ಕ್ರೀಡೆ

ಬಾಂಗ್ಲಾ – ಪಾಕ್ ಪಂದ್ಯದ ವೇಳೆ ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶನ: ನಾಲ್ವರ ತೀವ್ರ ವಿಚಾರಣೆ

ಕೋಲ್ಕತ್ತಾ: ವಿಶ್ವಕಪ್‌ ಪಂದ್ಯದ ವೇಳೆ ಮೈದಾನದಲ್ಲಿ ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮಂಗಳವಾರ(ಅ.31 ರಂದು) ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಪ್ಯಾಲೆಸ್ತೀನ್‌ ಧ್ವಜವನ್ನು ಪ್ರದರ್ಶಿಸಲಾಗಿದೆ. ಸ್ಟೇಡಿಯಂನ ಜಿ1 ಹಾಗೂ ಹೆಚ್‌ 1 ಬ್ಲಾಕ್‌ ನಲ್ಲಿ ಈ ಘಟನೆ ನಡೆದಿದೆ. ಬಾಂಗ್ಲಾದೇಶ ಬ್ಯಾಟಿಂಗ್ ಮಾಡುವಾಗ ಕೆಲವರು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ್ದಾರೆ.

ಇಸ್ರೇಲ್‌ – ಹಮಾಸ್‌ ನಡುವೆ ನಡೆಯುತ್ತಿರುವ ಯುದ್ಧವನ್ನು ವಿರೋಧಿಸುವ ನಿಟ್ಟಿನಲ್ಲಿ ಪ್ಯಾಲೆಸ್ತೀನ್‌ ಧ್ವಜವನ್ನಿಡಿದು ಪ್ರದರ್ಶಿಸಿದ್ದಾರೆ ಎಂದು ವರದಿ ಆಗಿದೆ.

ಪ್ಯಾಲೆಸ್ತೀನ್‌ ಧ್ವಜವನ್ನಿಡಿದು ಪ್ರದರ್ಶನ ಮಾಡಿದ್ದು, ಮಾತ್ರವಲ್ಲದೆ ಫೋಟೋ ತೆಗೆಸಿಕೊಂಡಿದ್ದಾರೆ. ಮಾಧ್ಯಮದವರ ಕಣ್ಣಿಗೆ ಕಂಡಾಗ ಮೈದಾನದಿಂದ ಹೊರಹೋಗಲು ಯತ್ನಿಸಿದ್ದಾರೆ. ಧ್ವಜ ಪ್ರದರ್ಶನವನ್ನು ಹಲವಾರು ಪ್ರೇಕ್ಷಕರು ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ಗಮನಿಸಿದ್ದು, ಈ ರೀತಿ ಮಾಡಿದವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಹಮಾಸ್‌ – ಇಸ್ರೇಲ್‌ ನಡುವಿನ ಯುದ್ದ ನಿಲ್ಲಬೇಕು. ಈ ಕಾರಣದಿಂದ ಮೂವರಿಂದ – ನಾಲ್ಕು ಮಂದಿ ಯುದ್ದವನ್ನು ವಿರೋಧಿಸುವ ನಿಟ್ಟಿನಲ್ಲಿ ಧ್ವಜವನ್ನು ಪ್ರದರ್ಶನ ಮಾಡಿದ್ದು, ಇದು ವೈರಲ್‌ ಆಗಿ ವಿವಾದವಾಗುತ್ತದೆ ಎನ್ನುವುದು ಗೊತ್ತಿರಲಿಲ್ಲ ಎಂದು ಧ್ವಜ ಪ್ರದರ್ಶನ ಮಾಡಿದ ಶೆಹನಾಜ್ ಹೇಳಿದ್ದಾರೆ.

ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು, ತೀವ್ರ ವಿಚಾರಣೆ ನಡೆಸಿ ಮಧ್ಯರಾತ್ರಿ ಬಿಡುಗಡೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

“ಇದನ್ನು ತಡೆಯುವುದು ಪೊಲೀಸರ ಜವಾಬ್ದಾರಿ. ಯಾರಾದರೂ ಇದನ್ನು ಹೇಗೆ ಮಾಡಬಹುದು? ಇದು ರಾಷ್ಟ್ರದ ಮೇಲೆ ಪರಿಣಾಮ ಬೀರುತ್ತದೆ. ಪಶ್ಚಿಮ ಬಂಗಾಳದಲ್ಲಿ ತುಷ್ಟೀಕರಣ ರಾಜಕೀಯವಿದೆ. ಇದನ್ನು ನಿರೀಕ್ಷಿಸಿರಲಿಲ್ಲ” ಎಂದು ಬಿಜೆಪಿಯ ನಾಯಕ ಶಿಶಿರ್‌ ಬಜೋರಿಯಾ ಹೇಳಿದ್ದಾರೆ.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

4 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

4 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

4 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

4 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

16 hours ago