ಕ್ರೀಡೆ

Paris Olympics 2024: ದೀಪಿಕಾಗೆ ಸೋಲು; ಆರ್ಚರಿ ಅಭಿಯಾನ ಮುಗಿಸಿದ ಭಾರತ

ಪ್ಯಾರಿಸ್‌: ಭಾರತದ ಅನುಭವಿ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಅವರು ಕ್ವಾರ್ಟರ್‌ ಫೈನಲ್ಸ್‌ನಲ್ಲಿ ಕೊರಿಯಾ ಆಟಗಾರ್ತಿ ಮುಂದೆ ಶರಣಾಗುವ ಮೂಲಕ ಒಲಂಪಿಕ್ಸ್‌ ಅಭಿಯಾನವನ್ನು ಅಂತಿಮಗೊಳಿಸಿದ್ದಾರೆ. ಆ ಮೂಲಕ ಆರ್ಚರಿ ಅಭಿಯಾನ ಇಲ್ಲಿಗೆ ಅಂತ್ಯವಾಗಿದೆ.

ಕೊರಿಯಾದ ಸಯಾನ್‌ ನಾಮ್‌ ವಿರುದ್ಧ 6-4ರ ಅಂತರದಿಂದ ಸೋಲುವ ಮೂಲಕ ಪ್ರಶಸ್ತಿ ಸುತ್ತಿನಲ್ಲಿ ಎಡವಿದ್ದಾರೆ. ಮೊದಲು ಈ ಈ ಇಬ್ಬರು ಆಟಗಾರರು ಮೊದಲಿಗೆ 4-4ರ ಸಮಬಲದಲ್ಲಿ ಕಾದಾಟ ನಡೆಸುತ್ತಿದ್ದರು. ಇದಾದ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನಾಮ್‌ ಮುನ್ನಡೆ ಕಾಯ್ದುಕೊಂಡು ಸೆಮಿಸ್‌ ತಲುಪಿದರು.

ಇವರ ಸೋಲಿನೊಂದಿಗೆ ಭಾರತ ಒಲಂಪಿಕ್ಸ್‌ನ ಆರ್ಚರಿ ವಿಭಾಗದ ಹೋರಾಟ ಅಂತ್ಯವಾಗಿದೆ. ಜರ್ಮನಿಯ ಮಿಷೆನ್‌ ಕ್ರೊಪ್ಟೆನ್‌ ಅವರನ್ನು 6-4 ಅಂತರದಿಂದ ಸೋಲಿಸಿದ ದೀಪಿಕಾ ಕ್ವಾರ್ಟರ್ಸ್‌ಗೆ ಲಗ್ಗೆಯಿಟ್ಟಿದ್ದರು. ಕ್ವಾರ್ಟರ್ಸ್‌ನಲ್ಲಿ ಕೊರಿಯಾದ 19 ವರ್ಷದ ನಾಮ್‌ ವಿರುದ್ಧ ಸೋಲು ಕಂಡು ಹೊರಬಂದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಪಘಾತದಲ್ಲಿ ಗಾಯಗೊಂಡವನಿಂದ 80 ಸಾವಿರ ದೋಚಿದ್ದ ಇಬ್ಬರು ಅರೆಸ್ಟ್‌

ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್‌ ಹಾಗೂ…

10 mins ago

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…

36 mins ago

ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌: ಕಿಚ್ಚ ಸುದೀಪ್‌ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ವಾರ್‌ ಬಗ್ಗೆ ನಟ ಕಿಚ್ಚ ಸುದೀಪ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…

59 mins ago

ಓದುಗರ ಪತ್ರ: ಮರಗಳ ಕೊಂಬೆಗಳನ್ನು ಕತ್ತರಿಸಿ

ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…

1 hour ago

ಓದುಗರ ಪತ್ರ:  ಕುಸ್ತಿಪಟುಗಳಿಗೆ ತರಬೇತಿ ಸ್ವಾಗತಾರ್ಹ

ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…

2 hours ago

ಓದುಗರ ಪತ್ರ:  ರಾಜ್ಯ ಸರ್ಕಾರಿ ನೌಕರರಿಗೆ ವಸ್ತ್ರಸಂಹಿತೆ ಒಳ್ಳೆಯ ಬೆಳವಣಿಗೆ

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…

2 hours ago