ಕ್ರೀಡೆ

Paris Olympics 2024: ಹಾಕಿಯಲ್ಲಿ ಬ್ರಿಡನ್‌ ಮಣಿಸಿ ಸೆಮಿಸ್‌ ಪ್ರವೇಶಿಸಿದ ಭಾರತ

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ 2024ರ ಹಾಕಿ ಟೂರ್ನಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರುತ್ತಿರುವ ಭಾರತ ತಂಡ ಇಂದಿನ (ಆ.4) ಪಂದ್ಯದಲ್ಲಿ ಗ್ರೇಟ್‌ ಬ್ರಿಟನ್‌ ಮಣಿಸುವ ಮೂಲಕ ಸೆಮಿಸ್‌ಗೆ ಎಂಟ್ರಿ ಕೊಟ್ಟಿದೆ.

ಭಾನುವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಹಾಕಿ ಪಂದ್ಯಾವಳಿಯ ಸೆಮಿಫೈನಲ್‌ಗೆ ಪ್ರವೇಶಿಸಲು ಭಾರತವು ಗ್ರೇಟ್ ಬ್ರಿಟನ್‌ನನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಗೋಲುಗಳಿಂದ ಸೋಲಿಸಿ ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿತು.

40 ನಿಮಿಷಗಳಿಗಿಂತ ಹೆಚ್ಚು ಕಾಲ ನಡೆದ ಈ ಗೇಮ್ಸ್‌ನಲ್ಲಿ ಭಾರತದ ಆಟಗಾರರು ಕೇವಲ ಹತ್ತು ಜನರು ಮಾತ್ರ ಆಡಿದ್ದರು. ಗ್ರೇಟ್ ಬ್ರಿಟನ್ ಆಟಗಾರನ ವಿರುದ್ಧ ಸ್ಟಿಕ್ ಎತ್ತಿದ್ದಕ್ಕಾಗಿ ಅಮಿತ್ ರೋಹಿದಾಸ್ ರೆಡ್ ಕಾರ್ಡ್ ತೋರಿಸಿದ ನಂತರ ಭಾರತ ತಂಡದಲ್ಲಿ 10 ಜನ ಮಾತ್ರ ಪಂದ್ಯವನ್ನು ಆಡಿದರು.

ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯಾವಳಿಯನ್ನು ಆಡುತ್ತಿರುವ ಹಿರಿಯ ಆಟಗಾರ ಪಿಆರ್ ಶ್ರೀಜೇಶ್, ಬಲಿಷ್ಠ ಬ್ರಿಟನ್‌ ಹೊಡೆತಗಳನ್ನು ಸಮರ್ಥವಾಗಿ ತಡೆಯುವ ಮೂಲಕ ತಂಡಕ್ಕೆ ಆಸರೆಯಾದರು.

22ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಿಂದ ಹರ್ಮನ್‌ಪ್ರೀತ್ ಸಿಂಗ್ ಅವರ ಗೋಲ್‌ ಮೂಲಕ ಮುನ್ನಡೆ ಭಾರತ ಮೊದಲ ಮುನ್ನಡೆ ಸಾಧಿಸಿದರೇ, ಇದಕ್ಕೆ ಉತ್ತರವಾಗಿ 27ನೇ ನಿಮಿಷದಲ್ಲಿ ಲೀ ಮಾರ್ಟನ್ ಮೂಲಕ ಗ್ರೇಟ್ ಬ್ರಿಟನ್ ಸಮಬಲ ಸಾಧಿಸಿತು.

ಇದಾದ ಬಳಿಕ ಕೊನೆಗೆ ಪೆನಾಲ್ಟಿ ಶೂಟ್‌ಔಟ್‌ಗೆ ಪಂದ್ಯ ವಾಲಿತು. ಇದರಲ್ಲಿ ಸಮರ್ಥವಾಗಿ ಆಡಿದ ಭಾರತ 4-2 ಗೋಲುಗಳಿಂದ ಬ್ರಿಟನ್‌ ಸೋಲಿಸಿ ಸೆಮಿಸ್‌ ತಲುಪಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

5 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

6 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

6 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

7 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

7 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

7 hours ago