ಕ್ರೀಡೆ

ಏಕದಿನ ವಿಶ್ವಕಪ್‌ ಟೂರ್ನಿಯಿಂದ ಪಾಂಡ್ಯ ಔಟ್: ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಚಾನ್ಸ್‌

ನವದೆಹಲಿ : ಭಾರತದ ಉದಯೋನ್ಮಖ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದು, ಅಧಿಕೃತವಾಗಿ ಮಾಹಿತಿ ಹೊರಬಿದ್ದಿದ್ದಾರೆ. ಹಾರ್ದಿಕ್ ಪಾಂಡ್ಯ ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಬದಲಿ ಆಟಗಾರನಾಗಿ ವೇಗದ ಬೌಲರ್ ಕನ್ನಡಿಗ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾ ವಿಶ್ವಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಗಾಯದಿಂದ ಅಲಭ್ಯವಾಗಿದ್ದ ಹಾರ್ದಿಕ್ ಪಾಂಡ್ಯ ಚೇತರಿಸಿಕೊಂಡು ಸೆಮಿಫೈನಲ್ಗೂ ಮುನ್ನ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಹಾರ್ದಿಕ್ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹೊರಬೀಳುವಂತಾಗಿದೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಓವರ್ ಬೌಲಿಂಗ್ ಸಂದರ್ಭದಲ್ಲಿ ಕಾಲಿನ ನೋವಿಗೆ ತುತ್ತಾಗಿದ್ದರು. ಕೇವಲ ಮೂರು ಎಸೆತ ಬೌಲಿಂಗ್ ಮಾಡಿದ್ದ ಅವರು ನಂತರ ಮೈದಾನ ತೊರೆದಿದ್ದರು. ಆರಂಭದಲ್ಲಿ ಸಾಮಾನ್ಯ ಗಾಯ ಎಂದು ಭಾವಿಸಲಾಗಿತ್ತಾದರೂ ಬಳಿಕ ಗಾಯದ ತೀವ್ರತೆ ಹೆಚ್ಚಾಗಿರುವುದು ಕಂಡುಬಂದಿತ್ತು. ಹೀಗಾಗಿ ಎನ್ಸಿಎಗೆ ತೆರಳಿ ತಂಡಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದರು.

ಹಾರ್ದಿಕ್ ಪಾಂಡ್ಯ ಅವರು ಚಿಕಿತ್ಸೆಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ತೆರಳಿದ್ದರು. ವರದಿಯಲ್ಲಿ ಪಾಂಡ್ಯ ಕಾಲಿನಲ್ಲಿ ಯಾವುದೇ ಮುರಿತ ಕಂಡುಬರದಿದ್ದರೂ, ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡರೆ ಉತ್ತಮ ಎಂಬ ಮಾತು ಬಿಸಿಸಿಐ ಮೂಲಗಳಿಂದ ಬಂದಿತ್ತು. ಅಲ್ಲದೆ ದಕ್ಷಿಣ ಆಫ್ರಿಕಾ ವಿರುದ್ಧ ಅಥವಾ ಸೆಮಿ ಫೈನಲ್‍ನ ಪಂದ್ಯಕ್ಕೆ ಲಭ್ಯರಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಗಾಯದ ಪ್ರಮಾಣ ದೊಡ್ಡದಿರುವ ಕಾರಣ ಹಾಗೂ ಚೇತರಿಸಿಕೊಳ್ಳಲು ಇನ್ನೂ ಸಮಯ ಬೇಕಾಗಿರುವುದರಿಂದ ಪಾಂಡ್ಯ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಇದೀಗ ಹಾರ್ದಿಕ್ ಪಾಂಡೆ ಟೂರ್ನಿಯಿಂದ ಹೊರಬಿದ್ದಿರುವ ಕಾರಣ ವೇಗಿಗೆ ಅದೃಷ್ಟ ಖುಲಾಯಿಸಿದೆ ಪ್ರಸಿದ್ಧ್ ಕೃಷ್ಣ ಕೂಡ ಸುದೀರ್ಘ ಕಾಲ ಗಾಯದಿಂದ ಮೈದಾನದಿಂದ ದೂರವಾಗಿದ್ದು ಈ ವರ್ಷ ಜಸ್ಪ್ರೀತ್ ಬೂಮ್ರಾ ಜೊತೆಗೆ ಕಳೆದ ಐರ್ಲೆಂಡ್ ಪ್ರವಾಸದ ಮೂಲಕ ತಂಡಕ್ಕೆ ಕಮ್ ಬ್ಯಾಕ್‌ ಮಾಡಿದ್ದರು.

ಆ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ಎಡ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ಅದಾದ ಬಳಿಕ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಪಂದ್ಯಗಳಿಂದ ಅವರು ಹೊರಗುಳಿಯುವಂತಾಗಿತ್ತು.

ಬೆಂಗಳೂರಿನ ಎನ್‍ನಿಎಗೆ ಸೇರಿಕೋಂಡಿದ್ದ ಅವರು ಸೆಮಿಫೈನಲ್ಗೂ ಮುನ್ನ ತಂಡಕ್ಕೆ ಸೇರಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಅಸಾಧ್ಯವಾಗಿರುವ ಕಾರಣ ಇದೀಗ ಅವರು ಸಂಪೂರ್ಣ ವಿಶ್ವಕಪ್ ಟೂರ್ನಿಗೆ ಅಲಭ್ಯವಾಗುವಂತಾಗಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago