇಮಿಗಳು ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನದ ಜನರು ನಮಗೆ ನೀಡುವಷ್ಟು ಪ್ರೀತಿಯನ್ನೇ ನೀಡಿದರು. ನಮಗೆ ಭಾರತದಲ್ಲಿ ಅದ್ಭುತ ಸ್ವಾಗತ ದೊರೆಯಿತು” ಎಂದು ರಿಝ್ವಾನ್ ಶ್ಲಾಘಿಸಿದರು.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

3 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

3 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

4 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

4 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

5 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

6 hours ago