ಕ್ರೀಡೆ

IPL-2024: ಹೈದರಾಬಾದ್‌ ತಂಡಕ್ಕೆ ನೂತನ ಸಾರಥಿ ನೇಮಕ

IPL-2024ರ 17 ನೇ ಆವೃತ್ತಿಗೆ ಎಲ್ಲಾ ತಂಡಗಳು ತಯಾರಿ ಆರಂಭಿಸಿದ್ದು, ಈ ಬೆನ್ನಲ್ಲೇ ಎಸ್‌ಆರ್‌ಎಚ್‌ (ಸನ್‌ ರೈಸರ್ಸ್‌ ಹೈದರಾಬಾದ್‌) ತಂಡ ಮುಂಬರುವ ಆವೃತ್ತಿಗೆ ತಮ್ಮ ತಂಡದ ನೂತನ ನಾಯಕನನ್ನು ಘೋಷಿಸಿದೆ.

ಮುಂಬೈಗೆ ಪಾಂಡ್ಯ ನಾಯಕನೆಂದು ಘೋಷಿಸಿ ಅಚ್ಚರಿ ಮೂಡಿಸಿದ ಕೆಲವು ದಿನಗಳ ನಂತರ ಹೈದರಾಬಾದ್‌ ಸಹಾ ನಾಯಕನನ್ನು ಬದಲಾಯಿಸಿದ್ದು, ಮಾರ್ಕ್ರಂಗೆ ಕೋಕ್‌ ನೀಡಿದೆ.

IPL-2024ರ ಆರಂಭಕ್ಕೂ ಮುನ್ನಾ ನಡೆದ ಹರಾಜಿನಲ್ಲಿ ಅತ್ಯಧಿಕ ಬೆಲೆಗೆ ಎಸ್‌ಆರ್‌ಎಚ್‌ ತಂಡಕ್ಕೆ ಸೇಲ್‌ ಆದ ಆಸ್ಟ್ರೇಲಿಯಾ ನಾಯಕ ಪ್ಯಾಟ್‌ ಕಮಿನ್ಸ್‌ ಅವರನ್ನು ನೂತನ ನಾಯಕನಾಗಿ ನೇಮಕ ಮಾಡಲಾಗಿದ್ದು, ಪ್ಯಾಟ್‌ ತಂಡವನ್ನು ಮುನ್ನಡೆಸಲಿದ್ದಾರೆ. ಈ ಹಿಂದಿನ ಅವಧಿಯಲ್ಲಿ ದ. ಆಫ್ರಿಕಾದ ಐಡೆನ್‌ ಮಾರ್ಕ್ರಂ ಹೈದರಾಬಾದ್‌ ತಂಡವನ್ನು ಮುನ್ನಡೆಸಿದ್ದರು.

ಆಸೀಸ್‌ ಪರ ಯಶಸ್ವಿ ನಾಯಕರಲ್ಲಿ ಒಬ್ಬರಾಗಿರುವ ಪ್ಯಾಟ್‌ ಕಮಿನ್ಸ್‌ ಆಸೀಸ್‌ ಪರ ಡಬ್ಲ್ಯೂಟಿಸಿ, ವಿಶ್ವಕಪ್‌ ಗೆದ್ದ ನಾಯಕ ಎಂಬ ಹೆಗ್ಗಳಿಕೆ ಇವರು ಪಾತ್ರರಾಗಿದ್ದರು. ಇದೀಗ ಅವರು ಹೈದರಾಬಾದ್‌ ತಂಡವನ್ನು ಮುನ್ನಡೆಸಲಿದ್ದಾರೆ.

ಬೌಲಿಂಗ್‌ ಆಲ್‌ರೌಂಡರ್‌ ಆಗಿರುವ ಪ್ಯಾಟ್‌, ಈ ಹಿಂದೆ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಪರವಾಗಿ ಆಡಿದ್ದರು. ಈ ಆಟಗಾರನನ್ನು ಹೈದರಾಬಾದ್‌ ಈ ಬಾರಿಯ ಹರಾಜಿನಲ್ಲಿ ಬರೋಬ್ಬರಿ 20.50 ಕೋಟಿ ರೂಗೆ ಖರೀದಿಸಿದೆ. ಆ ಮೂಲಕ ಐಪಿಎಲ್‌ನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಸೇಲ್‌ ಆದ ಎರಡನೇ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

ಕಾಕತಾಳಿಯ ಎಂಬಂತೆ ಹೈದರಾಬಾದ್‌ ಪರ ಆಸೀಸ್‌ ಆಟಗಾರರು ನಾಯಕರಾದಾಗಲೆಲ್ಲಾ ತಂಡ ಟ್ರೋಫಿ ಗೆದ್ದಿದೆ. 2008 ರಲ್ಲಿ ಡೆಕ್ಕನ್‌ ಚಾರ್ಜರ್ಸ್‌ ಹೈದರಾಬಾದ್‌ ತಂಡಕ್ಕೆ ಆಸೀಸ್‌ ಕೀಪರ್‌ ಆಡಂ ಗಿಲ್‌ಕ್ರಿಸ್ಟ್‌ ನಾಯಕರಾಗಿದ್ದರು. ಐಪಿಎಲ್‌ನ ಚೊಚ್ಚಲ ಟೂರ್ನಿಯನ್ನು ಹೈದರಾಬಾದ್‌ ಗೆದ್ದು ಬೀಗಿತ್ತು.

ನಂತರ 2016 ರಲ್ಲಿ ವಾರ್ನರ್‌ ನಾಯಕನಾದ ಮೇಲೆ, ಫೈನಲ್‌ನಲ್ಲಿ ಆರ್‌ಸಿಬಿಯನ್ನು ಸೋಲಿಸಿ ಎರಡನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿತು. ಇದೀಗ 2024ರ ಆವೃತ್ತಿಗೆ ಪ್ಯಾಟ್‌ ನಾಯಕರಾಗಿದ್ದು, ಎಸ್‌ಆರ್‌ಎಚ್‌ ಟ್ರೋಫಿ ಗೆಲ್ಲಲಿದೆ ಎಂದು ಕ್ರಿಕೆಟ್‌ ಅಭಿಮಾನಿಗಳು ಲೆಕ್ಕಾಚಾರ ಹಾಕಿದ್ದಾರೆ.

ಯಶಸ್ವಿ ನಾಯಕರಲ್ಲಿ ಒಬ್ಬರಾದ ಪ್ಯಾಟ್‌ ಸದ್ಯ ಹೈದರಾಬಾದ್‌ ನಾಯಕರಾಗಿದ್ದು, ಅವರ ನಾಯಕತ್ವದಿಂದ ಎಸ್‌ಆರ್‌ಎಚ್‌ಗೆ ವರದಾನವಾಗಲಿದೆಯಾ? ಇಲ್ಲವಾ? ಎಂಬುದನ್ನು ಕಾದುನೋಡಬೇಕಿದೆ.

andolana

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

46 seconds ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

25 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

45 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago