ಕ್ರೀಡೆ

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಇಂದು ತೆರೆ: ಸ್ಟೇಟ್‌ ಡಿ ಪ್ರಾನ್ಸ್‌ನಲ್ಲಿ ಕಾರ್ಯಕ್ರಮ

ಪ್ಯಾರಿಸ್:‌ ಜುಲೈ 26 ರಂದು ಆರಂಭಗೊಂಡ 33ನೇ ಒಲಿಂಪಿಕ್ಸ್‌ ಕ್ರೀಡಾ ಕೂಟಕ್ಕೆ ಇಂದು(ಆ.11) ಅದ್ದೂರಿ ತೆರೆ ಬೀಳಲಿದೆ.

ಸಮಾರೋಪ ಸಮಾರಂಭವು ಭಾರತೀಯ ಕಾಲಮಾನದ ಮಧ್ಯರಾತ್ರಿ 12:30ಕ್ಕೆ ಪ್ರಾರಂಭವಾಗಿ ನಸುಕಿನ ಜಾವ 3ರವರೆಗೆ ನಡೆಯುವ ಸಾಧ್ಯತೆ ಇದೆ.

ಸಮಾರೋಪ ಸಮಾರಂಭವು ಸಾಂಪ್ರದಾಯಿಕವಾಗಿ ಧ್ವಜಗಳ ಮೆರವಣಿಗೆಯೊಂದಿಗೆ ಪ್ರಾರಂಭವಾಗುತ್ತದೆ. ಪ್ರತಿ ರಾಷ್ಟ್ರದ ಕ್ರೀಡಾ ಪಟುಗಳು ತಮ್ಮ ದೇಶದ ಧ್ವಜದೊಂದಿಗೆ ಭಾಗವಹಿಸಲಿದ್ದಾರೆ. ಒಲಿಂಪಿಕ್ಸ್‌ ಪ್ರಾರಂಭವಾದಾಗಿನಿಂದ ಗ್ರೀಕ್‌ ಧ್ವಜಕ್ಕೆ ಮೆರವಣಿಗೆಯಲ್ಲಿ ಮೊದಲ ಸ್ಥಾನವಿದೆ.

ಇಂದಿನ ಸಮಾರೋಪ ಸಮಾರಂಭದಲ್ಲಿ ಕ್ರೀಡಾಕೂಟದ ಆತಿಥೇಯ ನಗರದ ಮೇಯರ್‌ ಒಲಿಂಪಿಕ್‌ ಧ್ವಜವನ್ನು ಒಲಿಂಪಿಕ್ಸ್‌ ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರಿಸುತ್ತಾರೆ. ಬಳಿಕ ಅವರು ಅದನ್ನು ಮುಂದಿನ ಆತಿಥೇಯ ನಗರದ ಮೇಯರ್‌ಗೆ ಕೊಡಲಿದ್ದಾರೆ. ಸಮಾರಂಭದಲ್ಲಿ ಅಧಿಕೃತ ಒಲಿಂಪಿಕ್ಸ್‌ ಧ್ವಜವನ್ನು ಸ್ವೀಕರಿಸುವ ಮೊದಲ ಕಪ್ಪು ವರ್ಣದ ಮಹಿಳೆ ಎಂಬ ಹೆಗ್ಗಳಿಕೆ ಲಾಸ್‌ ಏಂಜಲೀಸ್‌ನ ಮೇಯರ್‌ ಬಾಸ್‌ ಅವರದ್ದಾಗಲಿದೆ. ನಂತರ ಕೊನೆಯದಾಗಿ ಒಲಿಂಪಿಕ್ಸ್‌ ಜ್ಯೋತಿ ನಂದಿಸುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ ಮುಕ್ತಾಯಗೊಳ್ಳಲಿದೆ.

ಈ ಬಾರಿಯ ಒಲಿಂಪಿಕ್ಸ್‌ನಲ್ಲಿ 32 ಕ್ರೀಡಾಕೂಟಗಳಲ್ಲಿ 10ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ಪದಕಕ್ಕಾಗಿ ಸೆಣಸಾಟ ನಡೆಸಿದ್ದರು. ಭಾರತದಿಂದಲೂ ಒಟ್ಟು 117 ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಆದರೆ ಭಾರತಕ್ಕೆ ಈ ಬಾರಿ ನಿರೀಕ್ಷಿತ ಮಟ್ಟದ ಯಶಸ್ಸು ಸಿಗಲಿಲ್ಲ. ಈ ಒಲಿಂಪಿಕ್ಸ್‌ನಲ್ಲಿ‌ ಭಾರತ 6 ಪದಕಗಳನ್ನು ಗೆಲ್ಲಲಷ್ಟೇ ಶಕ್ತವಾಯಿತು. ಈ ಪೈಕಿ 1 ಬೆಳ್ಳಿ ಹಾಗೂ 5 ಕಂಚಿನ ಪದಕಗಳಾಗಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago