ಕ್ರೀಡೆ

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಇಂದು ತೆರೆ: ಸ್ಟೇಟ್‌ ಡಿ ಪ್ರಾನ್ಸ್‌ನಲ್ಲಿ ಕಾರ್ಯಕ್ರಮ

ಪ್ಯಾರಿಸ್:‌ ಜುಲೈ 26 ರಂದು ಆರಂಭಗೊಂಡ 33ನೇ ಒಲಿಂಪಿಕ್ಸ್‌ ಕ್ರೀಡಾ ಕೂಟಕ್ಕೆ ಇಂದು(ಆ.11) ಅದ್ದೂರಿ ತೆರೆ ಬೀಳಲಿದೆ.

ಸಮಾರೋಪ ಸಮಾರಂಭವು ಭಾರತೀಯ ಕಾಲಮಾನದ ಮಧ್ಯರಾತ್ರಿ 12:30ಕ್ಕೆ ಪ್ರಾರಂಭವಾಗಿ ನಸುಕಿನ ಜಾವ 3ರವರೆಗೆ ನಡೆಯುವ ಸಾಧ್ಯತೆ ಇದೆ.

ಸಮಾರೋಪ ಸಮಾರಂಭವು ಸಾಂಪ್ರದಾಯಿಕವಾಗಿ ಧ್ವಜಗಳ ಮೆರವಣಿಗೆಯೊಂದಿಗೆ ಪ್ರಾರಂಭವಾಗುತ್ತದೆ. ಪ್ರತಿ ರಾಷ್ಟ್ರದ ಕ್ರೀಡಾ ಪಟುಗಳು ತಮ್ಮ ದೇಶದ ಧ್ವಜದೊಂದಿಗೆ ಭಾಗವಹಿಸಲಿದ್ದಾರೆ. ಒಲಿಂಪಿಕ್ಸ್‌ ಪ್ರಾರಂಭವಾದಾಗಿನಿಂದ ಗ್ರೀಕ್‌ ಧ್ವಜಕ್ಕೆ ಮೆರವಣಿಗೆಯಲ್ಲಿ ಮೊದಲ ಸ್ಥಾನವಿದೆ.

ಇಂದಿನ ಸಮಾರೋಪ ಸಮಾರಂಭದಲ್ಲಿ ಕ್ರೀಡಾಕೂಟದ ಆತಿಥೇಯ ನಗರದ ಮೇಯರ್‌ ಒಲಿಂಪಿಕ್‌ ಧ್ವಜವನ್ನು ಒಲಿಂಪಿಕ್ಸ್‌ ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರಿಸುತ್ತಾರೆ. ಬಳಿಕ ಅವರು ಅದನ್ನು ಮುಂದಿನ ಆತಿಥೇಯ ನಗರದ ಮೇಯರ್‌ಗೆ ಕೊಡಲಿದ್ದಾರೆ. ಸಮಾರಂಭದಲ್ಲಿ ಅಧಿಕೃತ ಒಲಿಂಪಿಕ್ಸ್‌ ಧ್ವಜವನ್ನು ಸ್ವೀಕರಿಸುವ ಮೊದಲ ಕಪ್ಪು ವರ್ಣದ ಮಹಿಳೆ ಎಂಬ ಹೆಗ್ಗಳಿಕೆ ಲಾಸ್‌ ಏಂಜಲೀಸ್‌ನ ಮೇಯರ್‌ ಬಾಸ್‌ ಅವರದ್ದಾಗಲಿದೆ. ನಂತರ ಕೊನೆಯದಾಗಿ ಒಲಿಂಪಿಕ್ಸ್‌ ಜ್ಯೋತಿ ನಂದಿಸುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ ಮುಕ್ತಾಯಗೊಳ್ಳಲಿದೆ.

ಈ ಬಾರಿಯ ಒಲಿಂಪಿಕ್ಸ್‌ನಲ್ಲಿ 32 ಕ್ರೀಡಾಕೂಟಗಳಲ್ಲಿ 10ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ಪದಕಕ್ಕಾಗಿ ಸೆಣಸಾಟ ನಡೆಸಿದ್ದರು. ಭಾರತದಿಂದಲೂ ಒಟ್ಟು 117 ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಆದರೆ ಭಾರತಕ್ಕೆ ಈ ಬಾರಿ ನಿರೀಕ್ಷಿತ ಮಟ್ಟದ ಯಶಸ್ಸು ಸಿಗಲಿಲ್ಲ. ಈ ಒಲಿಂಪಿಕ್ಸ್‌ನಲ್ಲಿ‌ ಭಾರತ 6 ಪದಕಗಳನ್ನು ಗೆಲ್ಲಲಷ್ಟೇ ಶಕ್ತವಾಯಿತು. ಈ ಪೈಕಿ 1 ಬೆಳ್ಳಿ ಹಾಗೂ 5 ಕಂಚಿನ ಪದಕಗಳಾಗಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

7 mins ago

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

34 mins ago

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

1 hour ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

2 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

3 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago