ಕ್ರೀಡೆ

Paris Olympics 2024: ದೀಪಿಕಾಗೆ ಸೋಲು; ಆರ್ಚರಿ ಅಭಿಯಾನ ಮುಗಿಸಿದ ಭಾರತ

ಪ್ಯಾರಿಸ್‌: ಭಾರತದ ಅನುಭವಿ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಅವರು ಕ್ವಾರ್ಟರ್‌ ಫೈನಲ್ಸ್‌ನಲ್ಲಿ ಕೊರಿಯಾ ಆಟಗಾರ್ತಿ ಮುಂದೆ ಶರಣಾಗುವ ಮೂಲಕ ಒಲಂಪಿಕ್ಸ್‌ ಅಭಿಯಾನವನ್ನು ಅಂತಿಮಗೊಳಿಸಿದ್ದಾರೆ. ಆ ಮೂಲಕ ಆರ್ಚರಿ ಅಭಿಯಾನ ಇಲ್ಲಿಗೆ ಅಂತ್ಯವಾಗಿದೆ.

ಕೊರಿಯಾದ ಸಯಾನ್‌ ನಾಮ್‌ ವಿರುದ್ಧ 6-4ರ ಅಂತರದಿಂದ ಸೋಲುವ ಮೂಲಕ ಪ್ರಶಸ್ತಿ ಸುತ್ತಿನಲ್ಲಿ ಎಡವಿದ್ದಾರೆ. ಮೊದಲು ಈ ಈ ಇಬ್ಬರು ಆಟಗಾರರು ಮೊದಲಿಗೆ 4-4ರ ಸಮಬಲದಲ್ಲಿ ಕಾದಾಟ ನಡೆಸುತ್ತಿದ್ದರು. ಇದಾದ ಬಳಿಕ ಪಂದ್ಯದ ಮೇಲೆ ಹಿಡಿತ ಸಾಧಿಸಿದ ನಾಮ್‌ ಮುನ್ನಡೆ ಕಾಯ್ದುಕೊಂಡು ಸೆಮಿಸ್‌ ತಲುಪಿದರು.

ಇವರ ಸೋಲಿನೊಂದಿಗೆ ಭಾರತ ಒಲಂಪಿಕ್ಸ್‌ನ ಆರ್ಚರಿ ವಿಭಾಗದ ಹೋರಾಟ ಅಂತ್ಯವಾಗಿದೆ. ಜರ್ಮನಿಯ ಮಿಷೆನ್‌ ಕ್ರೊಪ್ಟೆನ್‌ ಅವರನ್ನು 6-4 ಅಂತರದಿಂದ ಸೋಲಿಸಿದ ದೀಪಿಕಾ ಕ್ವಾರ್ಟರ್ಸ್‌ಗೆ ಲಗ್ಗೆಯಿಟ್ಟಿದ್ದರು. ಕ್ವಾರ್ಟರ್ಸ್‌ನಲ್ಲಿ ಕೊರಿಯಾದ 19 ವರ್ಷದ ನಾಮ್‌ ವಿರುದ್ಧ ಸೋಲು ಕಂಡು ಹೊರಬಂದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಫಾರಿ ಟಿಕೆಟ್ ದರ ಹೆಚ್ಚಳ; ಪ್ರವಾಸಿಗರಿಗೆ ಹೊರೆ

ದಾ.ರಾ.ಮಹೇಶ್ ಪರಿಷ್ಕತ ಶುಲ್ಕ ಸೆಪ್ಟೆಂಬರ್ ೧ರಿಂದ ಜಾರಿ; ಸಫಾರಿ ಸಮಯ ೧ ಗಂಟೆ ಹೆಚ್ಚಳ ಹನಗೋಡು : ಬಂಡೀಪುರ ಮತ್ತು…

37 seconds ago

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

10 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

24 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

24 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 day ago