ಕ್ರೀಡೆ

Paris Olympics 2024: ಹಾಕಿಯಲ್ಲಿ ಬ್ರಿಡನ್‌ ಮಣಿಸಿ ಸೆಮಿಸ್‌ ಪ್ರವೇಶಿಸಿದ ಭಾರತ

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ 2024ರ ಹಾಕಿ ಟೂರ್ನಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರುತ್ತಿರುವ ಭಾರತ ತಂಡ ಇಂದಿನ (ಆ.4) ಪಂದ್ಯದಲ್ಲಿ ಗ್ರೇಟ್‌ ಬ್ರಿಟನ್‌ ಮಣಿಸುವ ಮೂಲಕ ಸೆಮಿಸ್‌ಗೆ ಎಂಟ್ರಿ ಕೊಟ್ಟಿದೆ.

ಭಾನುವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಹಾಕಿ ಪಂದ್ಯಾವಳಿಯ ಸೆಮಿಫೈನಲ್‌ಗೆ ಪ್ರವೇಶಿಸಲು ಭಾರತವು ಗ್ರೇಟ್ ಬ್ರಿಟನ್‌ನನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಗೋಲುಗಳಿಂದ ಸೋಲಿಸಿ ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿತು.

40 ನಿಮಿಷಗಳಿಗಿಂತ ಹೆಚ್ಚು ಕಾಲ ನಡೆದ ಈ ಗೇಮ್ಸ್‌ನಲ್ಲಿ ಭಾರತದ ಆಟಗಾರರು ಕೇವಲ ಹತ್ತು ಜನರು ಮಾತ್ರ ಆಡಿದ್ದರು. ಗ್ರೇಟ್ ಬ್ರಿಟನ್ ಆಟಗಾರನ ವಿರುದ್ಧ ಸ್ಟಿಕ್ ಎತ್ತಿದ್ದಕ್ಕಾಗಿ ಅಮಿತ್ ರೋಹಿದಾಸ್ ರೆಡ್ ಕಾರ್ಡ್ ತೋರಿಸಿದ ನಂತರ ಭಾರತ ತಂಡದಲ್ಲಿ 10 ಜನ ಮಾತ್ರ ಪಂದ್ಯವನ್ನು ಆಡಿದರು.

ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯಾವಳಿಯನ್ನು ಆಡುತ್ತಿರುವ ಹಿರಿಯ ಆಟಗಾರ ಪಿಆರ್ ಶ್ರೀಜೇಶ್, ಬಲಿಷ್ಠ ಬ್ರಿಟನ್‌ ಹೊಡೆತಗಳನ್ನು ಸಮರ್ಥವಾಗಿ ತಡೆಯುವ ಮೂಲಕ ತಂಡಕ್ಕೆ ಆಸರೆಯಾದರು.

22ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಿಂದ ಹರ್ಮನ್‌ಪ್ರೀತ್ ಸಿಂಗ್ ಅವರ ಗೋಲ್‌ ಮೂಲಕ ಮುನ್ನಡೆ ಭಾರತ ಮೊದಲ ಮುನ್ನಡೆ ಸಾಧಿಸಿದರೇ, ಇದಕ್ಕೆ ಉತ್ತರವಾಗಿ 27ನೇ ನಿಮಿಷದಲ್ಲಿ ಲೀ ಮಾರ್ಟನ್ ಮೂಲಕ ಗ್ರೇಟ್ ಬ್ರಿಟನ್ ಸಮಬಲ ಸಾಧಿಸಿತು.

ಇದಾದ ಬಳಿಕ ಕೊನೆಗೆ ಪೆನಾಲ್ಟಿ ಶೂಟ್‌ಔಟ್‌ಗೆ ಪಂದ್ಯ ವಾಲಿತು. ಇದರಲ್ಲಿ ಸಮರ್ಥವಾಗಿ ಆಡಿದ ಭಾರತ 4-2 ಗೋಲುಗಳಿಂದ ಬ್ರಿಟನ್‌ ಸೋಲಿಸಿ ಸೆಮಿಸ್‌ ತಲುಪಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

38 seconds ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

6 mins ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

18 mins ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

2 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

2 hours ago