ಕ್ರೀಡೆ

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಇಂದು ತೆರೆ: ಸ್ಟೇಟ್‌ ಡಿ ಪ್ರಾನ್ಸ್‌ನಲ್ಲಿ ಕಾರ್ಯಕ್ರಮ

ಪ್ಯಾರಿಸ್:‌ ಜುಲೈ 26 ರಂದು ಆರಂಭಗೊಂಡ 33ನೇ ಒಲಿಂಪಿಕ್ಸ್‌ ಕ್ರೀಡಾ ಕೂಟಕ್ಕೆ ಇಂದು(ಆ.11) ಅದ್ದೂರಿ ತೆರೆ ಬೀಳಲಿದೆ.

ಸಮಾರೋಪ ಸಮಾರಂಭವು ಭಾರತೀಯ ಕಾಲಮಾನದ ಮಧ್ಯರಾತ್ರಿ 12:30ಕ್ಕೆ ಪ್ರಾರಂಭವಾಗಿ ನಸುಕಿನ ಜಾವ 3ರವರೆಗೆ ನಡೆಯುವ ಸಾಧ್ಯತೆ ಇದೆ.

ಸಮಾರೋಪ ಸಮಾರಂಭವು ಸಾಂಪ್ರದಾಯಿಕವಾಗಿ ಧ್ವಜಗಳ ಮೆರವಣಿಗೆಯೊಂದಿಗೆ ಪ್ರಾರಂಭವಾಗುತ್ತದೆ. ಪ್ರತಿ ರಾಷ್ಟ್ರದ ಕ್ರೀಡಾ ಪಟುಗಳು ತಮ್ಮ ದೇಶದ ಧ್ವಜದೊಂದಿಗೆ ಭಾಗವಹಿಸಲಿದ್ದಾರೆ. ಒಲಿಂಪಿಕ್ಸ್‌ ಪ್ರಾರಂಭವಾದಾಗಿನಿಂದ ಗ್ರೀಕ್‌ ಧ್ವಜಕ್ಕೆ ಮೆರವಣಿಗೆಯಲ್ಲಿ ಮೊದಲ ಸ್ಥಾನವಿದೆ.

ಇಂದಿನ ಸಮಾರೋಪ ಸಮಾರಂಭದಲ್ಲಿ ಕ್ರೀಡಾಕೂಟದ ಆತಿಥೇಯ ನಗರದ ಮೇಯರ್‌ ಒಲಿಂಪಿಕ್‌ ಧ್ವಜವನ್ನು ಒಲಿಂಪಿಕ್ಸ್‌ ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರಿಸುತ್ತಾರೆ. ಬಳಿಕ ಅವರು ಅದನ್ನು ಮುಂದಿನ ಆತಿಥೇಯ ನಗರದ ಮೇಯರ್‌ಗೆ ಕೊಡಲಿದ್ದಾರೆ. ಸಮಾರಂಭದಲ್ಲಿ ಅಧಿಕೃತ ಒಲಿಂಪಿಕ್ಸ್‌ ಧ್ವಜವನ್ನು ಸ್ವೀಕರಿಸುವ ಮೊದಲ ಕಪ್ಪು ವರ್ಣದ ಮಹಿಳೆ ಎಂಬ ಹೆಗ್ಗಳಿಕೆ ಲಾಸ್‌ ಏಂಜಲೀಸ್‌ನ ಮೇಯರ್‌ ಬಾಸ್‌ ಅವರದ್ದಾಗಲಿದೆ. ನಂತರ ಕೊನೆಯದಾಗಿ ಒಲಿಂಪಿಕ್ಸ್‌ ಜ್ಯೋತಿ ನಂದಿಸುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ ಮುಕ್ತಾಯಗೊಳ್ಳಲಿದೆ.

ಈ ಬಾರಿಯ ಒಲಿಂಪಿಕ್ಸ್‌ನಲ್ಲಿ 32 ಕ್ರೀಡಾಕೂಟಗಳಲ್ಲಿ 10ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ಪದಕಕ್ಕಾಗಿ ಸೆಣಸಾಟ ನಡೆಸಿದ್ದರು. ಭಾರತದಿಂದಲೂ ಒಟ್ಟು 117 ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಆದರೆ ಭಾರತಕ್ಕೆ ಈ ಬಾರಿ ನಿರೀಕ್ಷಿತ ಮಟ್ಟದ ಯಶಸ್ಸು ಸಿಗಲಿಲ್ಲ. ಈ ಒಲಿಂಪಿಕ್ಸ್‌ನಲ್ಲಿ‌ ಭಾರತ 6 ಪದಕಗಳನ್ನು ಗೆಲ್ಲಲಷ್ಟೇ ಶಕ್ತವಾಯಿತು. ಈ ಪೈಕಿ 1 ಬೆಳ್ಳಿ ಹಾಗೂ 5 ಕಂಚಿನ ಪದಕಗಳಾಗಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

11 mins ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

15 mins ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

20 mins ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

3 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

3 hours ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

4 hours ago