ಕ್ರೀಡೆ

ಪ್ಯಾರಾ ಏಷ್ಯನ್ ಗೇಮ್ಸ್ : 82 ಪದಕ ಗೆದ್ದು ದಾಖಲೆ ನಿರ್ಮಿಸಿದ ಭಾರತ

ಹ್ಯಾಂಗ್‍ಝೌ : ಭಾರತದ ಅಥ್ಲೆಟ್‌ ಗಳು, ಪ್ಯಾರಾ ಏಷ್ಯನ್ ಗೇಮ್ಸ್‌ ಇತಿಹಾಸದಲ್ಲೇ ದೇಶಕ್ಕೆ ಅತ್ಯಧಿಕ ಪದಕಗಳನ್ನು ಗೆಲ್ಲುವ ಮೂಲಕ ದಾಖಲೆ ಸ್ಥಾಪಿಸಿದರು. ಕೂಟದ ನಾಲ್ಕನೇ ದಿನವಾದ ಗುರುವಾರದ ಕೊನೆಗೆ ಭಾರತ 18 ಚಿನ್ನ ಸೇರಿದಂತೆ 82 ಪದಕಗಳನ್ನು ಗೆದ್ದುಕೊಂಡಿದೆ.

2018ರ ಜಕಾರ್ತಾ ಕೂಟದಲ್ಲಿ ಭಾರತದ ಅಥ್ಲೆಟ್‌ ಗಳು 72 ಪದಕಗಳನ್ನು (15 ಚಿನ್ನ-24 ಬೆಳ್ಳಿ-33 ಕಂಚು) ಗೆದ್ದುಕೊಂಡಿದ್ದು ಇದುವರೆಗಿನ ದಾಖಲೆ ಆಗಿತ್ತು. ಗುರುವಾರ ಒಂದೇ ದಿನ ಮೂರು ಚಿನ್ನ ಸೇರಿದಂತೆ 18 ಪದಕಗಳನ್ನು ಭಾರತದ ಅಥ್ಲೆಟ್‌ ಗಳು ಕೊರಳಿಗೆ ಹಾಕಿಕೊಂಡರು. ಭಾರತ ಒಟ್ಟಾರೆ 18 ಚಿನ್ನ, 23 ಬೆಳ್ಳಿ, 41 ಕಂಚಿನ ಪದಕಗಳನ್ನು ಗಳಿಸಿದೆ.

ಆದರೆ ಪದಕ ಪಟ್ಟಿಯಲ್ಲಿ ಭಾರತ, ಎರಡು ಸ್ಥಾನಗಳಷ್ಟು ಕುಸಿದಿದ್ದು ಎಂಟನೇ ಸ್ಥಾನಕ್ಕೆ ಸರಿಯಿತು. ಗುರುವಾರ ಹಲವು ಚಿನ್ನದ ಪದಕಗಳು ಪಣಕ್ಕಿದ್ದುದು ಇದಕ್ಕೆ ಒಂದು ಕಾರಣ. ಇನ್ನೂ ಎರಡು ದಿನ ಈ ಕೂಟ ನಡೆಯಲಿದ್ದು, ಭಾರತ ನೂರರ ಗಡಿಯನ್ನು ದಾಟುವ ಹಾದಿಯಲ್ಲಿ ದಿಟ್ಟ ಹೆಜ್ಜೆಯಿಟ್ಟಿದೆ.

ದಕ್ಷಿಣ ಕೊರಿಯಾ ಮತ್ತು ಇಂಡೋನೇಷ್ಯಾ ಭಾರತಕ್ಕಿಂತ ಮೇಲಿನ ಸ್ಥಾನ ಪಡೆದವು. ಸಿಂಹಪಾಲು ಪದಕ ಗೆದ್ದಿರುವ ಆತಿಥೇಯ ಚೀನಾ ಅಗ್ರಸ್ಥಾನದಲ್ಲೇ ಮುಂದುವರಿದಿದೆ. ಈ ತಂಡದ ಕ್ರೀಡಾಪಟುಗಳು 156 ಚಿನ್ನ, 128 ಬೆಳ್ಳಿ, 108 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.

ಅಥ್ಲೆಟಿಕ್ಸ್‌ನಲ್ಲಿ ಒಂದು ಚಿನ್ನ ಸೇರಿದಂತೆ ಎಂಟು ಪದಕಗಳನ್ನು ಭಾರತೀಯ ಕ್ರೀಡಾಪಟುಗಳು ಗೆದ್ದರು. ಭಾರತದ 82 ಪದಕಗಳಲ್ಲಿ ಅಥ್ಲೆಟಿಕ್ಸ್‌ನ ಕೊಡುಗೆ 45 ಪದಕಗಳು. 18ರಲ್ಲಿ 14 ಚಿನ್ನದ ಪದಕಗಳನ್ನು ಅಥ್ಲೆಟ್‌ಗಳೇ ಗೆದ್ದಿದ್ದಾರೆ.

ಸಚಿನ್‌ ಸರ್ಜೆರಾವ್‌ ಖಿಲಾರಿ ಅವರು ಪುರುಷರ ಎಫ್‌46 ಶಾಟ್‌ಪಟ್‌ ಸ್ಪರ್ಧೆಯಲ್ಲಿ 14.56 ಮೀ. ಸಾಧನೆಯೊಡನೆ ಕೂಟ ದಾಖಲೆಯೊಡನೆ ಚಿನ್ನ ಗೆದ್ದರು. ಇನ್ನೊಂದು ಚಿನ್ನವನ್ನು ಪ್ಯಾರಾ ಶೂಟರ್‌ ಸಿದ್ದಾರ್ಥ ಬಾಬು ಆರ್ 6 50 ಮೀ. ಏರ್ ರೈಫಲ್ ವಿಭಾಗದಲ್ಲಿ ಚಿನ್ನ ಗೆದ್ದರು.

ಕಾಂಪೌಂಡ್ ಮಿಶ್ರ ತಂಡ ವಿಭಾಗದಲ್ಲಿ (ಶೀತಲ್ ದೇವಿ ಮತ್ತು ರಾಕೇಶ್ ಕುಮಾರ್) ಅವರು ಚೀನಾದ ಜೋಡಿಯನ್ನು 151- 149 ರಿಂದ ಸೋಲಿಸಿ ಚಿನ್ನ ಗೆದ್ದರು.

ಚೆಸ್‌ನಲ್ಲಿ ಭವೇಶ ಕುಮಾರ್‌ ಹಿಮಾನ್ಶಿ ಮಹಿಳೆಯರ ವೈಯಕ್ತಿಕ ವಿ1-ಬಿ1 ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡರು.

lokesh

Recent Posts

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

1 hour ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

1 hour ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

1 hour ago

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…

1 hour ago

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…

1 hour ago

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…

1 hour ago