ಪ್ಯಾರಿಸ್: ಭಾರತದ ಅನುಭವಿ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಅವರು ಕ್ವಾರ್ಟರ್ ಫೈನಲ್ಸ್ನಲ್ಲಿ ಕೊರಿಯಾ ಆಟಗಾರ್ತಿ ಮುಂದೆ ಶರಣಾಗುವ ಮೂಲಕ ಒಲಂಪಿಕ್ಸ್ ಅಭಿಯಾನವನ್ನು ಅಂತಿಮಗೊಳಿಸಿದ್ದಾರೆ. ಆ ಮೂಲಕ ಆರ್ಚರಿ ಅಭಿಯಾನ ಇಲ್ಲಿಗೆ ಅಂತ್ಯವಾಗಿದೆ.
ಕೊರಿಯಾದ ಸಯಾನ್ ನಾಮ್ ವಿರುದ್ಧ 6-4ರ ಅಂತರದಿಂದ ಸೋಲುವ ಮೂಲಕ ಪ್ರಶಸ್ತಿ ಸುತ್ತಿನಲ್ಲಿ ಎಡವಿದ್ದಾರೆ. ಮೊದಲು ಈ ಈ ಇಬ್ಬರು ಆಟಗಾರರು ಮೊದಲಿಗೆ 4-4ರ ಸಮಬಲದಲ್ಲಿ ಕಾದಾಟ ನಡೆಸುತ್ತಿದ್ದರು. ಇದಾದ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನಾಮ್ ಮುನ್ನಡೆ ಕಾಯ್ದುಕೊಂಡು ಸೆಮಿಸ್ ತಲುಪಿದರು.
ಇವರ ಸೋಲಿನೊಂದಿಗೆ ಭಾರತ ಒಲಂಪಿಕ್ಸ್ನ ಆರ್ಚರಿ ವಿಭಾಗದ ಹೋರಾಟ ಅಂತ್ಯವಾಗಿದೆ. ಜರ್ಮನಿಯ ಮಿಷೆನ್ ಕ್ರೊಪ್ಟೆನ್ ಅವರನ್ನು 6-4 ಅಂತರದಿಂದ ಸೋಲಿಸಿದ ದೀಪಿಕಾ ಕ್ವಾರ್ಟರ್ಸ್ಗೆ ಲಗ್ಗೆಯಿಟ್ಟಿದ್ದರು. ಕ್ವಾರ್ಟರ್ಸ್ನಲ್ಲಿ ಕೊರಿಯಾದ 19 ವರ್ಷದ ನಾಮ್ ವಿರುದ್ಧ ಸೋಲು ಕಂಡು ಹೊರಬಂದಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಬರುವ…
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…
ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್ಗೆ ಪ್ರಯಾಣಿಸಲಿದ್ದಾರೆ ಎಂದು…