ಕ್ರೀಡೆ

ಪ್ಯಾರಾ ಏಷ್ಯನ್ ಗೇಮ್ಸ್ : 82 ಪದಕ ಗೆದ್ದು ದಾಖಲೆ ನಿರ್ಮಿಸಿದ ಭಾರತ

ಹ್ಯಾಂಗ್‍ಝೌ : ಭಾರತದ ಅಥ್ಲೆಟ್‌ ಗಳು, ಪ್ಯಾರಾ ಏಷ್ಯನ್ ಗೇಮ್ಸ್‌ ಇತಿಹಾಸದಲ್ಲೇ ದೇಶಕ್ಕೆ ಅತ್ಯಧಿಕ ಪದಕಗಳನ್ನು ಗೆಲ್ಲುವ ಮೂಲಕ ದಾಖಲೆ ಸ್ಥಾಪಿಸಿದರು. ಕೂಟದ ನಾಲ್ಕನೇ ದಿನವಾದ ಗುರುವಾರದ ಕೊನೆಗೆ ಭಾರತ 18 ಚಿನ್ನ ಸೇರಿದಂತೆ 82 ಪದಕಗಳನ್ನು ಗೆದ್ದುಕೊಂಡಿದೆ.

2018ರ ಜಕಾರ್ತಾ ಕೂಟದಲ್ಲಿ ಭಾರತದ ಅಥ್ಲೆಟ್‌ ಗಳು 72 ಪದಕಗಳನ್ನು (15 ಚಿನ್ನ-24 ಬೆಳ್ಳಿ-33 ಕಂಚು) ಗೆದ್ದುಕೊಂಡಿದ್ದು ಇದುವರೆಗಿನ ದಾಖಲೆ ಆಗಿತ್ತು. ಗುರುವಾರ ಒಂದೇ ದಿನ ಮೂರು ಚಿನ್ನ ಸೇರಿದಂತೆ 18 ಪದಕಗಳನ್ನು ಭಾರತದ ಅಥ್ಲೆಟ್‌ ಗಳು ಕೊರಳಿಗೆ ಹಾಕಿಕೊಂಡರು. ಭಾರತ ಒಟ್ಟಾರೆ 18 ಚಿನ್ನ, 23 ಬೆಳ್ಳಿ, 41 ಕಂಚಿನ ಪದಕಗಳನ್ನು ಗಳಿಸಿದೆ.

ಆದರೆ ಪದಕ ಪಟ್ಟಿಯಲ್ಲಿ ಭಾರತ, ಎರಡು ಸ್ಥಾನಗಳಷ್ಟು ಕುಸಿದಿದ್ದು ಎಂಟನೇ ಸ್ಥಾನಕ್ಕೆ ಸರಿಯಿತು. ಗುರುವಾರ ಹಲವು ಚಿನ್ನದ ಪದಕಗಳು ಪಣಕ್ಕಿದ್ದುದು ಇದಕ್ಕೆ ಒಂದು ಕಾರಣ. ಇನ್ನೂ ಎರಡು ದಿನ ಈ ಕೂಟ ನಡೆಯಲಿದ್ದು, ಭಾರತ ನೂರರ ಗಡಿಯನ್ನು ದಾಟುವ ಹಾದಿಯಲ್ಲಿ ದಿಟ್ಟ ಹೆಜ್ಜೆಯಿಟ್ಟಿದೆ.

ದಕ್ಷಿಣ ಕೊರಿಯಾ ಮತ್ತು ಇಂಡೋನೇಷ್ಯಾ ಭಾರತಕ್ಕಿಂತ ಮೇಲಿನ ಸ್ಥಾನ ಪಡೆದವು. ಸಿಂಹಪಾಲು ಪದಕ ಗೆದ್ದಿರುವ ಆತಿಥೇಯ ಚೀನಾ ಅಗ್ರಸ್ಥಾನದಲ್ಲೇ ಮುಂದುವರಿದಿದೆ. ಈ ತಂಡದ ಕ್ರೀಡಾಪಟುಗಳು 156 ಚಿನ್ನ, 128 ಬೆಳ್ಳಿ, 108 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.

ಅಥ್ಲೆಟಿಕ್ಸ್‌ನಲ್ಲಿ ಒಂದು ಚಿನ್ನ ಸೇರಿದಂತೆ ಎಂಟು ಪದಕಗಳನ್ನು ಭಾರತೀಯ ಕ್ರೀಡಾಪಟುಗಳು ಗೆದ್ದರು. ಭಾರತದ 82 ಪದಕಗಳಲ್ಲಿ ಅಥ್ಲೆಟಿಕ್ಸ್‌ನ ಕೊಡುಗೆ 45 ಪದಕಗಳು. 18ರಲ್ಲಿ 14 ಚಿನ್ನದ ಪದಕಗಳನ್ನು ಅಥ್ಲೆಟ್‌ಗಳೇ ಗೆದ್ದಿದ್ದಾರೆ.

ಸಚಿನ್‌ ಸರ್ಜೆರಾವ್‌ ಖಿಲಾರಿ ಅವರು ಪುರುಷರ ಎಫ್‌46 ಶಾಟ್‌ಪಟ್‌ ಸ್ಪರ್ಧೆಯಲ್ಲಿ 14.56 ಮೀ. ಸಾಧನೆಯೊಡನೆ ಕೂಟ ದಾಖಲೆಯೊಡನೆ ಚಿನ್ನ ಗೆದ್ದರು. ಇನ್ನೊಂದು ಚಿನ್ನವನ್ನು ಪ್ಯಾರಾ ಶೂಟರ್‌ ಸಿದ್ದಾರ್ಥ ಬಾಬು ಆರ್ 6 50 ಮೀ. ಏರ್ ರೈಫಲ್ ವಿಭಾಗದಲ್ಲಿ ಚಿನ್ನ ಗೆದ್ದರು.

ಕಾಂಪೌಂಡ್ ಮಿಶ್ರ ತಂಡ ವಿಭಾಗದಲ್ಲಿ (ಶೀತಲ್ ದೇವಿ ಮತ್ತು ರಾಕೇಶ್ ಕುಮಾರ್) ಅವರು ಚೀನಾದ ಜೋಡಿಯನ್ನು 151- 149 ರಿಂದ ಸೋಲಿಸಿ ಚಿನ್ನ ಗೆದ್ದರು.

ಚೆಸ್‌ನಲ್ಲಿ ಭವೇಶ ಕುಮಾರ್‌ ಹಿಮಾನ್ಶಿ ಮಹಿಳೆಯರ ವೈಯಕ್ತಿಕ ವಿ1-ಬಿ1 ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡರು.

lokesh

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

7 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

8 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

9 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

9 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

10 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

10 hours ago