ಕ್ರೀಡೆ

ಪ್ಯಾರಾ ಏಷ್ಯನ್ ಗೇಮ್ಸ್ : 82 ಪದಕ ಗೆದ್ದು ದಾಖಲೆ ನಿರ್ಮಿಸಿದ ಭಾರತ

ಹ್ಯಾಂಗ್‍ಝೌ : ಭಾರತದ ಅಥ್ಲೆಟ್‌ ಗಳು, ಪ್ಯಾರಾ ಏಷ್ಯನ್ ಗೇಮ್ಸ್‌ ಇತಿಹಾಸದಲ್ಲೇ ದೇಶಕ್ಕೆ ಅತ್ಯಧಿಕ ಪದಕಗಳನ್ನು ಗೆಲ್ಲುವ ಮೂಲಕ ದಾಖಲೆ ಸ್ಥಾಪಿಸಿದರು. ಕೂಟದ ನಾಲ್ಕನೇ ದಿನವಾದ ಗುರುವಾರದ ಕೊನೆಗೆ ಭಾರತ 18 ಚಿನ್ನ ಸೇರಿದಂತೆ 82 ಪದಕಗಳನ್ನು ಗೆದ್ದುಕೊಂಡಿದೆ.

2018ರ ಜಕಾರ್ತಾ ಕೂಟದಲ್ಲಿ ಭಾರತದ ಅಥ್ಲೆಟ್‌ ಗಳು 72 ಪದಕಗಳನ್ನು (15 ಚಿನ್ನ-24 ಬೆಳ್ಳಿ-33 ಕಂಚು) ಗೆದ್ದುಕೊಂಡಿದ್ದು ಇದುವರೆಗಿನ ದಾಖಲೆ ಆಗಿತ್ತು. ಗುರುವಾರ ಒಂದೇ ದಿನ ಮೂರು ಚಿನ್ನ ಸೇರಿದಂತೆ 18 ಪದಕಗಳನ್ನು ಭಾರತದ ಅಥ್ಲೆಟ್‌ ಗಳು ಕೊರಳಿಗೆ ಹಾಕಿಕೊಂಡರು. ಭಾರತ ಒಟ್ಟಾರೆ 18 ಚಿನ್ನ, 23 ಬೆಳ್ಳಿ, 41 ಕಂಚಿನ ಪದಕಗಳನ್ನು ಗಳಿಸಿದೆ.

ಆದರೆ ಪದಕ ಪಟ್ಟಿಯಲ್ಲಿ ಭಾರತ, ಎರಡು ಸ್ಥಾನಗಳಷ್ಟು ಕುಸಿದಿದ್ದು ಎಂಟನೇ ಸ್ಥಾನಕ್ಕೆ ಸರಿಯಿತು. ಗುರುವಾರ ಹಲವು ಚಿನ್ನದ ಪದಕಗಳು ಪಣಕ್ಕಿದ್ದುದು ಇದಕ್ಕೆ ಒಂದು ಕಾರಣ. ಇನ್ನೂ ಎರಡು ದಿನ ಈ ಕೂಟ ನಡೆಯಲಿದ್ದು, ಭಾರತ ನೂರರ ಗಡಿಯನ್ನು ದಾಟುವ ಹಾದಿಯಲ್ಲಿ ದಿಟ್ಟ ಹೆಜ್ಜೆಯಿಟ್ಟಿದೆ.

ದಕ್ಷಿಣ ಕೊರಿಯಾ ಮತ್ತು ಇಂಡೋನೇಷ್ಯಾ ಭಾರತಕ್ಕಿಂತ ಮೇಲಿನ ಸ್ಥಾನ ಪಡೆದವು. ಸಿಂಹಪಾಲು ಪದಕ ಗೆದ್ದಿರುವ ಆತಿಥೇಯ ಚೀನಾ ಅಗ್ರಸ್ಥಾನದಲ್ಲೇ ಮುಂದುವರಿದಿದೆ. ಈ ತಂಡದ ಕ್ರೀಡಾಪಟುಗಳು 156 ಚಿನ್ನ, 128 ಬೆಳ್ಳಿ, 108 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.

ಅಥ್ಲೆಟಿಕ್ಸ್‌ನಲ್ಲಿ ಒಂದು ಚಿನ್ನ ಸೇರಿದಂತೆ ಎಂಟು ಪದಕಗಳನ್ನು ಭಾರತೀಯ ಕ್ರೀಡಾಪಟುಗಳು ಗೆದ್ದರು. ಭಾರತದ 82 ಪದಕಗಳಲ್ಲಿ ಅಥ್ಲೆಟಿಕ್ಸ್‌ನ ಕೊಡುಗೆ 45 ಪದಕಗಳು. 18ರಲ್ಲಿ 14 ಚಿನ್ನದ ಪದಕಗಳನ್ನು ಅಥ್ಲೆಟ್‌ಗಳೇ ಗೆದ್ದಿದ್ದಾರೆ.

ಸಚಿನ್‌ ಸರ್ಜೆರಾವ್‌ ಖಿಲಾರಿ ಅವರು ಪುರುಷರ ಎಫ್‌46 ಶಾಟ್‌ಪಟ್‌ ಸ್ಪರ್ಧೆಯಲ್ಲಿ 14.56 ಮೀ. ಸಾಧನೆಯೊಡನೆ ಕೂಟ ದಾಖಲೆಯೊಡನೆ ಚಿನ್ನ ಗೆದ್ದರು. ಇನ್ನೊಂದು ಚಿನ್ನವನ್ನು ಪ್ಯಾರಾ ಶೂಟರ್‌ ಸಿದ್ದಾರ್ಥ ಬಾಬು ಆರ್ 6 50 ಮೀ. ಏರ್ ರೈಫಲ್ ವಿಭಾಗದಲ್ಲಿ ಚಿನ್ನ ಗೆದ್ದರು.

ಕಾಂಪೌಂಡ್ ಮಿಶ್ರ ತಂಡ ವಿಭಾಗದಲ್ಲಿ (ಶೀತಲ್ ದೇವಿ ಮತ್ತು ರಾಕೇಶ್ ಕುಮಾರ್) ಅವರು ಚೀನಾದ ಜೋಡಿಯನ್ನು 151- 149 ರಿಂದ ಸೋಲಿಸಿ ಚಿನ್ನ ಗೆದ್ದರು.

ಚೆಸ್‌ನಲ್ಲಿ ಭವೇಶ ಕುಮಾರ್‌ ಹಿಮಾನ್ಶಿ ಮಹಿಳೆಯರ ವೈಯಕ್ತಿಕ ವಿ1-ಬಿ1 ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡರು.

lokesh

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

4 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

5 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago