ಕ್ರೀಡೆ

ಪ್ಯಾರಾ ಏಷ್ಯನ್ ಗೇಮ್ಸ್ : 82 ಪದಕ ಗೆದ್ದು ದಾಖಲೆ ನಿರ್ಮಿಸಿದ ಭಾರತ

ಹ್ಯಾಂಗ್‍ಝೌ : ಭಾರತದ ಅಥ್ಲೆಟ್‌ ಗಳು, ಪ್ಯಾರಾ ಏಷ್ಯನ್ ಗೇಮ್ಸ್‌ ಇತಿಹಾಸದಲ್ಲೇ ದೇಶಕ್ಕೆ ಅತ್ಯಧಿಕ ಪದಕಗಳನ್ನು ಗೆಲ್ಲುವ ಮೂಲಕ ದಾಖಲೆ ಸ್ಥಾಪಿಸಿದರು. ಕೂಟದ ನಾಲ್ಕನೇ ದಿನವಾದ ಗುರುವಾರದ ಕೊನೆಗೆ ಭಾರತ 18 ಚಿನ್ನ ಸೇರಿದಂತೆ 82 ಪದಕಗಳನ್ನು ಗೆದ್ದುಕೊಂಡಿದೆ.

2018ರ ಜಕಾರ್ತಾ ಕೂಟದಲ್ಲಿ ಭಾರತದ ಅಥ್ಲೆಟ್‌ ಗಳು 72 ಪದಕಗಳನ್ನು (15 ಚಿನ್ನ-24 ಬೆಳ್ಳಿ-33 ಕಂಚು) ಗೆದ್ದುಕೊಂಡಿದ್ದು ಇದುವರೆಗಿನ ದಾಖಲೆ ಆಗಿತ್ತು. ಗುರುವಾರ ಒಂದೇ ದಿನ ಮೂರು ಚಿನ್ನ ಸೇರಿದಂತೆ 18 ಪದಕಗಳನ್ನು ಭಾರತದ ಅಥ್ಲೆಟ್‌ ಗಳು ಕೊರಳಿಗೆ ಹಾಕಿಕೊಂಡರು. ಭಾರತ ಒಟ್ಟಾರೆ 18 ಚಿನ್ನ, 23 ಬೆಳ್ಳಿ, 41 ಕಂಚಿನ ಪದಕಗಳನ್ನು ಗಳಿಸಿದೆ.

ಆದರೆ ಪದಕ ಪಟ್ಟಿಯಲ್ಲಿ ಭಾರತ, ಎರಡು ಸ್ಥಾನಗಳಷ್ಟು ಕುಸಿದಿದ್ದು ಎಂಟನೇ ಸ್ಥಾನಕ್ಕೆ ಸರಿಯಿತು. ಗುರುವಾರ ಹಲವು ಚಿನ್ನದ ಪದಕಗಳು ಪಣಕ್ಕಿದ್ದುದು ಇದಕ್ಕೆ ಒಂದು ಕಾರಣ. ಇನ್ನೂ ಎರಡು ದಿನ ಈ ಕೂಟ ನಡೆಯಲಿದ್ದು, ಭಾರತ ನೂರರ ಗಡಿಯನ್ನು ದಾಟುವ ಹಾದಿಯಲ್ಲಿ ದಿಟ್ಟ ಹೆಜ್ಜೆಯಿಟ್ಟಿದೆ.

ದಕ್ಷಿಣ ಕೊರಿಯಾ ಮತ್ತು ಇಂಡೋನೇಷ್ಯಾ ಭಾರತಕ್ಕಿಂತ ಮೇಲಿನ ಸ್ಥಾನ ಪಡೆದವು. ಸಿಂಹಪಾಲು ಪದಕ ಗೆದ್ದಿರುವ ಆತಿಥೇಯ ಚೀನಾ ಅಗ್ರಸ್ಥಾನದಲ್ಲೇ ಮುಂದುವರಿದಿದೆ. ಈ ತಂಡದ ಕ್ರೀಡಾಪಟುಗಳು 156 ಚಿನ್ನ, 128 ಬೆಳ್ಳಿ, 108 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.

ಅಥ್ಲೆಟಿಕ್ಸ್‌ನಲ್ಲಿ ಒಂದು ಚಿನ್ನ ಸೇರಿದಂತೆ ಎಂಟು ಪದಕಗಳನ್ನು ಭಾರತೀಯ ಕ್ರೀಡಾಪಟುಗಳು ಗೆದ್ದರು. ಭಾರತದ 82 ಪದಕಗಳಲ್ಲಿ ಅಥ್ಲೆಟಿಕ್ಸ್‌ನ ಕೊಡುಗೆ 45 ಪದಕಗಳು. 18ರಲ್ಲಿ 14 ಚಿನ್ನದ ಪದಕಗಳನ್ನು ಅಥ್ಲೆಟ್‌ಗಳೇ ಗೆದ್ದಿದ್ದಾರೆ.

ಸಚಿನ್‌ ಸರ್ಜೆರಾವ್‌ ಖಿಲಾರಿ ಅವರು ಪುರುಷರ ಎಫ್‌46 ಶಾಟ್‌ಪಟ್‌ ಸ್ಪರ್ಧೆಯಲ್ಲಿ 14.56 ಮೀ. ಸಾಧನೆಯೊಡನೆ ಕೂಟ ದಾಖಲೆಯೊಡನೆ ಚಿನ್ನ ಗೆದ್ದರು. ಇನ್ನೊಂದು ಚಿನ್ನವನ್ನು ಪ್ಯಾರಾ ಶೂಟರ್‌ ಸಿದ್ದಾರ್ಥ ಬಾಬು ಆರ್ 6 50 ಮೀ. ಏರ್ ರೈಫಲ್ ವಿಭಾಗದಲ್ಲಿ ಚಿನ್ನ ಗೆದ್ದರು.

ಕಾಂಪೌಂಡ್ ಮಿಶ್ರ ತಂಡ ವಿಭಾಗದಲ್ಲಿ (ಶೀತಲ್ ದೇವಿ ಮತ್ತು ರಾಕೇಶ್ ಕುಮಾರ್) ಅವರು ಚೀನಾದ ಜೋಡಿಯನ್ನು 151- 149 ರಿಂದ ಸೋಲಿಸಿ ಚಿನ್ನ ಗೆದ್ದರು.

ಚೆಸ್‌ನಲ್ಲಿ ಭವೇಶ ಕುಮಾರ್‌ ಹಿಮಾನ್ಶಿ ಮಹಿಳೆಯರ ವೈಯಕ್ತಿಕ ವಿ1-ಬಿ1 ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡರು.

lokesh

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago