ಕ್ರೀಡೆ

Paris Olympics 2024: ಹಾಕಿಯಲ್ಲಿ ಬ್ರಿಡನ್‌ ಮಣಿಸಿ ಸೆಮಿಸ್‌ ಪ್ರವೇಶಿಸಿದ ಭಾರತ

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ 2024ರ ಹಾಕಿ ಟೂರ್ನಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರುತ್ತಿರುವ ಭಾರತ ತಂಡ ಇಂದಿನ (ಆ.4) ಪಂದ್ಯದಲ್ಲಿ ಗ್ರೇಟ್‌ ಬ್ರಿಟನ್‌ ಮಣಿಸುವ ಮೂಲಕ ಸೆಮಿಸ್‌ಗೆ ಎಂಟ್ರಿ ಕೊಟ್ಟಿದೆ.

ಭಾನುವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಹಾಕಿ ಪಂದ್ಯಾವಳಿಯ ಸೆಮಿಫೈನಲ್‌ಗೆ ಪ್ರವೇಶಿಸಲು ಭಾರತವು ಗ್ರೇಟ್ ಬ್ರಿಟನ್‌ನನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಗೋಲುಗಳಿಂದ ಸೋಲಿಸಿ ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿತು.

40 ನಿಮಿಷಗಳಿಗಿಂತ ಹೆಚ್ಚು ಕಾಲ ನಡೆದ ಈ ಗೇಮ್ಸ್‌ನಲ್ಲಿ ಭಾರತದ ಆಟಗಾರರು ಕೇವಲ ಹತ್ತು ಜನರು ಮಾತ್ರ ಆಡಿದ್ದರು. ಗ್ರೇಟ್ ಬ್ರಿಟನ್ ಆಟಗಾರನ ವಿರುದ್ಧ ಸ್ಟಿಕ್ ಎತ್ತಿದ್ದಕ್ಕಾಗಿ ಅಮಿತ್ ರೋಹಿದಾಸ್ ರೆಡ್ ಕಾರ್ಡ್ ತೋರಿಸಿದ ನಂತರ ಭಾರತ ತಂಡದಲ್ಲಿ 10 ಜನ ಮಾತ್ರ ಪಂದ್ಯವನ್ನು ಆಡಿದರು.

ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯಾವಳಿಯನ್ನು ಆಡುತ್ತಿರುವ ಹಿರಿಯ ಆಟಗಾರ ಪಿಆರ್ ಶ್ರೀಜೇಶ್, ಬಲಿಷ್ಠ ಬ್ರಿಟನ್‌ ಹೊಡೆತಗಳನ್ನು ಸಮರ್ಥವಾಗಿ ತಡೆಯುವ ಮೂಲಕ ತಂಡಕ್ಕೆ ಆಸರೆಯಾದರು.

22ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಿಂದ ಹರ್ಮನ್‌ಪ್ರೀತ್ ಸಿಂಗ್ ಅವರ ಗೋಲ್‌ ಮೂಲಕ ಮುನ್ನಡೆ ಭಾರತ ಮೊದಲ ಮುನ್ನಡೆ ಸಾಧಿಸಿದರೇ, ಇದಕ್ಕೆ ಉತ್ತರವಾಗಿ 27ನೇ ನಿಮಿಷದಲ್ಲಿ ಲೀ ಮಾರ್ಟನ್ ಮೂಲಕ ಗ್ರೇಟ್ ಬ್ರಿಟನ್ ಸಮಬಲ ಸಾಧಿಸಿತು.

ಇದಾದ ಬಳಿಕ ಕೊನೆಗೆ ಪೆನಾಲ್ಟಿ ಶೂಟ್‌ಔಟ್‌ಗೆ ಪಂದ್ಯ ವಾಲಿತು. ಇದರಲ್ಲಿ ಸಮರ್ಥವಾಗಿ ಆಡಿದ ಭಾರತ 4-2 ಗೋಲುಗಳಿಂದ ಬ್ರಿಟನ್‌ ಸೋಲಿಸಿ ಸೆಮಿಸ್‌ ತಲುಪಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

6 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

6 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

7 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

8 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

8 hours ago