ಕ್ರೀಡೆ

Paris Olympics 2024: ಹಾಕಿಯಲ್ಲಿ ಬ್ರಿಡನ್‌ ಮಣಿಸಿ ಸೆಮಿಸ್‌ ಪ್ರವೇಶಿಸಿದ ಭಾರತ

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ 2024ರ ಹಾಕಿ ಟೂರ್ನಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರುತ್ತಿರುವ ಭಾರತ ತಂಡ ಇಂದಿನ (ಆ.4) ಪಂದ್ಯದಲ್ಲಿ ಗ್ರೇಟ್‌ ಬ್ರಿಟನ್‌ ಮಣಿಸುವ ಮೂಲಕ ಸೆಮಿಸ್‌ಗೆ ಎಂಟ್ರಿ ಕೊಟ್ಟಿದೆ.

ಭಾನುವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಹಾಕಿ ಪಂದ್ಯಾವಳಿಯ ಸೆಮಿಫೈನಲ್‌ಗೆ ಪ್ರವೇಶಿಸಲು ಭಾರತವು ಗ್ರೇಟ್ ಬ್ರಿಟನ್‌ನನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಗೋಲುಗಳಿಂದ ಸೋಲಿಸಿ ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿತು.

40 ನಿಮಿಷಗಳಿಗಿಂತ ಹೆಚ್ಚು ಕಾಲ ನಡೆದ ಈ ಗೇಮ್ಸ್‌ನಲ್ಲಿ ಭಾರತದ ಆಟಗಾರರು ಕೇವಲ ಹತ್ತು ಜನರು ಮಾತ್ರ ಆಡಿದ್ದರು. ಗ್ರೇಟ್ ಬ್ರಿಟನ್ ಆಟಗಾರನ ವಿರುದ್ಧ ಸ್ಟಿಕ್ ಎತ್ತಿದ್ದಕ್ಕಾಗಿ ಅಮಿತ್ ರೋಹಿದಾಸ್ ರೆಡ್ ಕಾರ್ಡ್ ತೋರಿಸಿದ ನಂತರ ಭಾರತ ತಂಡದಲ್ಲಿ 10 ಜನ ಮಾತ್ರ ಪಂದ್ಯವನ್ನು ಆಡಿದರು.

ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯಾವಳಿಯನ್ನು ಆಡುತ್ತಿರುವ ಹಿರಿಯ ಆಟಗಾರ ಪಿಆರ್ ಶ್ರೀಜೇಶ್, ಬಲಿಷ್ಠ ಬ್ರಿಟನ್‌ ಹೊಡೆತಗಳನ್ನು ಸಮರ್ಥವಾಗಿ ತಡೆಯುವ ಮೂಲಕ ತಂಡಕ್ಕೆ ಆಸರೆಯಾದರು.

22ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಿಂದ ಹರ್ಮನ್‌ಪ್ರೀತ್ ಸಿಂಗ್ ಅವರ ಗೋಲ್‌ ಮೂಲಕ ಮುನ್ನಡೆ ಭಾರತ ಮೊದಲ ಮುನ್ನಡೆ ಸಾಧಿಸಿದರೇ, ಇದಕ್ಕೆ ಉತ್ತರವಾಗಿ 27ನೇ ನಿಮಿಷದಲ್ಲಿ ಲೀ ಮಾರ್ಟನ್ ಮೂಲಕ ಗ್ರೇಟ್ ಬ್ರಿಟನ್ ಸಮಬಲ ಸಾಧಿಸಿತು.

ಇದಾದ ಬಳಿಕ ಕೊನೆಗೆ ಪೆನಾಲ್ಟಿ ಶೂಟ್‌ಔಟ್‌ಗೆ ಪಂದ್ಯ ವಾಲಿತು. ಇದರಲ್ಲಿ ಸಮರ್ಥವಾಗಿ ಆಡಿದ ಭಾರತ 4-2 ಗೋಲುಗಳಿಂದ ಬ್ರಿಟನ್‌ ಸೋಲಿಸಿ ಸೆಮಿಸ್‌ ತಲುಪಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

22 mins ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

55 mins ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

1 hour ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

4 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

6 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

7 hours ago