ಹ್ಯಾಂಗ್ಝೌ : ಭಾರತದ ಅಥ್ಲೆಟ್ ಗಳು, ಪ್ಯಾರಾ ಏಷ್ಯನ್ ಗೇಮ್ಸ್ ಇತಿಹಾಸದಲ್ಲೇ ದೇಶಕ್ಕೆ ಅತ್ಯಧಿಕ ಪದಕಗಳನ್ನು ಗೆಲ್ಲುವ ಮೂಲಕ ದಾಖಲೆ ಸ್ಥಾಪಿಸಿದರು. ಕೂಟದ ನಾಲ್ಕನೇ ದಿನವಾದ ಗುರುವಾರದ ಕೊನೆಗೆ ಭಾರತ 18 ಚಿನ್ನ ಸೇರಿದಂತೆ 82 ಪದಕಗಳನ್ನು ಗೆದ್ದುಕೊಂಡಿದೆ.
2018ರ ಜಕಾರ್ತಾ ಕೂಟದಲ್ಲಿ ಭಾರತದ ಅಥ್ಲೆಟ್ ಗಳು 72 ಪದಕಗಳನ್ನು (15 ಚಿನ್ನ-24 ಬೆಳ್ಳಿ-33 ಕಂಚು) ಗೆದ್ದುಕೊಂಡಿದ್ದು ಇದುವರೆಗಿನ ದಾಖಲೆ ಆಗಿತ್ತು. ಗುರುವಾರ ಒಂದೇ ದಿನ ಮೂರು ಚಿನ್ನ ಸೇರಿದಂತೆ 18 ಪದಕಗಳನ್ನು ಭಾರತದ ಅಥ್ಲೆಟ್ ಗಳು ಕೊರಳಿಗೆ ಹಾಕಿಕೊಂಡರು. ಭಾರತ ಒಟ್ಟಾರೆ 18 ಚಿನ್ನ, 23 ಬೆಳ್ಳಿ, 41 ಕಂಚಿನ ಪದಕಗಳನ್ನು ಗಳಿಸಿದೆ.
ಆದರೆ ಪದಕ ಪಟ್ಟಿಯಲ್ಲಿ ಭಾರತ, ಎರಡು ಸ್ಥಾನಗಳಷ್ಟು ಕುಸಿದಿದ್ದು ಎಂಟನೇ ಸ್ಥಾನಕ್ಕೆ ಸರಿಯಿತು. ಗುರುವಾರ ಹಲವು ಚಿನ್ನದ ಪದಕಗಳು ಪಣಕ್ಕಿದ್ದುದು ಇದಕ್ಕೆ ಒಂದು ಕಾರಣ. ಇನ್ನೂ ಎರಡು ದಿನ ಈ ಕೂಟ ನಡೆಯಲಿದ್ದು, ಭಾರತ ನೂರರ ಗಡಿಯನ್ನು ದಾಟುವ ಹಾದಿಯಲ್ಲಿ ದಿಟ್ಟ ಹೆಜ್ಜೆಯಿಟ್ಟಿದೆ.
ದಕ್ಷಿಣ ಕೊರಿಯಾ ಮತ್ತು ಇಂಡೋನೇಷ್ಯಾ ಭಾರತಕ್ಕಿಂತ ಮೇಲಿನ ಸ್ಥಾನ ಪಡೆದವು. ಸಿಂಹಪಾಲು ಪದಕ ಗೆದ್ದಿರುವ ಆತಿಥೇಯ ಚೀನಾ ಅಗ್ರಸ್ಥಾನದಲ್ಲೇ ಮುಂದುವರಿದಿದೆ. ಈ ತಂಡದ ಕ್ರೀಡಾಪಟುಗಳು 156 ಚಿನ್ನ, 128 ಬೆಳ್ಳಿ, 108 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.
ಅಥ್ಲೆಟಿಕ್ಸ್ನಲ್ಲಿ ಒಂದು ಚಿನ್ನ ಸೇರಿದಂತೆ ಎಂಟು ಪದಕಗಳನ್ನು ಭಾರತೀಯ ಕ್ರೀಡಾಪಟುಗಳು ಗೆದ್ದರು. ಭಾರತದ 82 ಪದಕಗಳಲ್ಲಿ ಅಥ್ಲೆಟಿಕ್ಸ್ನ ಕೊಡುಗೆ 45 ಪದಕಗಳು. 18ರಲ್ಲಿ 14 ಚಿನ್ನದ ಪದಕಗಳನ್ನು ಅಥ್ಲೆಟ್ಗಳೇ ಗೆದ್ದಿದ್ದಾರೆ.
ಸಚಿನ್ ಸರ್ಜೆರಾವ್ ಖಿಲಾರಿ ಅವರು ಪುರುಷರ ಎಫ್46 ಶಾಟ್ಪಟ್ ಸ್ಪರ್ಧೆಯಲ್ಲಿ 14.56 ಮೀ. ಸಾಧನೆಯೊಡನೆ ಕೂಟ ದಾಖಲೆಯೊಡನೆ ಚಿನ್ನ ಗೆದ್ದರು. ಇನ್ನೊಂದು ಚಿನ್ನವನ್ನು ಪ್ಯಾರಾ ಶೂಟರ್ ಸಿದ್ದಾರ್ಥ ಬಾಬು ಆರ್ 6 50 ಮೀ. ಏರ್ ರೈಫಲ್ ವಿಭಾಗದಲ್ಲಿ ಚಿನ್ನ ಗೆದ್ದರು.
ಕಾಂಪೌಂಡ್ ಮಿಶ್ರ ತಂಡ ವಿಭಾಗದಲ್ಲಿ (ಶೀತಲ್ ದೇವಿ ಮತ್ತು ರಾಕೇಶ್ ಕುಮಾರ್) ಅವರು ಚೀನಾದ ಜೋಡಿಯನ್ನು 151- 149 ರಿಂದ ಸೋಲಿಸಿ ಚಿನ್ನ ಗೆದ್ದರು.
ಚೆಸ್ನಲ್ಲಿ ಭವೇಶ ಕುಮಾರ್ ಹಿಮಾನ್ಶಿ ಮಹಿಳೆಯರ ವೈಯಕ್ತಿಕ ವಿ1-ಬಿ1 ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡರು.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…