ಕ್ರೀಡೆ

ಸಾನಿಯಾ ಮಿರ್ಜಾಗೆ ಕೈಕೊಟ್ಟು, ನಟಿ ಸನಾ ಜಾವೇದ್‌ ಕೈಹಿಡಿದ ಪಾಕ್‌ ಕ್ರಿಕೆಟಿಗ ಶೋಯೆಬ್‌ ಮಲ್ಲಿಕ್‌!

ಇಸ್ಲಾಮಾಬಾದ್‌: ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶೋಯೆಬ್‌ ಮಲಿಕ್‌, ಪಾಕ್‌ನ ನಟಿ ಸನಾ ಜಾವೇರದ್‌ ಅವರು ಮದುವೆಯಾಗಿದ್ದಾರೆ. ಆ ಮೂಲಕ ಭಾರತೀಯ ಮಾಜಿ ಟೆನ್ನಿಸ್‌ ತಾರೆ ಸಾನಿಯಾ ಮಿರ್ಜಾ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಶೋಯೆಬ್‌ ನಟಿ ಸನಾ ಜಾವೇದ್‌ ಅವರೊಂದಿಗೆ ವಿವಾಹವಾಗಿರುವ ಫೋಟೋಗಳನ್ನು ಇಂದು (ಶನಿವಾರ೦ ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ಭಾರೀ ವೈರಲ್‌ ಆಗುತ್ತಿವೆ.

ಕಳೆದ ಕೆಲ ದಿನಗಳಿಂದ ಶೋಯಬ್‌ ಮಲ್ಲಿಕ್‌ ಹಾಗೂ ಭಾರತದ ಟೆನ್ನಿಸ್‌ ಆಟಗಾರ್ತಿ ಸಾನಿಯಾ ಮಿರ್ಜಾ ದಂಪತಿ ನಡುವೆ ಎಲ್ಲವೂ ಸರಿಯಿಲ್ಲ. ಈ ಇಬ್ಬರು ವಿಚ್ಛೇದನ ಪಡೆದಿದ್ದಾರೆ ಎಂದು ಹೇಳಲಾಗಿತ್ತು. ಇದರ ಬೆನ್ನಲ್ಲೇ ಮಲ್ಲಿಕ್‌ ಮದುವೆಯಾಗಿರುವ ಸುದ್ದಿ ಬೆಳಕಿಗೆ ಬಂದಿದೆ.

ಸಾನಿಯಾ ಹಾಗೂ ಶೋಯೆಬ್ 2010ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಇಬ್ಬರ ಮದುವೆ ವಿಚಾರಕ್ಕೆ ವಿವಾದವೂ ಉಂಟಾಗಿತ್ತು. ಇದೀಗ ಅವರಿಬ್ಬರ ನಡುವೆ ವಿಚ್ಛೇದನವಾಗಿದೆ ಎಂಬ ವದಂತಿಗಳಿಗೆಲ್ಲಾ ಶೋಯೆಬ್‌ ಮದುವೆ ಮೂಲಕ ಉತ್ತರ ನೀಡಿದ್ದಾರೆ.

ನಟಿ ಸನಾ ಜಾವೇದ್ ಸಹ 2020 ರಲ್ಲಿ ಉಮೈರ್ ಜಸ್ವಾಲ್ ಎಂಬವರನ್ನ ವಿವಾಹವಾಗಿದ್ದರು. ಆದರೆ ಶೀಘ್ರದಲ್ಲೇ ದಂಪತಿ ವಿಚ್ಛೇದನ ಪಡೆದಿದ್ದರು ಎನ್ನಲಾಗಿತ್ತು.

ಎರಡು ದಿನಗಳ ಹಿಂದೆಯಷ್ಟೇ ಸಾನಿಯಾ ಮಿರ್ಜಾ ಇನ್‌ಸ್ಟಾಗ್ರಾಮ್‌ನಲ್ಲಿ ʼವಿಚ್ಛೇದನ ತುಂಬಾ ಕಷ್ಟ, ಮದುವೆ ಕೂಡ ತುಂಬಾ ಕಷ್ಟ,ʼ ಎಂದು ಬರೆದುಕೊಂಡಿದ್ದರು. ಇದು ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ವಿಚ್ಛೇದನ ಪಡೆದಿದ್ದಾರೆ ಎನ್ನಲಾಗಿದ್ದು, ಇದೀಗ ಶೋಯೆಬ್‌ ಮದುವೆಯಿಂದ ಅಧಿಕೃತವಾಗಿದೆ.

andolanait

Recent Posts

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

29 mins ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

2 hours ago

ಮಾರ್ಚ್.‌11ರಿಂದ ವೈದ್ಯರ ಮುಷ್ಕರ ಫಿಕ್ಸ್:‌ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್‌

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.‌11ರಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಕರೆ…

2 hours ago

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…

2 hours ago

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…

2 hours ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಮತ್ತೆ ಸಮನ್ಸ್‌

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ. ಕಳೆದ…

3 hours ago