ಕ್ರೀಡೆ

ಬಾಂಗ್ಲಾ – ಪಾಕ್ ಪಂದ್ಯದ ವೇಳೆ ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶನ: ನಾಲ್ವರ ತೀವ್ರ ವಿಚಾರಣೆ

ಕೋಲ್ಕತ್ತಾ: ವಿಶ್ವಕಪ್‌ ಪಂದ್ಯದ ವೇಳೆ ಮೈದಾನದಲ್ಲಿ ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮಂಗಳವಾರ(ಅ.31 ರಂದು) ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಪ್ಯಾಲೆಸ್ತೀನ್‌ ಧ್ವಜವನ್ನು ಪ್ರದರ್ಶಿಸಲಾಗಿದೆ. ಸ್ಟೇಡಿಯಂನ ಜಿ1 ಹಾಗೂ ಹೆಚ್‌ 1 ಬ್ಲಾಕ್‌ ನಲ್ಲಿ ಈ ಘಟನೆ ನಡೆದಿದೆ. ಬಾಂಗ್ಲಾದೇಶ ಬ್ಯಾಟಿಂಗ್ ಮಾಡುವಾಗ ಕೆಲವರು ಪ್ಯಾಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ್ದಾರೆ.

ಇಸ್ರೇಲ್‌ – ಹಮಾಸ್‌ ನಡುವೆ ನಡೆಯುತ್ತಿರುವ ಯುದ್ಧವನ್ನು ವಿರೋಧಿಸುವ ನಿಟ್ಟಿನಲ್ಲಿ ಪ್ಯಾಲೆಸ್ತೀನ್‌ ಧ್ವಜವನ್ನಿಡಿದು ಪ್ರದರ್ಶಿಸಿದ್ದಾರೆ ಎಂದು ವರದಿ ಆಗಿದೆ.

ಪ್ಯಾಲೆಸ್ತೀನ್‌ ಧ್ವಜವನ್ನಿಡಿದು ಪ್ರದರ್ಶನ ಮಾಡಿದ್ದು, ಮಾತ್ರವಲ್ಲದೆ ಫೋಟೋ ತೆಗೆಸಿಕೊಂಡಿದ್ದಾರೆ. ಮಾಧ್ಯಮದವರ ಕಣ್ಣಿಗೆ ಕಂಡಾಗ ಮೈದಾನದಿಂದ ಹೊರಹೋಗಲು ಯತ್ನಿಸಿದ್ದಾರೆ. ಧ್ವಜ ಪ್ರದರ್ಶನವನ್ನು ಹಲವಾರು ಪ್ರೇಕ್ಷಕರು ಮತ್ತು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ಗಮನಿಸಿದ್ದು, ಈ ರೀತಿ ಮಾಡಿದವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಹಮಾಸ್‌ – ಇಸ್ರೇಲ್‌ ನಡುವಿನ ಯುದ್ದ ನಿಲ್ಲಬೇಕು. ಈ ಕಾರಣದಿಂದ ಮೂವರಿಂದ – ನಾಲ್ಕು ಮಂದಿ ಯುದ್ದವನ್ನು ವಿರೋಧಿಸುವ ನಿಟ್ಟಿನಲ್ಲಿ ಧ್ವಜವನ್ನು ಪ್ರದರ್ಶನ ಮಾಡಿದ್ದು, ಇದು ವೈರಲ್‌ ಆಗಿ ವಿವಾದವಾಗುತ್ತದೆ ಎನ್ನುವುದು ಗೊತ್ತಿರಲಿಲ್ಲ ಎಂದು ಧ್ವಜ ಪ್ರದರ್ಶನ ಮಾಡಿದ ಶೆಹನಾಜ್ ಹೇಳಿದ್ದಾರೆ.

ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು, ತೀವ್ರ ವಿಚಾರಣೆ ನಡೆಸಿ ಮಧ್ಯರಾತ್ರಿ ಬಿಡುಗಡೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

“ಇದನ್ನು ತಡೆಯುವುದು ಪೊಲೀಸರ ಜವಾಬ್ದಾರಿ. ಯಾರಾದರೂ ಇದನ್ನು ಹೇಗೆ ಮಾಡಬಹುದು? ಇದು ರಾಷ್ಟ್ರದ ಮೇಲೆ ಪರಿಣಾಮ ಬೀರುತ್ತದೆ. ಪಶ್ಚಿಮ ಬಂಗಾಳದಲ್ಲಿ ತುಷ್ಟೀಕರಣ ರಾಜಕೀಯವಿದೆ. ಇದನ್ನು ನಿರೀಕ್ಷಿಸಿರಲಿಲ್ಲ” ಎಂದು ಬಿಜೆಪಿಯ ನಾಯಕ ಶಿಶಿರ್‌ ಬಜೋರಿಯಾ ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

3 hours ago