ಕ್ರೀಡೆ

ಸಾನಿಯಾ ಮಿರ್ಜಾಗೆ ಕೈಕೊಟ್ಟು, ನಟಿ ಸನಾ ಜಾವೇದ್‌ ಕೈಹಿಡಿದ ಪಾಕ್‌ ಕ್ರಿಕೆಟಿಗ ಶೋಯೆಬ್‌ ಮಲ್ಲಿಕ್‌!

ಇಸ್ಲಾಮಾಬಾದ್‌: ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶೋಯೆಬ್‌ ಮಲಿಕ್‌, ಪಾಕ್‌ನ ನಟಿ ಸನಾ ಜಾವೇರದ್‌ ಅವರು ಮದುವೆಯಾಗಿದ್ದಾರೆ. ಆ ಮೂಲಕ ಭಾರತೀಯ ಮಾಜಿ ಟೆನ್ನಿಸ್‌ ತಾರೆ ಸಾನಿಯಾ ಮಿರ್ಜಾ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಶೋಯೆಬ್‌ ನಟಿ ಸನಾ ಜಾವೇದ್‌ ಅವರೊಂದಿಗೆ ವಿವಾಹವಾಗಿರುವ ಫೋಟೋಗಳನ್ನು ಇಂದು (ಶನಿವಾರ೦ ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ಭಾರೀ ವೈರಲ್‌ ಆಗುತ್ತಿವೆ.

ಕಳೆದ ಕೆಲ ದಿನಗಳಿಂದ ಶೋಯಬ್‌ ಮಲ್ಲಿಕ್‌ ಹಾಗೂ ಭಾರತದ ಟೆನ್ನಿಸ್‌ ಆಟಗಾರ್ತಿ ಸಾನಿಯಾ ಮಿರ್ಜಾ ದಂಪತಿ ನಡುವೆ ಎಲ್ಲವೂ ಸರಿಯಿಲ್ಲ. ಈ ಇಬ್ಬರು ವಿಚ್ಛೇದನ ಪಡೆದಿದ್ದಾರೆ ಎಂದು ಹೇಳಲಾಗಿತ್ತು. ಇದರ ಬೆನ್ನಲ್ಲೇ ಮಲ್ಲಿಕ್‌ ಮದುವೆಯಾಗಿರುವ ಸುದ್ದಿ ಬೆಳಕಿಗೆ ಬಂದಿದೆ.

ಸಾನಿಯಾ ಹಾಗೂ ಶೋಯೆಬ್ 2010ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಇಬ್ಬರ ಮದುವೆ ವಿಚಾರಕ್ಕೆ ವಿವಾದವೂ ಉಂಟಾಗಿತ್ತು. ಇದೀಗ ಅವರಿಬ್ಬರ ನಡುವೆ ವಿಚ್ಛೇದನವಾಗಿದೆ ಎಂಬ ವದಂತಿಗಳಿಗೆಲ್ಲಾ ಶೋಯೆಬ್‌ ಮದುವೆ ಮೂಲಕ ಉತ್ತರ ನೀಡಿದ್ದಾರೆ.

ನಟಿ ಸನಾ ಜಾವೇದ್ ಸಹ 2020 ರಲ್ಲಿ ಉಮೈರ್ ಜಸ್ವಾಲ್ ಎಂಬವರನ್ನ ವಿವಾಹವಾಗಿದ್ದರು. ಆದರೆ ಶೀಘ್ರದಲ್ಲೇ ದಂಪತಿ ವಿಚ್ಛೇದನ ಪಡೆದಿದ್ದರು ಎನ್ನಲಾಗಿತ್ತು.

ಎರಡು ದಿನಗಳ ಹಿಂದೆಯಷ್ಟೇ ಸಾನಿಯಾ ಮಿರ್ಜಾ ಇನ್‌ಸ್ಟಾಗ್ರಾಮ್‌ನಲ್ಲಿ ʼವಿಚ್ಛೇದನ ತುಂಬಾ ಕಷ್ಟ, ಮದುವೆ ಕೂಡ ತುಂಬಾ ಕಷ್ಟ,ʼ ಎಂದು ಬರೆದುಕೊಂಡಿದ್ದರು. ಇದು ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ವಿಚ್ಛೇದನ ಪಡೆದಿದ್ದಾರೆ ಎನ್ನಲಾಗಿದ್ದು, ಇದೀಗ ಶೋಯೆಬ್‌ ಮದುವೆಯಿಂದ ಅಧಿಕೃತವಾಗಿದೆ.

andolanait

Recent Posts

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

18 mins ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

29 mins ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

1 hour ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

2 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago