ಕ್ರೀಡೆ

Paris Olympics 2024: ಕುಸ್ತಿಯಲ್ಲಿ ಸೆಮಿಸ್‌ ತಲುಪಿದ ವಿನೇಶ್‌ ಫೋಗಾಟ್‌

ಪ್ಯಾರಿಸ್‌: ವಿಶ್ವವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನಲ್ಲಿ ಮಹಿಳೆಯರ ಫ್ರೀಸ್ಟೈಲ್ 50 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್‌ನಲ್ಲಿ ಒಕ್ಸಾನಾ ಲಿವಾಚ್ ಅವರನ್ನು ಸೋಲಿಸಿದ ಭಾರತದ ವಿನೇಶ್ ಫೋಗಟ್ ಮತ್ತೊಮ್ಮೆ ಅದ್ಭುತ ಪ್ರದರ್ಶನ ತೋರುವ ಮೂಲಕ ಸೆಮಿಫೈನಲ್ಸ್‌ ತಲುಪಿದರು.

ಉಕ್ರೇನ್‌ನ ಒಸ್ಕಾನ ವಿವಚ್‌ ವಿರುದ್ಧ ಕ್ವಾರ್ಟರ್‌ ಫೈನಲ್ಸ್‌ ಪಂದ್ಯದಲ್ಲಿ 7-5 ಅಂಗಳನ್ನು ಗಳಿಸುವ ಮೂಲಕ ಗೆಲುವು ಸಾಧಿಸಿ ಸೆಮಿಸ್‌ಗೆ ಅರ್ಹತೆ ಪಡೆದುಕೊಂಡರು.

ಉಕ್ರೇನ್‌ನ ವಿವಚ್‌ ವಿರುದ್ಧ ಪಂದ್ಯ ಆರಂಭದಿಂದಲೂ ರೋಚಕ ಹಣಾಹಣೆ ನಡೆದಿತ್ತು. ಇದರಲ್ಲಿ ಕೊನೆವರೆಗೂ ಮುನ್ನಡೆ ಕಾಯ್ದುಕೊಂಡ ಫೋಗಾಟ್‌ ಪಂದ್ಯದ ಮೇಲೆ ಹಿಡಿತ ಸಾಧಿಸಿ ಗೆಲುವಿನ ನಗೆ ಬೀರಿದರು. ಟೂರ್ನಿಯುದ್ದಕ್ಕೂ ಉತ್ತಮವಾಗಿ ಆಟವಾಡಿರುವ ಫೋಗಾಟ್‌ ಚಿನ್ನದ ಪದಕ ಗೆಲ್ಲುವ ನಿರೀಕ್ಷೆ ಹುಟ್ಟಿಸಿದ್ದಾರೆ.

ಈ ಪಂದ್ಯಕ್ಕೂ ಮೊದಲು ನಡೆದ ಎಲಿಮಿನೆಟರ್‌ ಸುತ್ತಿನಲ್ಲಿ ನಾಲ್ಕುಬಾರಿ ವಿಶ್ವ ಚಾಂಪಿಯನ್‌ ಜಪಾನಿನ ಯುಇ ಸುಸಾಕಿ ಅವರನ್ನು ವಿನೇಶಾ ಫೋಗಾಟ್‌ ಅವರು ಸೋಲಿಸಿ ದಾಖಲೆ ಬರೆದರು. ರೋಚಕ ಹಣಾಹಣೆಗೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಫೋಗಾಟ್‌, ಸುಸಾಕಿ ವಿರುದ್ಧ 3-2ರ ಅಂತದಿಂದ ಗೆಲುವು ದಾಖಲಿಸಿ ಕ್ವಾರ್ಟರ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು.

https://x.com/sportwalkmedia/status/1820774318751793372

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

10 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

11 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

11 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

11 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

12 hours ago