ಕ್ರೀಡೆ

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಇಂದು ತೆರೆ: ಸ್ಟೇಟ್‌ ಡಿ ಪ್ರಾನ್ಸ್‌ನಲ್ಲಿ ಕಾರ್ಯಕ್ರಮ

ಪ್ಯಾರಿಸ್:‌ ಜುಲೈ 26 ರಂದು ಆರಂಭಗೊಂಡ 33ನೇ ಒಲಿಂಪಿಕ್ಸ್‌ ಕ್ರೀಡಾ ಕೂಟಕ್ಕೆ ಇಂದು(ಆ.11) ಅದ್ದೂರಿ ತೆರೆ ಬೀಳಲಿದೆ.

ಸಮಾರೋಪ ಸಮಾರಂಭವು ಭಾರತೀಯ ಕಾಲಮಾನದ ಮಧ್ಯರಾತ್ರಿ 12:30ಕ್ಕೆ ಪ್ರಾರಂಭವಾಗಿ ನಸುಕಿನ ಜಾವ 3ರವರೆಗೆ ನಡೆಯುವ ಸಾಧ್ಯತೆ ಇದೆ.

ಸಮಾರೋಪ ಸಮಾರಂಭವು ಸಾಂಪ್ರದಾಯಿಕವಾಗಿ ಧ್ವಜಗಳ ಮೆರವಣಿಗೆಯೊಂದಿಗೆ ಪ್ರಾರಂಭವಾಗುತ್ತದೆ. ಪ್ರತಿ ರಾಷ್ಟ್ರದ ಕ್ರೀಡಾ ಪಟುಗಳು ತಮ್ಮ ದೇಶದ ಧ್ವಜದೊಂದಿಗೆ ಭಾಗವಹಿಸಲಿದ್ದಾರೆ. ಒಲಿಂಪಿಕ್ಸ್‌ ಪ್ರಾರಂಭವಾದಾಗಿನಿಂದ ಗ್ರೀಕ್‌ ಧ್ವಜಕ್ಕೆ ಮೆರವಣಿಗೆಯಲ್ಲಿ ಮೊದಲ ಸ್ಥಾನವಿದೆ.

ಇಂದಿನ ಸಮಾರೋಪ ಸಮಾರಂಭದಲ್ಲಿ ಕ್ರೀಡಾಕೂಟದ ಆತಿಥೇಯ ನಗರದ ಮೇಯರ್‌ ಒಲಿಂಪಿಕ್‌ ಧ್ವಜವನ್ನು ಒಲಿಂಪಿಕ್ಸ್‌ ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರಿಸುತ್ತಾರೆ. ಬಳಿಕ ಅವರು ಅದನ್ನು ಮುಂದಿನ ಆತಿಥೇಯ ನಗರದ ಮೇಯರ್‌ಗೆ ಕೊಡಲಿದ್ದಾರೆ. ಸಮಾರಂಭದಲ್ಲಿ ಅಧಿಕೃತ ಒಲಿಂಪಿಕ್ಸ್‌ ಧ್ವಜವನ್ನು ಸ್ವೀಕರಿಸುವ ಮೊದಲ ಕಪ್ಪು ವರ್ಣದ ಮಹಿಳೆ ಎಂಬ ಹೆಗ್ಗಳಿಕೆ ಲಾಸ್‌ ಏಂಜಲೀಸ್‌ನ ಮೇಯರ್‌ ಬಾಸ್‌ ಅವರದ್ದಾಗಲಿದೆ. ನಂತರ ಕೊನೆಯದಾಗಿ ಒಲಿಂಪಿಕ್ಸ್‌ ಜ್ಯೋತಿ ನಂದಿಸುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ ಮುಕ್ತಾಯಗೊಳ್ಳಲಿದೆ.

ಈ ಬಾರಿಯ ಒಲಿಂಪಿಕ್ಸ್‌ನಲ್ಲಿ 32 ಕ್ರೀಡಾಕೂಟಗಳಲ್ಲಿ 10ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ಪದಕಕ್ಕಾಗಿ ಸೆಣಸಾಟ ನಡೆಸಿದ್ದರು. ಭಾರತದಿಂದಲೂ ಒಟ್ಟು 117 ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಆದರೆ ಭಾರತಕ್ಕೆ ಈ ಬಾರಿ ನಿರೀಕ್ಷಿತ ಮಟ್ಟದ ಯಶಸ್ಸು ಸಿಗಲಿಲ್ಲ. ಈ ಒಲಿಂಪಿಕ್ಸ್‌ನಲ್ಲಿ‌ ಭಾರತ 6 ಪದಕಗಳನ್ನು ಗೆಲ್ಲಲಷ್ಟೇ ಶಕ್ತವಾಯಿತು. ಈ ಪೈಕಿ 1 ಬೆಳ್ಳಿ ಹಾಗೂ 5 ಕಂಚಿನ ಪದಕಗಳಾಗಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

20 mins ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

24 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

30 mins ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

42 mins ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

45 mins ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

1 hour ago