ಕ್ರೀಡೆ

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಇಂದು ತೆರೆ: ಸ್ಟೇಟ್‌ ಡಿ ಪ್ರಾನ್ಸ್‌ನಲ್ಲಿ ಕಾರ್ಯಕ್ರಮ

ಪ್ಯಾರಿಸ್:‌ ಜುಲೈ 26 ರಂದು ಆರಂಭಗೊಂಡ 33ನೇ ಒಲಿಂಪಿಕ್ಸ್‌ ಕ್ರೀಡಾ ಕೂಟಕ್ಕೆ ಇಂದು(ಆ.11) ಅದ್ದೂರಿ ತೆರೆ ಬೀಳಲಿದೆ.

ಸಮಾರೋಪ ಸಮಾರಂಭವು ಭಾರತೀಯ ಕಾಲಮಾನದ ಮಧ್ಯರಾತ್ರಿ 12:30ಕ್ಕೆ ಪ್ರಾರಂಭವಾಗಿ ನಸುಕಿನ ಜಾವ 3ರವರೆಗೆ ನಡೆಯುವ ಸಾಧ್ಯತೆ ಇದೆ.

ಸಮಾರೋಪ ಸಮಾರಂಭವು ಸಾಂಪ್ರದಾಯಿಕವಾಗಿ ಧ್ವಜಗಳ ಮೆರವಣಿಗೆಯೊಂದಿಗೆ ಪ್ರಾರಂಭವಾಗುತ್ತದೆ. ಪ್ರತಿ ರಾಷ್ಟ್ರದ ಕ್ರೀಡಾ ಪಟುಗಳು ತಮ್ಮ ದೇಶದ ಧ್ವಜದೊಂದಿಗೆ ಭಾಗವಹಿಸಲಿದ್ದಾರೆ. ಒಲಿಂಪಿಕ್ಸ್‌ ಪ್ರಾರಂಭವಾದಾಗಿನಿಂದ ಗ್ರೀಕ್‌ ಧ್ವಜಕ್ಕೆ ಮೆರವಣಿಗೆಯಲ್ಲಿ ಮೊದಲ ಸ್ಥಾನವಿದೆ.

ಇಂದಿನ ಸಮಾರೋಪ ಸಮಾರಂಭದಲ್ಲಿ ಕ್ರೀಡಾಕೂಟದ ಆತಿಥೇಯ ನಗರದ ಮೇಯರ್‌ ಒಲಿಂಪಿಕ್‌ ಧ್ವಜವನ್ನು ಒಲಿಂಪಿಕ್ಸ್‌ ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರಿಸುತ್ತಾರೆ. ಬಳಿಕ ಅವರು ಅದನ್ನು ಮುಂದಿನ ಆತಿಥೇಯ ನಗರದ ಮೇಯರ್‌ಗೆ ಕೊಡಲಿದ್ದಾರೆ. ಸಮಾರಂಭದಲ್ಲಿ ಅಧಿಕೃತ ಒಲಿಂಪಿಕ್ಸ್‌ ಧ್ವಜವನ್ನು ಸ್ವೀಕರಿಸುವ ಮೊದಲ ಕಪ್ಪು ವರ್ಣದ ಮಹಿಳೆ ಎಂಬ ಹೆಗ್ಗಳಿಕೆ ಲಾಸ್‌ ಏಂಜಲೀಸ್‌ನ ಮೇಯರ್‌ ಬಾಸ್‌ ಅವರದ್ದಾಗಲಿದೆ. ನಂತರ ಕೊನೆಯದಾಗಿ ಒಲಿಂಪಿಕ್ಸ್‌ ಜ್ಯೋತಿ ನಂದಿಸುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ ಮುಕ್ತಾಯಗೊಳ್ಳಲಿದೆ.

ಈ ಬಾರಿಯ ಒಲಿಂಪಿಕ್ಸ್‌ನಲ್ಲಿ 32 ಕ್ರೀಡಾಕೂಟಗಳಲ್ಲಿ 10ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ಪದಕಕ್ಕಾಗಿ ಸೆಣಸಾಟ ನಡೆಸಿದ್ದರು. ಭಾರತದಿಂದಲೂ ಒಟ್ಟು 117 ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಆದರೆ ಭಾರತಕ್ಕೆ ಈ ಬಾರಿ ನಿರೀಕ್ಷಿತ ಮಟ್ಟದ ಯಶಸ್ಸು ಸಿಗಲಿಲ್ಲ. ಈ ಒಲಿಂಪಿಕ್ಸ್‌ನಲ್ಲಿ‌ ಭಾರತ 6 ಪದಕಗಳನ್ನು ಗೆಲ್ಲಲಷ್ಟೇ ಶಕ್ತವಾಯಿತು. ಈ ಪೈಕಿ 1 ಬೆಳ್ಳಿ ಹಾಗೂ 5 ಕಂಚಿನ ಪದಕಗಳಾಗಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

35 mins ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

37 mins ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

42 mins ago

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…

44 mins ago

ಕೊಡಗಿನಲ್ಲಿ ಮತ್ತೆ ಭಾರೀ ಮಳೆ: ತ್ರಿವೇಣಿ ಸಂಗಮ ಜಲಾವೃತ

ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…

47 mins ago

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

6 hours ago